ಕಾರು ಚಾಲಕ, ಪತ್ನಿ ಆತ್ಮಹತ್ಯೆ ಹಿಂದೆ ಬಿಜೆಪಿ ಮುಖಂಡನ ಕೈವಾಡದ ಆರೋಪ, ಸಮಗ್ರ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

150320 Sagara Protest for Driver Suicide 1

ಶಿವಮೊಗ್ಗ ಲೈವ್.ಕಾಂ | SAGARA | 15 ಮಾರ್ಚ್ 2020 ಕಾರು ಚಾಲಕ ಹರ್ಷಕುಮಾರ್ ಮತ್ತು ಪತ್ನಿ ಅನಿತಾ ಅವರ ಸಾವಿನ ಕುರಿತು ಸಮಗ್ರ ತನಿಖೆಗೆ ಒತ್ತಾಯಿಸಿ ಸಾಗರದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಸಾಗರ ಪಟ್ಟಣ ಠಾಣೆ ಎದುರು ಪ್ರತಿಭಟನೆ ನಡೆಸಿ, ಸರ್ಕಲ್ ಇನ್ಸ್’ಪೆಕ್ಟರ್ ಮಹಾಬಲೇಶ್ವರ ನಾಯ್ಕ ಅವರಿಗೆ ಮನವಿ ಸಲ್ಲಿಸಲಾಗಿದೆ. ಏನಿದು ಪ್ರಕರಣ? ಹುಟ್ಟುಹಬ್ಬದ ದಿನವೇ ಸಾಗರದ ಬಸವನಹೊಳೆ ಡ್ಯಾಂ ಬಳಿ ಕಾರು ಚಾಲಕ ಹರ್ಷಕುಮಾರ್ ಮತ್ತು ಪತ್ನಿ ಅನಿತಾ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. … Read more

ಹುಟ್ಟುಹಬ್ಬದ ದಿನ ಹೆಂಡತಿ ಜೊತೆ ವಿಷ ಸೇವಿಸಿದ ಕಾರ್ ಡ್ರೈವರ್

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIMOGA | 14 ಮಾರ್ಚ್ 2020 ವಿಷ ಸೇವಿಸಿ ಗಂಡ, ಹೆಂಡತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಗರದ ಬಸವನಹೊಳೆ ಬ್ಯಾರೇಜ್ ಸಮೀಪ ವಿಷ ಸೇವಿಸಿ ಮೃತರಾಗಿದ್ದಾರೆ. ಹರೀಶ್ (35) ಮತ್ತು ಅನಿತಾ (28) ಮೃತರು. ದಂಪತಿಗಳು ನಿನ್ನೆ ಸಂಜೆ ವೇಳೆ ಬಸವನಹೊಳೆ ಬ್ಯಾರೇಜ್ ಬಳಿ ವಿಷ ಸೇವಿಸಿ ಒದ್ದಾಡುತ್ತಿದ್ದರು. ಇದನ್ನು ಗಮನಿಸಿದ ಸಾರ್ವಜನಿಕರು ಕೂಡಲೇ ಇವರನ್ನು ಆಸ್ಪತ್ರೆಗೆ ಸಾಗಿಸಲು ಯತ್ನಿಸಿದ್ದಾರೆ. ಆದರೆ ಇಬ್ಬರು ಮೃತಪಟ್ಟಿದ್ದಾರೆ. ಹುಟ್ಟುಹಬ್ಬ ಆಚರಿಸಿಕೊಂಡು ಸಾವು ಮಾರ್ಚ್ 13ರಂದು ಹರೀಶ್ ಅವರ … Read more

ಹೊಸನಗರದ ಕ್ರಿಶ್ಚಿಯನ್ ಕಾಲನಿಯಲ್ಲಿ ಧಗಧಗ ಹೊತ್ತಿ ಉರಿದ ಕಾರು

ಶಿವಮೊಗ್ಗ ಲೈವ್.ಕಾಂ | HOSANAGARA | 12 ಮಾರ್ಚ್ 2020 ಶಾರ್ಟ್ ಸರ್ಕಿಟ್’ನಿಂದಾಗಿ ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ನಿಮಿಷಲದಲ್ಲಿ ಕಾರಿನ ಒಳಭಾಗ ಸುಟ್ಟು ಹೋಗಿದೆ. ಹೊಸನಗರದ ಕ್ರಿಶ್ಚಿಯನ್ ಕಾಲೋನಿಯಲ್ಲಿ ಘಟನೆಯಲ್ಲಿ ಸಂಭವಿಸಿದೆ. ಚರ್ಚ್ ರಸ್ತೆ ನಿವಾಸಿ ಅಬ್ದುಲ್ ರೆಹಮಾನ್ ಅವರು ತಮ್ಮ ದಿನಸಿ ಅಂಗಡಿ ಮುಂದೆ ಕಾರು ನಿಲ್ಲಿಸಿ, ಮನೆಗೆ ಹೊರಡುವಾಗ ಬೆಂಕಿ ಕಾಣಿಸಿಕೊಂಡಿದೆ. ಅಬ್ದುಲ್ ರೆಹಮಾನ್ ಅವರು ಕೂಡಲೇ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ತಿಳಿಸಿದರು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. … Read more

ನಕಲಿ ಔಷಧ ಮಾರಾಟಗಾರರ ವಿರುದ್ಧ ರೊಚ್ಚಿಗೆದ್ದ ಜನ, ಬೇರೆ ರಾಜ್ಯ, ಜಿಲ್ಲೆಯಿಂದ ಬಂದ ವಾಹನಗಳನ್ನು ತಡೆದು ಆಕ್ರೋಶ, ಎಲ್ಲಿ ಗೊತ್ತಾ?

090320 Protest in Narasipura Narayanamurthy 1

ಶಿವಮೊಗ್ಗ ಲೈವ್.ಕಾಂ | SAGARA | 9 ಮಾರ್ಚ್ 2020 ಕರೋನ ವೈರಸ್ ಭೀತಿ ಹಿನ್ನೆಲೆ ನರಸೀಪುರದ ಖ್ಯಾತ ನಾಟಿ ವೈದ್ಯ ನಾರಾಯಣ ಮೂರ್ತಿ ಅವರು ಗಿಡಮೂಲಿಕೆ ಔಷಧಿ ಕೊಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ. ಆದರೂ ಕೆಲವರು ನಾರಾಯಣಮೂರ್ತಿ ಅವರ ಹೆಸರಲ್ಲಿ ನಕಲಿ ಔಷಧಿ ವಿತರಿಸುತ್ತಿರುವುದನ್ನು ಖಂಡಿಸಿ, ನರಸೀಪುರದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ನರಸೀಪುರದಲ್ಲಿ ನಾಟಿ ವೈದ್ಯ ನಾರಾಯಣ ಮೂರ್ತಿ ಅವರು ವಿವಿಧ ಕಾಯಿಲೆಗೆ ನಾಟಿ ಔಷಧಿ ನೀಡುತ್ತಾರೆ. ಈ ದಿನಗಳಲ್ಲಿ ನರಸೀಪುರಕ್ಕೆ ರಾಜ್ಯ ಮತ್ತು ಹೊರ ರಾಜ್ಯದ … Read more

ವೈಭವದ ಸಾಗರ ಮಾರಿಕಾಂಬ ಜಾತ್ರೆಗೆ ತೆರೆ, ಕೊನೆ ದಿನವು ಹರಿದು ಬಂತು ಭಕ್ತಸಾಗರ

180220 Sagara Marikamba Jathre Inauguration 1

ಶಿವಮೊಗ್ಗ ಲೈವ್.ಕಾಂ | SAGARA | 26 ಫೆಬ್ರವರಿ 2020 ಸಾಗರದ ಐತಿಹಾಸಿಕ ಶ್ರೀ ಮಾರಿಕಾಂಬ ಜಾತ್ರೆಗೆ ತೆರೆಬಿದ್ದಿದೆ. 9 ದಿನ ನಡೆದ ಅದ್ಧೂರಿ ಜಾತ್ರೆಯಲ್ಲಿ ಲಕ್ಷಾಂತರ ಜನರು ಶ್ರೀದೇವಿಯ ದರ್ಶನ ಪಡೆದರು. ನಿತ್ಯ ಸಾವಿರಾರು ಜನರು ಸರತಿ ಸಾಲಿನಲ್ಲಿ ದೇವಿಗೆ ಉಡಿ ಸಮರ್ಪಿಸುವ ಮೂಲಕ ಹರಕೆ ತೀರಿಸಿದರು. ಶ್ರೀದೇವಿಗೆ ಕುಂಕುಮಾರ್ಚನೆ, ತುಲಾಭಾರ ಸೇರಿದಂತೆ ವಿಶೇಷ ಪೂಜೆ ಸಲ್ಲಿಸಿದರು. ವಿವಿಧ ರಾಜ್ಯಗಳಲ್ಲಿ ನೆಲೆಸಿರುವ ಸಾಗರದ ಜನರು ಹಬ್ಬಕ್ಕಾಗಿಯೇ ಆಗಮಿಸಿ ದರ್ಶನ ಪಡೆದರು. ದಾಸೋಹಕ್ಕೆ ಒಂದು ಲಕ್ಷ ಜನ … Read more

ಸಾಗರದಲ್ಲಿ ಗಂಡನ ಮನೆ ಸೇರಿದ ಮಾರಿಕಾಂಬೆ, ದರ್ಶನಕ್ಕೆ ಜನವೊ ಜನ, ವಸ್ತು ಪ್ರದರ್ಶನಕ್ಕೆ ಚಾಲನೆ, ಸರ್ಕಸ್ ಉದ್ಘಾಟಿಸಿದ್ರು ಮಾಜಿ ಮಿನಿಸ್ಟರ್

ಶಿವಮೊಗ್ಗ ಲೈವ್.ಕಾಂ | SAGARA | 19 ಫೆಬ್ರವರಿ 2020 ತವರು ಮನೆಯಲ್ಲಿ ಪ್ರತಿಷ್ಠಾಪಿಸಿದ್ದ ಶ್ರೀ ಮಾರಿಕಾಂಬ ದೇವಿ ಮೂರ್ತಿಯನ್ನು ಗಂಡನ ಮನೆಗೆ ತರಲಾಗಿದೆ. ಈ ವೇಳೆ ಅದ್ಧೂರಿಯಾದ ರಾಜಬೀದಿ ಉತ್ಸವದ ನಡೆಯಿತು. ಮಂಗಳವಾರ ರಾತ್ರಿ 10ಕ್ಕೆ ಮಹಾಮಂಗಳಾರತಿ ನಂತರ ಪೋತರಾಜನಿಂದ ಚಾವಟಿ ಸೇವೆ ಹಾಗೂ ಹೆಣ್ಣು ಒಪ್ಪಿಸುವ ವಿಧಿವಿಧಾನಗಳು ನಡೆದವು. ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಉತ್ಸವದಲ್ಲಿ ಭಾಗಿಯಾದರು. ಶ್ರೀ ದೇವಿಯ ದಂಡಿನ ಮೆರವಣಿಗೆ ಹಾಗೂ ರಾಜಬೀದಿ ಉತ್ಸವ ಜನರನ್ನು ಆಕರ್ಷಿಸಿತು. ಕಣ್ಸೆಳೆದ ಸಾಂಸ್ಕೃತಿಕ ಕಲಾ ತಂಡಗಳು … Read more

ಕುಂಸಿ ಮೂಲದ ಯುವತಿಯ ಕಿಡ್ನಾಪ್ ಕೇಸ್, 19 ವರ್ಷದ ಬಳಿಕ ಜೋಗ ಪೊಲೀಸರ ಬಲೆಗೆ ಬಿದ್ದ ಆರೋಪಿ, ಈವರೆಗೂ ಎಲ್ಲಿದ್ದ ಗೊತ್ತಾ?

prison hand cuff image

ಶಿವಮೊಗ್ಗ ಲೈವ್.ಕಾಂ | SHIMOGA | 19 ಫೆಬ್ರವರಿ 2020 ಯುವತಿಯ ಅಪರಹಣಕ್ಕೆ ಸಂಬಂಧಿಸಿ 19 ವರ್ಷಗಳ ಹಿಂದಿನ ಪ್ರಕರಣದ ಆರೋಪಿ ಶಮಿ ಅಲಿಯಾಸ್ ಮೊಹಮದ್ ಅಲಿಯನ್ನು ಕೇರಳದಲ್ಲಿ ಬಂಧಿಸುವಲ್ಲಿ ಜೋಗ ಪೊಲೀಸರು ಯಶಸ್ವಿಯಾಗಿದ್ದಾರೆ. ಶಮಿ ಕಾರ್ಗಲ್‌ನವನು. 2001ರಲ್ಲಿ ಕುಂಸಿ ಮೂಲದ ಯುವತಿಯೊಬ್ಬಳನ್ನು ಅಪಹರಿಸಿ ಕೆಲ ದಿನಗಳ ಕಾಲ ಅಜ್ಞಾತ ಸ್ಥಳದಲ್ಲಿಟ್ಟ ಆರೋಪ ಈತನ ಮೇಲಿತ್ತು. ಪ್ರಕರಣದಲ್ಲಿ ಐವರನ್ನು ಆರೋಪಿಗಳೆಂದು ಗುರುತಿಸಲಾಗಿತ್ತು. ನಾಲ್ವರನ್ನು ಈಗಾಗಲೇ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ಆದರೆ ಶಮಿ ಮಾತ್ರ ಪ್ರಕರಣ ನಡೆದ … Read more

ಬಾರ್ ಅಂಡ್ ರೆಸ್ಟೋರೆಂಟ್ ವಿರುದ್ಧ ರೊಚ್ಚಿಗೆದ್ದ ಮಹಿಳೆಯರು, ಮಕ್ಕಳು, ಬೀದಿಗಿಳಿದು ಪ್ರತಿಭಟಿಸಿದ ಗ್ರಾಮಸ್ಥರು

ಶಿವಮೊಗ್ಗ ಲೈವ್.ಕಾಂ | SHIMOGA | 18 ಫೆಬ್ರವರಿ 2020 ತಾಳಗುಪ್ಪ ಗ್ರಾಮದಲ್ಲಿ ಆರಂಭಿಸಿರುವ ಬಾರ್ ಆ್ಯಂಡ್ ರೆಸ್ಟೋರೆಂಟ್ ತೆರವುಗೊಳಿಸುವಂತೆ ಆಗ್ರಹಿಸಿ ಸ್ತ್ರೀಶಕ್ತಿ ಸಂಘ, ವಿವಿಧ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿದರು. ಗ್ರಾಮದ ವಸತಿ ಪ್ರದೇಶದಲ್ಲಿ ಶಿವಮೊಗ್ಗದ ವ್ಯಕ್ತಿಯೊಬ್ಬರು ಸ್ಥಳೀಯರ ವಿರೋಧದ ನಡುವೆಯೂ ಮದ್ಯದಂಗಡಿಆರಂಭಿಸಿದ್ದಾರೆ. ಬಾರ್ ಲೈಸನ್ಸ್ ರದ್ದು ಮಾಡುವಂತೆ ಈ ಹಿಂದೆ ಡಿಸಿಗೆ ಗ್ರಾಪಂ ಮೂಲಕ ಮನವಿ ಸಲ್ಲಿಸಲಾಗಿತ್ತು. ಇದ್ಯಾವುದನ್ನೂ ಗಣನೆಗೆ ತೆಗೆದುಕೊಳ್ಳದೆ ಅಬಕಾರಿ ಇಲಾಖೆ ಪರವಾನಗಿ ನೀಡಿದೆ ಎಂದು ಪ್ರತಿಭಟನಾಕಾರರು ದೂರಿದರು. ಜನವಸತಿ ಪ್ರದೇಶದಲ್ಲಿ … Read more

ಸಾಗರ ಮಾರಿಕಾಂಬೆ ಜಾತ್ರೆಗೆ ಅದ್ಧೂರಿ ಚಾಲನೆ, ದರ್ಶನಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ, ಏನೇನೆಲ್ಲ ಪೂಜೆ ಮಾಡಲಾಗಿದೆ ಗೊತ್ತಾ?

180220 Sagara Marikamba Jathre Inauguration 1

ಶಿವಮೊಗ್ಗ ಲೈವ್.ಕಾಂ | SAGARA | 18 ಫೆಬ್ರವರಿ 2020 ಶಕ್ತಿದೇವತೆ ಶ್ರೀ ಮಾರಿಕಾಂಬೆ ಜಾತ್ರೆಗೆ ಇವತ್ತು ಅದ್ಧೂರಿಯಾಗಿ ಚಾಲನೆ ನೀಡಲಾಯಿತು. 9 ದಿನಗಳ ಜರುಗುವ ತಾಯಿಯ ಜಾತ್ರೆಗೆ, ಬೆಳಗ್ಗೆ ಬ್ರಾಹ್ಮೀ ಮಹೂರ್ತದಲ್ಲಿ ಸಾಂಪ್ರಾದಾಯಿಕ ವಿಧಿ ವಿಧಾನಗಳು ನಡೆಯಿತು. ಮೊದಲ ದಿನವೇ ಸಾವಿರಾರು ಭಕ್ತರು ದೇವಿಯ ದರ್ಶನ ಪಡೆದರು. ಬೆಳಗಿನ ಜಾವ 3 ಗಂಟೆಗೆ ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಹಾಗಣಪತಿ ದೇವಾಲಯದಲ್ಲಿ ತಾಯಿ ಮಾರಿಕಾಂಬೆಯ ತಾಳಿ ಮತ್ತು ಆಭರಣಗಳಿಗೆ ಪೂಜೆ ಸಲ್ಲಿಸಿ ವಿಧಿವಿಧಾನ ನೇರವೇರಿಸಲಾಯಿತು. ನಂತರ … Read more

ಇತಿಹಾಸ ಪ್ರಸಿದ್ಧ ಸಾಗರ ಮಾರಿ ಜಾತ್ರೆಗೆ ಕ್ಷಣಗಣನೆ, ಬೆಳಗಿನ ಜಾವ ಶುರುವಾಗಲಿದೆ ಪೂಜೆ, ಏನೇನು ಶಾಸ್ತ್ರ ನಡೆಯಲಿದೆ ಗೊತ್ತಾ?

170220 Sagara Marikamba Jathre 1

ಶಿವಮೊಗ್ಗ ಲೈವ್.ಕಾಂ | SAGARA | 17 ಫೆಬ್ರವರಿ 2020 ಇತಿಹಾಸ ಪ್ರಸಿದ್ಧ ಸಾಗರ ಮಾರಿಕಾಂಬ ಜಾತ್ರೆ ಫೆ.18ರಿಂದ ಆರಂಭವಾಗಲಿದೆ. ಒಂಭತ್ತು ದಿನ ಲಕ್ಷಾಂತರ ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗಲಿದ್ದಾರೆ. ಇವತ್ತು ರಾತ್ರಿ ಚಿಕ್ಕಮ್ಮನನ್ನು ಹೊರಡಿಸುವ ಕಾರ್ಯ ನಡೆಯಲಿದೆ. ಬಳಿಕ 9 ಮನೆಯಿಂದ ಘಟೆವು ತರಲಾಗುತ್ತದೆ. ಇದಕ್ಕಾಗಿ ಸಿದ್ಧತೆಗಳು ನಡೆಯುತ್ತಿದೆ. ಮಂಗಳವಾರ ಬೆಳಗ್ಗೆ ಗಣಪತಿ ದೇವಸ್ಥಾನದಲ್ಲಿ ತಾಳಿಪೂಜೆ ನೆರವೇರಲಿದೆ. ನಂತರ ಪುರೋಹಿತ ರಮೇಶ ಭಟ್ಟರ ಮನೆಯಲ್ಲಿ ಪೂಜೆ ಸಲ್ಲಿಸಿ, ಮಂಗಳವಾದ್ಯದೊಂದಿಗೆ ತಾಯಿಯ ಮನೆ ದೇವಸ್ಥಾನದ … Read more