ಸಾಗರದ ಮೆಡಿಕಲ್ ಶಾಪ್‌ಗಳ ಮೇಲೆ ದಿಢೀರ್ ದಾಳಿ, ದಂಡ

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA | 24 ಏಪ್ರಿಲ್ 2020 ಹೆಚ್ಚಿನ ಬೆಲೆಗೆ ಮಾಸ್ಕ್‌ ಮತ್ತು ಸ್ಯಾನಿಟೈಸರ್‌ ಮಾರಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆ ಕಾನೂನು ಮಾಪನ ಶಾಸ್ತ್ರ ಇಲಾಖೆ ಅಧಿಕಾರಿಗಳು ಮೆಡಿಕಲ್‌ ಶಾಪ್‌ಗಳ ಮೇಲೆ ದಾಳಿ ನಡೆಸಿದ್ದಾರೆ. ಐದು ಸಾವಿರ ರೂಪಾಯಿ ದಂಡವನ್ನು ವಿಧಿಸಿದ್ದಾರೆ. ಸಾಗರ ಪಟ್ಟಣದ ವಿವಿಧೆಡೆ ಆರೋಪದ ಹಿನ್ನೆಲೆ ದಾಳಿ ನಡೆಸಲಾಗಿದೆ. ಐದು ಅಂಗಡಿಗಳ ಮೇಲೆ ರೇಡ್‌ ಮಾಡಿ, ಸ್ಯಾಂಪಲ್‌ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಇಲಾಖೆಯ ಸಹಾಯಕ ನಿಯಂತ್ರಕ ಹೆಚ್.ಎಸ್.ರಾಜು, ನಿರೀಕ್ಷಕ ಹೆಚ್.ಎಸ್.ವಸಂತಕುಮಾರ್‌, ಧನಲಕ್ಷ್ಮಿ, … Read more

ಮತ್ತಿಬ್ಬರು ಮಹಿಳೆಯರಿಗೆ KFD ಪಾಸಿಟಿವ್, ಕರೋನ ಆತಂಕದ ಮಧ್ಯೆ ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಾಗ್ತಿದೆ ಕೇಸ್

KFD Van By VDL Lab in Shimoga Mangana Kayale 1

ಶಿವಮೊಗ್ಗ ಲೈವ್.ಕಾಂ | SHIMOGA | 22 ಏಪ್ರಿಲ್ 2020 ಜಿಲ್ಲೆಯಲ್ಲಿ ಮತ್ತಿಬ್ಬರಿಗೆ ಮಂಗನ ಕಾಯಿಲೆ ಪಾಸಿಟಿವ್ ಬಂದಿದೆ. ಇದರಿಂದ ಶಿವಮೊಗ್ಗದಲ್ಲಿ ಸೋಂಕಿತರ ಸಂಖ್ಯೆ 160ಕ್ಕೆ ಏರಿಕೆಯಾಗಿದೆ. ಎಲ್ಲೆಲ್ಲಿ ಸೋಂಕು ಪತ್ತೆಯಾಗಿದೆ? ತೀರ್ಥಹಳ್ಳಿ ತಾಲೂಕಿನ ಕನ್ನಂಗಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಗ್ರಾಮವೊಂದರ ಮಹಿಳೆಯೊಬ್ಬರಿಗೆ ಕೆಎಫ್‍ಡಿ ಪಾಸಿಟಿವ್ ಬಂದಿದೆ. ಮತ್ತೊಂದೆಡೆ ಸಾಗರ ತಾಲೂಕು ಹೆನ್ನಿ ಗ್ರಾಮದ ಮಹಿಳೆಯೊಬ್ಬರಲ್ಲಿ ಕೆಎಫ್‍ಡಿ ಸೋಂಕು ಪತ್ತೆಯಾಗಿದೆ. 160ಕ್ಕೆ ಏರಿದ ಸೋಂಕಿತರ ಸಂಖ್ಯೆ ಕೆಎಫ್‍ಡಿ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಲೆ ಇದೆ. ತೀರ್ಥಹಳ್ಳಿ ತಾಲೂಕಿನಲ್ಲಿ … Read more

ಸಾಗರದಲ್ಲಿ ತರಕಾರಿ ಮಾರಾಟಕ್ಕೆ ರೈತರಿಗೆ ಜಾಗ ಫಿಕ್ಸ್, ಎಲ್ಲೆಲ್ಲಿ ಮಾರಾಟ ಮಾಡಬಹುದು? ಟೈಮಿಂಗ್ ಏನು?

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA | 21 ಏಪ್ರಿಲ್ 2020 ಲಾಕ್‍ಡೌನ್ ನೆಪದಲ್ಲಿ ರೈತರಿಗೆ ತೊಂದರೆ ಆಗಬಾರದು. ರೈತರು ಬೆಳೆದ ಬೆಳೆಯನ್ನು ಪಟ್ಟಣದಲ್ಲಿ ಮಾರಾಟಕ್ಕೆ ತಾಲೂಕು ಪಂಚಾಯಿತಿ ವತಿಯಿಂದ ವ್ಯವಸ್ಥೆ ಮಾಡಲಾಗುತ್ತೆ ಎಂದು ಸಾಗರ ಶಾಸಕ ಹರತಾಳು ಹಾಲಪ್ಪ ಅಭಯ ನೀಡಿದ್ದಾರೆ. ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಶಾಸಕ ಹಾಲಪ್ಪ, ಸಾಗರ ನ್ಯಾಯಾಲಯದ ಎದುರಿನ ಒಂದು ಭಾಗ, ಜೋಗ ಖಾಸಗಿ ಬಸ್ ನಿಲ್ದಾಣ, ಪೊಲೀಸ್ ಠಾಣೆ ಮುಂಭಾಗದ ಚಾಮರಾಜಪೇಟೆ ರಸ್ತೆ, ಹಳ್ಳಿಗಳಿಂದ ನಗರಕ್ಕೆ … Read more

ಅಧ್ಯಕ್ಷರ ಕೊಠಡಿಗೆ ಬೀಗ ಹಾಕಿದ ಪ್ರಕರಣಕ್ಕೆ ಟ್ವಿಸ್ಟ್, ಸದಸ್ಯರ ವಿರುದ್ಧ ಪೊಲೀಸ್ ಕೇಸ್ಗೆ ಸೂಚನೆ, ಅನುಪಾಲನ ವರದಿಗೆ ಆಗ್ರಹ

200420 TP President Office Door Locked 1

ಶಿವಮೊಗ್ಗ ಲೈವ್.ಕಾಂ | SAGARA | 21 ಏಪ್ರಿಲ್ 2020 ಸಾಗರ ತಾಲೂಕು ಪಂಚಾಯಿತಿ ಅಧ್ಯಕ್ಷರ ಕೊಠಡಿಗೆ ಬೀಗ ಹಾಕಿದ ಪ್ರಕರಣ ಮತ್ತೊಂದು ಟ್ವಿಸ್ಟ್  ಪಡೆದುಕೊಂಡಿದೆ. ಬೀಗ ಹಾಕಿದವರ ವಿರುದ್ಧ ದೂರು ನೀಡುವಂತೆ ಆದೇಶಿಸಿ ತಾಲೂಕು ಪಂಚಾಯಿತಿ ಇಒಗೆ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಸೂಚನೆ ನೀಡಿದ್ದಾರೆ. ಅಧ್ಯಕ್ಷರ ಕೊಠಡಿಗೆ ಬೀಗ ಹಾಕಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಹಾಗಾಗಿ ಬೀಗ ಹಾಕಿದವರ ವಿರುದ್ಧ ಕೂಡಲೇ ದೂರು ದಾಖಲಿಸಿ ಅನುಪಾಲನ ವರದಿ ನೀಡುವಂತೆ ಇಒಗೆ ಪತ್ರ ಬರೆದು ಸೂಚಿಸಿದ್ದಾರೆ. ಕೆಲವು … Read more

ಅಧ್ಯಕ್ಷರ ಕೊಠಡಿಗೆ ಸದಸ್ಯರಿಂದಲೇ ಬೀಗ, ತಾರಕಕ್ಕೇರಿದ ಅವಿಶ್ವಾಸ ಕದನ

200420 TP President Office Door Locked 1

ಶಿವಮೊಗ್ಗ ಲೈವ್.ಕಾಂ | SAGARA | 20 ಏಪ್ರಿಲ್ 2020 ಸಾಗರ ತಾಲೂಕು ಪಂಚಾಯಿತಿ ಅಧ್ಯಕ್ಷರ ವಿರುದ್ಧ ಸದಸ್ಯರ ಅಸಮಾಧಾನ ಮತ್ತೊಂದು ಹಂತಕ್ಕೆ ತಲುಪಿದೆ. ಇವತ್ತು ಅಧ್ಯಕ್ಷರ ಕೊಠಡಿಗೆ ಸದಸ್ಯರೆ ಬೀಗ ಹಾಕಿ ಪ್ರತಿರೋಧ ತೋರಿಸಿದ್ದಾರೆ. ಬೀಗ ಹಾಕಲು ಕಾರಣವೇನು? ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ನಾಲ್ಕು ವರ್ಷದಿಂದ ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಹನ್ನೊಂದು ಸದಸ್ಯರು ಅವಿಶ್ವಾಸ ನಿರ್ಣಯ ಮಂಡಿಸಿದ್ದರು. ಈ ಸಂಬಂಧ ಎರಡು ಸಭೆಗಳನ್ನು ನಡೆಸಲಾಗಿದೆ. ಉಪಾಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ಒಂದು ಸಭೆಯಲ್ಲಿ … Read more

ಆನಂದಪುರ ಸುತ್ತಮುತ್ತ ಗ್ರಾಮಗಳಲ್ಲಿ ಭಾರಿ ಗಾಳಿ, ಮಳೆ, ಮನೆಗಳ ಮೇಲೆ ಬಿದ್ದ ಮರ, ಯುವತಿಗೆ ಗಾಯ

050420 Tree Fall on Houses 1

ಶಿವಮೊಗ್ಗ ಲೈವ್.ಕಾಂ | SAGARA | 5 ಏಪ್ರಿಲ್ 2020 ಆನಂದಪುರ ಸುತ್ತಮುತ್ತ ಶನಿವಾರ ಭಾರಿ ಗಾಳಿ, ಮಳೆಯಾಗಿದೆ. ಗಾಳಿಯ ರಭಸಕ್ಕೆ ಮರಗಳು ಬುಡಮೇಲಾಗಿದ್ದು, ಮನೆಗಳ ಮೇಲೆ ಉರುಳಿವೆ. ಇದರಿಂದ ಅಪಾರ ನಷ್ಟ ಉಂಟಾಗಿದೆ. ಚನ್ನಶೆಟ್ಟಿಕೊಪ್ಪ ಗ್ರಾಮದ ಮೋಹನ್ ವಜ್ರಪ್ಪ ಎಂಬುವವರ ಮನೆ ಮೇಲೆ ತೆಂಗಿನ ಮರ ಬಿದ್ದು ಮೇಲ್ಛಾವಣಿ ಜಖಂ ಆಗಿದೆ. ಮನೆಯೊಳಗಿದ್ದ ಮೇಘಾ (20) ಎಂಬ ಯುವತಿ ತಲೆ ಮೇಲೆ ಹೆಂಚು ಮತ್ತು ರೀಪು ಬಿದ್ದು ಪೆಟ್ಟಾಗಿದೆ. ಗಾಯಾಳುವನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲು … Read more

ಗಾಂಜಾ ಮಾರಲು ತೆರಳುತ್ತಿದ್ದವರ ಮೇಲೆ ಪೊಲೀಸ್ ರೇಡ್, ಮಗ ಅರೆಸ್ಟ್, ಅಪ್ಪ ಎಸ್ಕೇಪ್

Sagara Rural Police Station

ಶಿವಮೊಗ್ಗ ಲೈವ್.ಕಾಂ | SHIMOGA | 4 ಏಪ್ರಿಲ್ 2020 ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯೊಬ್ಬನನ್ನು ಸಾಗರ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಅರೆಸ್ಟ್ ಮಾಡಿದ್ದಾರೆ. ಮತ್ತೊಬ್ಬ ಆರೋಪಿ ಎಸ್ಕೇಪ್ ಆಗಿದ್ದಾನೆ. ಗಾಂಜಾ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದರು. ಉಳುವಿಯಿಂದ ಸಾಗರದ ಕಡೆಗೆ ಬೈಕ್’ನಲ್ಲಿ ತೆರೆಳುತ್ತಿದ್ದ ಇಬ್ಬರ ಮೇಲೆ ದಾಳಿ ನಡೆಸಿ, ಒಂದು ಕೆ.ಜಿ. ನೂರು ಗ್ರಾಂ ಒಣ ಗಾಂಜಾ ವಶಕ್ಕೆ ಪಡೆಯಲಾಗಿದೆ. ಬೈಕ್ ಚಲಾಯಿಸುತ್ತಿದ್ದ ಸೊರಬ ತಾಲೂಕಿನ ಉಳವಿ ಗ್ರಾಮದ ಜನತಾ … Read more

ಕಾರು ಚಾಲಕ, ಪತ್ನಿ ಆತ್ಮಹತ್ಯೆ ಪ್ರಕರಣ, ಸಾಗರದಲ್ಲಿ ಮೌನ ಪ್ರತಿಭಟನೆ

160320 Protest Against Car Driver Suicide 1

ಶಿವಮೊಗ್ಗ ಲೈವ್.ಕಾಂ | SAGARA | 16 ಮಾರ್ಚ್ 2020 ಕಾರು ಚಾಲಕ ಹರ್ಷಕುಮಾರ್ ಮತ್ತು ಅವರ ಪತ್ನಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಓಡಿಗೆ ವಹಿಸಬೇಕು ಎಂದು ವಿವಿಧ ಸಂಘಟನೆಗಳು ಸಾಗರದಲ್ಲಿ ಇವತ್ತು ಮೌನ ಪ್ರತಿಭಟನೆ ನಡೆಸಿದವು. ಉಪ ವಿಭಾಗಾಧಿಕಾರಿ ಕಚೇರಿ ಮುಂದೆ ಮೌನ ಪ್ರತಿಭಟನೆ ನಡೆಸಿದ ವಿವಿಧ ಸಂಘಟನೆಗಳು, ಪ್ರಕರಣದ ತನಿಖೆಯನ್ನು ಸಿಓಡಿಗೆ ವಹಿಸಬೇಕು. ಹರ್ಷಕುಮಾರ್ ಅವರ ಆತ್ಮಹತ್ಯೆ ಪ್ರಕರಣದ ಹಿಂದೆ ಕಾಣದ ಕೈಗಳಿವೆ ಎಂದು ಆರೋಪಿಸಿದರು. ಹರ್ಷಕುಮಾರ್ ಅವರ ಸಹೋದರಿ ಆಶಾರಾಣಿ, ಪ್ರಮುಖರಾದ ಗಿರೀಶ್ … Read more

ವಿಶ್ವವಿಖ್ಯಾತ ಜೋಗ ಜಲಪಾತಕ್ಕೂ ತಟ್ಟಿದ ಮಹಾಮಾರಿ ಕರೋನ ಬಿಸಿ

160320 Jog Falls Closed due to corona 1

ಶಿವಮೊಗ್ಗ ಲೈವ್.ಕಾಂ | SHIMOGA | 16 ಮಾರ್ಚ್ 2020 ವಿಶ್ವವಿಖ್ಯಾತ ಜೋಗ ಜಲಪಾತಕ್ಕೂ ಕರೋನ ಬಿಸಿ ತಟ್ಟಿದೆ. ಕರೋನಾ ವೈರಸ್ ಆತಂಕದ ಹಿನ್ನೆಲೆಯಲ್ಲಿ ಜೋಗ ಜಲಪಾತದ ಗೇಟ್’ಗೆ ಬೀಗ ಹಾಕಲಾಗಿದೆ. ಪ್ರವಾಸಿಗರು ಬರುವುದನ್ನು ನಿರ್ಬಂಧಿಸಲು ಗೇಟ್ ಮುಚ್ಚಲಾಗಿದೆ. ಜೋಗ ಜಲಪಾತ ವೀಕ್ಷಣೆಗೆ ರಾಜ್ಯ, ಹೊರ ರಾಜ್ಯ ಮತ್ತು ವಿದೇಶದಿಂದ ಪ್ರವಾಸಿಗರು ಆಗಮಿಸುವ ಹಿನ್ನೆಲೆ, ಗೇಟ್ ಬಂದ್ ಮಾಡಲಾಗಿದೆ. ಇದರ ಮಾಹಿತಿ ಇಲ್ಲದೆ ಬಂದ ಪ್ರವಾಸಿಗರು ನಿರಾಸೆ ಅನುಭವಿಸುತ್ತಿದ್ದಾರೆ. ಕರೋನ ಸೋಂಕು ಹಬ್ಬುವುದನ್ನು ತಡೆಗಟ್ಟುವ ಹಿನ್ನೆಲೆ ರಾಜ್ಯ … Read more

ಗ್ರಾಮ ಪಂಚಾಯಿತಿ ಮುಂದೆ ಶವವಿಟ್ಟು ಪ್ರತಿಭಟನೆ, ಎಂಎಲ್ಎ, ಅಧಿಕಾರಿಗಳು ಬರುವವರೆಗೂ ಸಂಸ್ಕಾರವಿಲ್ಲ ಅಂತಾ ಪಟ್ಟು

150320 Aralagodu Villagers Protest 1

ಶಿವಮೊಗ್ಗ ಲೈವ್.ಕಾಂ | SHIMOGA | 15 ಮಾರ್ಚ್ 2020 ಶಂಕಿತ ಮಂಗನ ಕಾಯಿಲೆಗೆ ಮೃತರಾಗಿರುವ ಕೋಮರಾಜ್ ಜೈನ್ ಅವರ ಮೃತದೇಹವನ್ನು ಅರಳಗೋಡು ಗ್ರಾಮ ಪಂಚಾಯಿತಿ ಮುಂದೆ ಇರಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಅಧಿಕಾರಿಗಳು ಗ್ರಾಮಕ್ಕೆ ಬರುವವರೆಗೂ ಸಂಸ್ಕಾರ ಮಾಡುವುದಿಲ್ಲ ಎಂದು ಆಗ್ರಹಿಸಿದ್ದಾರೆ. ಇಲ್ಲವಾದರೆ ಸಾಗರ ಉಪ ವಿಭಾಗಾಧಿಕಾರಿ ಕಚೇರಿ ಮುಂದೆ ಮೃತದೇಹ ಇರಿಸಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. ಅರಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಸಗುಪ್ಪೆ ಗ್ರಾಮದ ಕೋಮರಾಜ್ ಜೈನ್ (36) ಅವರು ಶಂಕಿತ … Read more