ಶಿಕಾರಿಪುರದ ದೊಡ್ಡಕೇರಿಯಲ್ಲಿ ರೋಮಾಂಚಕ ಹೋರಿ ಹಬ್ಬ, ಹೇಗಿತ್ತು ವೈಭವ? ಇಲ್ಲಿದೆ ಫೋಟೊ ಆಲ್ಬಂ

081121 Shikaripura Doddakere Hori Habba

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 8 ನವೆಂಬರ್ 2021 ದೀಪಾವಳಿ ಬಳಿಕ ಜಿಲ್ಲೆಯ ವಿವಿಧೆಡೆ ಹೋರಿ ಬೆದರಿಸುವ ಹಬ್ಬಕ್ಕೆ ಚಾಲನೆ ಸಿಕ್ಕಿದೆ. ಶಿಕಾರಿಪುರದ ದೊಡ್ಡಕೇರಿಯಲ್ಲಿ ವಿಜೃಂಭಣೆಯಿಂದ ಹಬ್ಬ ನಡೆಯಿತು. ಅಕ್ಕಪಕ್ಕದ ಊರುಗಳಿಂದ ಸಾವಿರಾರು ಜನರು ಹಬ್ಬದಲ್ಲಿ ಪಾಲ್ಗೊಂಡಿದ್ದರು. ಹೋರಿಗಳ ಅಲಂಕಾರ, ಅವುಗಳ ಓಟ ಕಂಡು ಸಂತೋಷಪಟ್ಟರು. ದೊಡ್ಡಕೇರಿಯ ಗಿಡ್ಡೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಹೋರಿ ಹಬ್ಬಕ್ಕೆ ಚಾಲನೆ ನೀಡಲಾಯಿತು. ರೈತಾಪಿ ವರ್ಗದ ಪ್ರಮುಖ ಹಬ್ಬ ಇದಾಗಿದೆ. ಹೋರಿಗಳಿಗೆ ಬಗೆಬಗೆ ಅಲಂಕಾರ ರೋಮಾಂಚಕ ಸ್ಪರ್ಧೆಯಲ್ಲಿ … Read more

ನೂತನ ರೈಲ್ವೆ ಮಾರ್ಗದ ಪರಿಶೀಲನೆ, ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್ ಬಗ್ಗೆ ಮಹತ್ವದ ಚರ್ಚೆ

131021 Meeting Over Shikaripura Railway Route

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಅಕ್ಟೋಬರ್ 2021 ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗವನ್ನು ಹಿರಿಯ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದೆ. ಅಲ್ಲದೆ ಈ ಮಾರ್ಗದ ಕುರಿತು ಸಂಪೂರ್ಣ ಮಾಹಿತಿ ಪಡೆದಿದೆ. ರೈಲ್ವೆ ಇಲಾಖೆ ಅಧಿಕಾರಿಗಳ ತಂಡವು ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗವನ್ನು ಪರಿಶೀಲನೆ ನಡೆಸಿತು. ರೈಲ್ವೆ ಮಾರ್ಗದ ಭೂ ಸ್ವಾಧೀನ ಮತ್ತು ಸ್ಥಳೀಯ ಸಮಸ್ಯೆಗಳ ಕುರಿತು ಮಾಹಿತಿ ಪಡೆಯಿತು. ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಭೇಟಿಯಾದ … Read more

ಆಪ್ತನ ಮನೆ ಮೇಲೆ ಐಟಿ ದಾಳಿಗೆ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ, ಶಿಕಾರಿಪುರದಲ್ಲಿ ಮಾಜಿ ಸಿಎಂ ಹೇಳಿದ್ದೇನು?

120621 CM BS Yedyurappa Visit Shikaripura 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 07 ಅಕ್ಟೋಬರ್ 2021 ತಮ್ಮ ಆಪ್ತ ಉಮೇಶ್ ಮನೆ ಮೇಲೆ ಐಟಿ ದಾಳಿಯಾಗಿರುವ ಕುರಿತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಶಿಕಾರಿಪುರಕ್ಕೆ ಆಗಮಿಸಿರುವ ಯಡಿಯೂರಪ್ಪ ಅವರು ಐಟಿ ದಾಳಿ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಯಡಿಯೂರಪ್ಪ ಅವರು ಹೇಳಿದ್ದೇನು? ಉಮೇಶ್ ನನ್ನ ಆಪ್ತ. ಆತ ನನ್ನ ಜೊತೆಗೆ ಕೆಲಸ ಮಾಡುತ್ತಿದ್ದ. ದಾಳಿಯ ಕುರಿತು ಸತ್ಯಾಸತ್ಯತೆ ನಾಳೆ ಗೊತ್ತಾಗಲಿದೆ. ಆ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ಯಾರೆ ತಪ್ಪು ಮಾಡಿದರೂ … Read more

ಬೆಳಗ್ಗೆ ತೋಟಕ್ಕೆ ಬಂದ ಮಾಲೀಕನಿಗೆ ಶಾಕ್, 68 ಮರಗಳಲ್ಲಿದ್ದ ಅಡಕೆ ಕೊನೆಗಳು ನಾಪತ್ತೆ

ARECA-TREE-GENERAL-IMAGE

ಶಿವಮೊಗ್ಗ ಲೈವ್.ಕಾಂ | SHIRALAKOPPA NEWS | 4 ಸೆಪ್ಟೆಂಬರ್ 2021 ಒಂದೆಡೆ ಅಡಕೆ ಬೆಲೆ ಗಗನಮುಖಿಯಾಗುತ್ತಿದೆ. ಬೆಳಗಾರರಲ್ಲಿ ಮಂದಹಾಸ ಮೂಡಿಸಿದೆ. ಮತ್ತೊಂದೆಡೆ ಅಡಕೆ ಕಳ್ಳತನ ಪ್ರಕರಣಗಳು ವರದಿಯಾಗುತ್ತಿವೆ. ರಾತ್ರೋರಾತ್ರಿ ತೋಟವೊಂದರಿಂದ ಅಡಕೆ ಕೊನೆಗಳನ್ನು ಕದ್ದೊಯ್ದಿರುವ ಪ್ರಕರಣ ವರದಿಯಾಗಿದೆ. ಶಿಕಾರಿಪುರ ತಾಲೂಕು ಉಡುಗಣಿ ಹೋಬಳಿಯ ಕೊಡಿಕೊಪ್ಪ ಗ್ರಾಮದ ತೋಟವೊಂದರಲ್ಲಿ ಅಡಕೆ ಕೊನೆಗಳು ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಜಯಪ್ಪ ಎಂಬುವವರಿಗೆ ಸೇರಿದ ತೋಟದಲ್ಲಿ ರಾತ್ರಿ ಕಳ್ಳರು ಅಡಕೆ ಕೊನೆಗಳನ್ನು ಕೊಯ್ದುಕೊಂಡು ಹೋಗಿದ್ದಾರೆ. 68 ಮರಗಳಿಂದ ಕೊನೆ ಕಳವು ಮಾಡಲಾಗಿದೆ. … Read more

ಲಂಚ ಪಡೆಯುತ್ತಿದ್ದಾಗಲೇ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ದಾಳಿ, ಅರಣ್ಯಾಧಿಕಾರಿ ಅರೆಸ್ಟ್

breaking news graphics

ಶಿವಮೊಗ್ಗ ಲೈವ್.ಕಾಂ | 3 SEPTEMBER 2021 | ಶಿಕಾರಿಪುರ ಲಂಚ ಪಡೆಯುತ್ತಿದ್ದಾಗಲೆ ಅರಣ್ಯ ಇಲಾಖೆ ಅಧಿಕಾರಿಯೊಬ್ಬರು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ. ಶಿರಾಳಕೊಪ್ಪ ವಲಯ ಅರಣ್ಯ ಇಲಾಖೆ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ಇವತ್ತು ದಾಳಿ ನಡೆಸಿದ್ದಾರೆ. ಡಿಆರ್‌ಎಫ್‌ಒ ವೀರೇಶ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ಪ್ರಕರಣವೊಂದರ ಆರೋಪಿಯಿಂದ ಏಳು ಸಾವಿರ ರೂ. ಹಣ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಏನಿದು ಪ್ರಕರಣ? ಲಂಚಕ್ಕೆ ಬೇಡಿಕೆ ಇಟ್ಟಿದ್ದೇಕೆ? ಸೊರಬ ತಾಲೂಕು ಇಂಡುವಳ್ಳಿ … Read more

ಶಿರಾಳಕೊಪ್ಪ ಬಸ್ ನಿಲ್ದಾಣದ ಮುಂದೆ ನಿಲ್ಲಸಿದ್ದ ಶಿಕ್ಷಕರ ಪಲ್ಸರ್ ಬೈಕ್ ನಾಪತ್ತೆ

SHIRALAKOPPA-SHIKARIPURA-NEWS

ಶಿವಮೊಗ್ಗ ಲೈವ್.ಕಾಂ | SHIRALAKOPPA NEWS | 2 ಸೆಪ್ಟೆಂಬರ್ 2021 ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಶಿಕ್ಷಕರೊಬ್ಬರ ಬೈಕನ್ನು ಖದೀಮರು ಕದ್ದೊಯ್ದಿದ್ದಾರೆ. ಈ ಸಂಬಂಧ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿಕ್ಷಕ ಮಲ್ಲೇಶ್ ಅವರ ಪಲ್ಸರ್ ಬೈಕನ್ನು ಕಳುವು ಮಾಡಲಾಗಿದೆ. ಶಿರಾಳಕೊಪ್ಪ ಬಸ್ ನಿಲ್ದಾಣದ ಮುಂದೆ ನಿಲ್ಲಿಸಿ ಕರ್ತವ್ಯ ನಿಮಿತ್ತ ಶಾಲೆಗೆ ಹೋಗಿದ್ದರು. ಸಂಜೆ ಬಂದು ನೋಡಿದಾಗ ಬಸ್ ನಿಲ್ದಾಣದ ಬಳಿ ಬೈಕ್ ನಾಪತ್ತೆಯಾಗಿತ್ತು. ಪಲ್ಸರ್ ಬೈಕ್ ಕಣ್ಮರೆಯಾಗಿರುವ ಕುರಿತು ಮಲ್ಲೇಶ್ ಅವರು ಶಿರಾಳಕೊಪ್ಪ … Read more

ಶಿಕಾರಿಪುರದಲ್ಲಿ ಟೈರ್​​​ಗೆ ಬೆಂಕಿ, ಬಿಜೆಪಿ ವಿರುದ್ಧ ಯಡಿಯೂರಪ್ಪ ಅಭಿಮಾನಿಗಳ ಕಿಡಿ ನುಡಿ, ಇವತ್ತು ಎಲ್ಲೆಲ್ಲಿ ಏನೇನಾಯ್ತು?

260721 Protest At Shikaripura After BSY Resignation 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 26 ಜುಲೈ 2021 ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಘೋಷಿಸುತ್ತಿದ್ದಂತೆ ಅವರ ರಾಜಕೀಯ ತವರು ಶಿಕಾರಿಪುರ ಸಂಪೂರ್ಣ ಸ್ಥಬ್ಧವಾಯಿತು. ಆಕ್ರೋಶವು ವ್ಯಕ್ತವಾಯಿತು. ರಾಜೀನಾಮೆ ಬೆನ್ನಿಗೆ ತಾಲೂಕಿನಲ್ಲಿ ಏನೇನಾಯ್ತು ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್‍. ಸ್ವಯಂ ಪ್ರೇರಿತ ಬಂದ್ ಯಡಿಯೂರಪ್ಪ ರಾಜೀನಾಮೆ ಘೋಷಿಸುತ್ತಿದ್ದಂತೆ ಜವಳಿ ವರ್ತಕರು, ಚಿನ್ನಾಭರಣ ವರ್ತಕರು ಸ್ವಯಂ ಪ್ರೇರಿತವಾಗಿ ಅಂಗಡಿಗಳನ್ನು ಬಂದ್ ಮಾಡಿದರು. ಇದರ ಬೆನ್ನಿಗೆ ಇತರೆ ವ್ಯಾಪಾರಸ್ಥರು ಅಂಗಡಿಗಳನ್ನು ಬಂದ್ ಮಾಡಿದರು. ವರ್ತಕರು ಮೆರವಣಿಗೆ ಮಾಡಿ, ಯಡಿಯೂರಪ್ಪ … Read more

BREAKING NEWS | ರಾಜೀನಾಮೆ ಬೆನ್ನಿಗೆ ಯಡಿಯೂರಪ್ಪ ತವರು ಶಿಕಾರಿಪುರ ಸಂಪೂರ್ಣ ಬಂದ್

260721 Shikaripura Bandh Over BSY Resignation 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 26 ಜುಲೈ 2021 ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಘೋಷಿಸಿದ ಬೆನ್ನಿಗೆ ಶಿಕಾರಿಪುರ ಸಂಪೂರ್ಣ ಸ್ಥಬ್ಧವಾಗಿದೆ. ಪಟ್ಟಣದಾದ್ಯಂತ ಸ್ವಯಂ ಪ್ರೇರಿತವಾಗಿ ಬಂದ್ ಮಾಡಲಾಗಿದೆ. ಶಿಕಾರಿಪುರ ಪಟ್ಟಣದ ಬಸ್‍ ನಿಲ್ದಾಣ ಸುತ್ತಮುತ್ತ, ಪೆಟ್ರೋಲ್ ಬಂಕ್ ರಸ್ತೆ, ಶಿಶುವಿಹಾರ ರಸ್ತೆ, ಎಸ್‍.ಹೆಚ್‍.ರಸ್ತೆ, ತಾಲೂಕು ಆಫೀಸ್‍ ರಸ್ತೆ, ಮಾಸೂರು ರಸ್ತೆಯಲ್ಲಿ ಅಂಗಡಿಗಳನ್ನು ಬಂದ್ ಮಾಡಲಾಗಿದೆ ರಾಜೀನಾಮೆ ಘೋಷಣೆ ಮಾಡುತ್ತಿದ್ದಂತೆ ಪಟ್ಟಣದಲ್ಲಿ ವರ್ತಕರು ನಿರ್ಧಾರ ಮಾಡಿ, ಅಂಗಡಿಗಳನ್ನು ಬಂದ್ ಮಾಡಿದರು. ಮತ್ತೊಂದೆಡೆ ಬಿಜೆಪಿ ಕಾರ್ಯಕರ್ತರು … Read more

ಶಿಕಾರಿಪುರದಲ್ಲಿ ಲಂಬಾಣಿ ಸಮುದಾಯದ ಜೊತೆ ಡಿ.ಕೆ.ಶಿವಕುಮಾರ್ ಸಂವಾದ, ಚರ್ಚೆಯಾಗಿದ್ದೇನು? ಡಿಕೆಶಿ ಹೇಳಿದ್ದೇನು?

160721 DK Shivakumar at Shikaripura Lambani Samvada 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 16 ಜುಲೈ 2021 ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶಿಕಾರಿಪುರದ ಬೇಗೂರು ಮರಡಿ ತಾಂಡಾದಲ್ಲಿ ಲಂಬಾಣಿ ಸಮುದಾಯದವರ ಜೊಎಗೆ ಸಂವಾದ ನಡೆಸಿದರು. ಈ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಲವು ವಿಚಾರಗಳನ್ನು ಪ್ರಸ್ತಾಪಿಸಿದರು. ಡಿಕೆಶಿ ಏನೇನು ಹೇಳಿದರು? ಅರಣ್ಯ ಹಕ್ಕು ಕಾಯಿದೆಗೆ ತಿದ್ದುಪಡಿ ತರುವುದಕ್ಕೆ ಕಂದಾಯ ಭೂಮಿ ಅರಣ್ಯ ಇಲಾಖೆಗೆ ಇಂಡೀಕರಣ ಮಾಡಿರುವುದರ ವಿರುದ್ಧ ಕೇಂದ್ರ, ರಾಜ್ಯದಲ್ಲಿ ಹೋರಾಟ ಮಾಡಿ ರೈತರಿಗೆ ಅನುಕೂಲ ಕಲ್ಪಿಸುವುದಕ್ಕೆ ಕಾಂಗ್ರೆಸ್ … Read more

ಭರ್ತಿಯಾದ ಅಂಜನಾಪುರಕ್ಕೆ ಬಾಗಿನ, ಹೊಸಳ್ಳಿ ಏತ ನೀರಾವರಿ ಯೋಜನೆ ಶೀಘ್ರ ಪೂರ್ಣ

120721 Bagina For Anjanapura Dam in Shikaripura 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜುಲೈ 2021 ಭರ್ತಿಯಾಗಿರುವ ಅಂಜನಾಪುರ ಜಲಾಶಯಕ್ಕೆ ಸಂಸದ ಬಿ.ವೈ.ರಾಘವೇಂದ್ರ, ಪತ್ನಿ ತೇಜಸ್ವಿನಿ ಅವರೊಂದಿಗೆ ಬಾಗಿನ ಅರ್ಪಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಈ ಜಲಾಶಯ ಸುಮಾರು 7 ಸಾವಿರ ಹೆಕ್ಟೇರ್‍ ಪ್ರದೇಶಕ್ಕೆ ನೀರುಣಿಸುತ್ತಿದೆ. ಈ ಭಾಗದ ರೈತರ ಜೀವನಾಡಿಯಾಗಿದೆ. ವಿಶೇಷವಾದ ಗೋಡ್‍ಬೋಲೆ ಗೇಟ್‍ಗಳನ್ನು ಅಂಜನಾಪುರ ಜಲಾಶಯಕ್ಕೆ ಅಳವಡಿಸಲಾಗಿದೆ ಎಂದರು. ಅಕ್ಕಪಕ್ಕದ ಊರಿಗೆ ಪೈಪ್‍ಲೈನ್‍ ಅಂಜನಾಪುರ ಜಲಾಶಯದ ಪಕ್ಕದಲ್ಲಿದ್ದರೂ ಹಾರೋಗೊಪ್ಪ, ಅತ್ತಿಬೈಲು, ತರಲಘಟ್ಟ ಸೇರಿದಂತೆ ಹಲವು ಗ್ರಾಮಗಳಿಗೆ … Read more