ಲಂಚ ಸ್ವೀಕರಿಸುತ್ತಿದ್ದಾಗ ಶಿವಮೊಗ್ಗ ಎಸಿಬಿ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ

Corruption-ACB-Raid-1.jpg

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಸೆಪ್ಟಂಬರ್ 2020 ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯೊಬ್ಬರು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ. ಎಂಟು ಸಾವಿರ ರುಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆದಿದೆ. ಶಿಕಾರಿಪುರ ತಾಲೂಕು ಹೊಸೂರು  ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶಿವಪ್ಪ, ಎಸಿಬಿ ಬಲೆಗೆ ಬಿದ್ದವರು. ಲಂಚ ಕೇಳಿದ್ದು ಏಕೆ? ನರೇಗಾ ಯೋಜನೆಯ 2.10 ಲಕ್ಷ ರೂ. ಹಣ ಬಿಡುಗಡೆ ಮಾಡಲು ಶಿವಪ್ಪ  8 ಸಾವಿರ ರೂ. ಲಂಚಕ್ಕೆ … Read more

ಹೊಸಳ್ಳಿ ಏತ ನೀರಾವರಿ ಯೋಜನೆ ಸ್ಥಳಕ್ಕೆ ಅಂಜಾನಪುರದ ರೈತರೊಂದಿಗೆ ಸಂಸದ ರಾಘವೇಂದ್ರ ಭೇಟಿ

100920 BY Raghavendra Visit to Hosalli water Project 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 10 ಸೆಪ್ಟಂಬರ್ 2020 ಹೊಸಳ್ಳಿ ಏತ ನೀರಾವರಿ ಯೋಜನೆ ವ್ಯಾಪ್ತಿಯ ಸ್ಥಳಕ್ಕೆ ಅಂಜನಾಪುರ ಹೋಬಳಿ ರೈತರೊಂದಿಗೆ ತೆರಳಿದ ಸಂಸದ ಬಿ.ವೈ.ರಾಘವೇಂದ್ರ, ಕಾಮಗಾರಿಯ ಪರಿಶೀಲನೆ ನಡೆಸಿದರು. ಅಲ್ಲದೆ ನೀರಾವರಿ ಯೋಜನೆ ಕುರಿತು ರೈತರಿಗೆ ಮಾಹಿತಿ ನೀಡಿದರು. ಏತ ನೀರಾವರಿ ಯೋಜನೆ ಮೂಲಕ ಅಂಜನಾಪುರ ಜಲಾಶಯಕ್ಕೆ ನೀರು ಹರಿಸಲಾಗುತ್ತದೆ. 250 ಕೋಟಿಯ ಈ ಯೋಜನೆಯಿಂದ ಶಿಕಾರಿಪುರದ 18 ಗ್ರಾಮಗಳು, ಶಿವಮೊಗ್ಗದ 32 ಗ್ರಾಮಗಳಿಗೆ ನೀರು ಹರಿಸಲಾಗುತ್ತದೆ. ಶಿಕಾರಿಪುರ ಮತ್ತು ಶಿರಾಳಕೊಪ್ಪ ಪಟ್ಟಣಗಳಿಗು … Read more

ಶಿಕಾರಿಪುರ ಪುರಸಭೆಗೆ ಕರೋನ ಶಾಕ್, 14 ದಿನ ಸಂಪೂರ್ಣ ಆಡಳಿತ ಬಂದ್

090920 Shikaripura Purasabhe Closed for 14 days 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 9 ಸೆಪ್ಟಂಬರ್ 2020 ಪುರಸಭೆ ಮುಖ್ಯಾಧಿಕಾರಿ ಸೇರಿ ಹಲವು ಸಿಬ್ಬಂದಿಗಳಿಗೆ ಕರೋನ ಪಾಸಿಟಿವ್ ಕಾಣಿಸಿಕೊಂಡಿದೆ. ಹಾಗಾಗಿ ಶಿಕಾರಿಪುರ ಪುರಸಭೆಯನ್ನು 14 ದಿನ ಬಂದ್ ಮಾಡಲಾಗಿದೆ. ಪುರಸಭೆಗೆ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಿ, ಗೇಟ್ ಬಂದ್ ಮಾಡಲಾಗಿದೆ. ಪುರಸಭೆ ಬಂದ್ ಆಗಿರುವ ಕುರಿತು ಗೇಟ್ ಮುಂದೆ ಬೋರ್ಡ್ ತೂಗು ಹಾಕಲಾಗಿದೆ. ಹಾಗಾಗಿ ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಬಂದು ಹಿಂತಿರುಗುತ್ತಿದ್ದಾರೆ. ಪುರಸಭೆಯನ್ನು ಮಂಗಳವಾರದಿಂದ 14 ದಿನ ಬಂದ್ ಮಾಡಲಾಗಿದೆ. ಆಡಳಿತಾತ್ಮಕ ಸೇವೆಗಳು ಯಾವುದು … Read more

ಶಿಕಾರಿಪುರ ಕೈಗಾರಿಕಾ ತರಬೇತಿ ಸಂಸ್ಥೆಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಹುದು?

SHIKARIPURA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 27 ಆಗಸ್ಟ್ 2020 ಶಿಕಾರಿಪುರ ಸರ್ಕಾರಿ ಕೈಗಾರಿಕಾ ತರಬೇತಿ ಸಂ‍ಸ್ಥೆಯು ಪ್ರಸಕ್ತ ಸಾಲಿನಲ್ಲಿ ಎಲೆಕ್ಟ್ರೀಷಿಯನ್‌, ಇಎಂ, ಐಸಿಟಿಎಸ್‌ಎಂ, ಫಿಟ್ಟರ್‌ ಮತ್ತು ಟರ್ನರ್‌ ಹಾಗು ಪಿಪಿಪಿ ಅಡಿಯಲ್ಲಿ ಎಲೆಕ್ಟ್ರೀಷಿಯನ್‌, ಫಿಟ್ಟರ್‌ ಮತ್ತು ಎಂಎಂವಿ ವೃತ್ತಿಗಳ ಪ್ರವೇಶಕ್ಕಾಗಿ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆಗಳೇನು? ಪ್ರವೇಶ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಎಸ್ಸೆಸ್ಸೆಲ್ಸಿಯಲ್ಲಿ ಉತ್ತೀರ್ಣರಾಗಿಬೇಕು. ಆಸಕ್ತರು ಪ್ರವೇಶಾತಿ ಕುರಿತಾದ ಅರ್ಜಿ ಮತ್ತು ಮತ್ತಿತರ ಮಾಹಿತಿಗೆ www.emptrg.kar.nic.in ವೆಬ್‌ಸೈಟ್‌ನಲ್ಲಿ ಮಾಹಿತಿ ಪಡೆಯಬಹುದು. ಆಗಸ್ಟ್‌ ೩೧ರೊಳಗಾಗಿ … Read more

ಕೋವಿಡ್ ಕೇರ್ ಸೆಂಟರ್‍‍ಗೆ ಡಿಸಿ, ಎಸ್‍ಪಿ, ಸಿಇಒ ಭೇಟಿ, ಸೋಂಕಿತನಿಂದ ಡಿಸಿಗೆ ವಿಶೇಷ ಬೇಡಿಕೆ, ಏನದು?

160820 DC SP CEO visit Shikaripura Covid Care Centre 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 16 ಆಗಸ್ಟ್ 2020 ಶಿಕಾರಿಪುರದಲ್ಲಿ ಸ್ಥಾಪಿಸಲಾಗಿರುವ ಕೋವಿಡ್‌ ಕೇರ್‌ ಸೆಂಟರ್‌ಗೆ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಸಿಇಒ ಇವತ್ತು ಭೇಟಿ ನೀಡಿದ್ದರು. ಈ ವೇಳೆ ಸೋಂಕಿತರೊಬ್ಬರು ಜಿಲ್ಲಾಧಿಕಾರಿ ಮುಂದೆ ವಿಶೇಷ ಬೇಡಿಕೆ ಮುಂದಿಟ್ಟು ಎಲ್ಲರು ನಗುವಂತೆ ಮಾಡಿದ್ದಾರೆ. ಅಂಬಾರಗೊಪ್ಪ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ಸ್ಥಾಪಿಸಲಾಗಿದೆ. ಇವತ್ತು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌, ಜಿಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ … Read more

ಬೈಕುಗಳ ನಡುವೆ ಭೀಕರ ಅಪಘಾತ, ಪೊಲೀಸ್ ಸಿಬ್ಬಂದಿ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಶಿವಮೊಗ್ಗ ಲೈವ್.ಕಾಂ | SHIRALAKOPPA NEWS | 3 ಆಗಸ್ಟ್ 2020 ಶಿರಾಳಕೊಪ್ಪ ಪಟ್ಟಣದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಶಿರಾಳಕೊಪ್ಪದ ಪೊಲೀಸ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ. ಮತ್ತೊಬ್ಬ ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಎರಡು ಬೈಕ್‍ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಶಿರಾಳಕೊಪ್ಪ ಠಾಣೆಯ ಮುಖ್ಯ ಪೇದೆ ಪ್ರವೀಣ್ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಹೇಗಾಯ್ತು ಅಪಘಾತ? ಶಿರಾಳಕೊಪ್ಪದ … Read more

SHIKARIPURA | ಕರೋನದಿಂದ ಯಡಿಯೂರಪ್ಪ ಗುಣವಾಗಲಿ ಅಂತಾ ವಿಶೇಷ ಪೂಜೆ

030820 Raghavendra Pooja hucharaya swamy temple 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 3 ಆಗಸ್ಟ್ 2020 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕರೋನದಿಂದ ಶೀಘ್ರ ಗುಣವಾಗಲಿ ಅಂತಾ ಶಿಕಾರಿಪುರದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗಿದೆ. ಸಿಎಂ ಗುಣವಾಗಿ, ಶೀಘ್ರ ಸಾರ್ವಜನಿಕ ಸೇವೆಗೆ ಮರಳಲಿ ಎಂದು ಪ್ರಾರ್ಥಿಸಲಾಯಿತು. ಶಿಕಾರಪುರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆರಾಧ್ಯ ದೈವ ಶ್ರೀ ಹುಚ್ಚುರಾಯಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ಪೂಜೆ ನೆರವೇರಿಸಿದರು. ಈ ವೇಳೆ ಶಿಕಾರಿಪುರದ ಬಿಜೆಪಿ ಮುಖಂಡರು, ಕಾರ್ಯಕರ್ತರು ಪೂಜೆಯಲ್ಲಿ ಭಾಗವಹಿಸಿದ್ದರು. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ … Read more

ಶಿರಾಳಕೊಪ್ಪದಲ್ಲಿ ಸಹಕಾರ ಬ್ಯಾಂಕ್ ಒಂದರ ಸಿಬ್ಬಂದಿಗೆ ಸೋಂಕು, ಖಾಸಗಿ ಆಸ್ಪತ್ರೆಯ ಮತ್ತೊಬ್ಬ ಸಿಬ್ಬಂದಿಗೂ ಪಾಸಿಟಿವ್

ಶಿವಮೊಗ್ಗ ಲೈವ್.ಕಾಂ | SHIRALAKOPPA NEWS | 18 ಜುಲೈ 2020 ಶಿರಾಳಕೊಪ್ಪದ ಪ್ರತಿಷ್ಠಿತ ಸಹಕಾರಿ ಬ್ಯಾಂಕ್‍ನ ಸಿಬ್ಬಂದಿ ಒಬ್ಬರಿಗೆ ಸೋಂಕು ತಗುಲಿದ್ದು, ಉಳಿದ ಸಿಬ್ಬಂದಿ ಮತ್ತು ಗ್ರಾಹಕರು ಆತಂಕಕ್ಕೀಡಾಗಿದ್ದಾರೆ. ಕೋವಿಡ್ ಪರೀಕ್ಷೆಗೆ ಒಳಗಾಗಿದ್ದ ಸಿಬ್ಬಂದಿಗೆ ಶುಕ್ರವಾರ ಸೋಂಕು ಇರುವುದು ದೃಢವಾಗಿದೆ. ಮತ್ತೊಂದು ಪ್ರಕರಣದಲ್ಲಿ ಖಾಸಗಿ ಆಸ್ಪತ್ರೆಯ ಮತ್ತೊಬ್ಬ ಸಿಬ್ಬಂದಿಗೆ ಸೋಂಕು ತಗುಲಿದೆ. ಇತ್ತೀಚೆಗೆ ಈ ಆಸ್ಪತ್ರೆಯ ವೈದ್ಯರೊಬ್ಬರಿಗೆ ಕರೋನ ಸೋಂಕು ತಗುಲಿತ್ತು. ಈಗ ಅವರ ಸಹಾಯಕಿಗೂ ಕರೋನ ಸೋಂಕು ದೃಢವಾಗಿದೆ. ಚಿತ್ರದುರ್ಗದಿಂದ ಬಂದಿದ್ದ ಯುವತಿಯೊಬ್ಬಳಿಗೆ ಕರೋನ … Read more

ಕಳ್ಳನಿಗೆ ಕರೋನ, ಹಿಡಿದು ತಂದ ಮೂವರು ಪೊಲೀಸರಿಗೆ ಕ್ವಾರಂಟೈನ್, ಪೊಲೀಸ್ ಠಾಣೆ ಸ್ಯಾನಿಟೈಸೇಷನ್

100720 Shikaripura Police Station Sanitization 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 10 ಜುಲೈ 2020 ಕಳ್ಳನೊಬ್ಬನಿಗೆ ಕರೋನ ಸೋಂಕು ತಗುಲಿದ್ದು ಆತನನ್ನು ಹಿಡಿದು ತಂದ ಮೂವರು ಪೊಲೀಸರು ಕ್ವಾರಂಟೈನ್‍ಗೆ ಒಳಗಾಗಿದ್ದಾರೆ. ಪೊಲೀಸ್ ಠಾಣೆಯನ್ನು ಸ್ಯಾನಿಟೈಸ್ ಮಾಡಲಾಗಿದೆ. ಕಳ್ಳನನ್ನು ಹೊನ್ನಾಳಿಯಿಂದ ಬಂಧಿಸಿ ಶಿಕಾರಿಪುರ ಠಾಣೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲು ಸಿದ್ಧತೆ ನಡೆಸಿದ್ದರು. ಇದಕ್ಕೂ ಮೊದಲು ಆರೋಗ್ಯ ತಪಾಸಣೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಸ್ವ್ಯಾಬ್ ಟೆಸ್ಟ್ ಮಾಡಲಾಗಿತ್ತು. ಕಳ್ಳನಿಗೆ ಕರೋನ ಪಾಸಿಟಿವ್ ಬಂದಿದೆ. ಹಾಗಾಗಿ ಮೂವರು ಪೊಲೀಸರನ್ನು ಕ್ವಾರಂಟೈನ್‍ಗೆ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಬ್ಬ ಕರೋನ ಸೋಂಕಿತ ಸಾವು, ಏಳಕ್ಕೆ ಏರಿದ ಸಾವಿನ ಸಂಖ್ಯೆ

Mc Gann Hospital Building

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಜುಲೈ 2020 ಶಿವಮೊಗ್ಗದಲ್ಲಿ ಕರೋನ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಬೆನ್ನಿಗೆ ಸೋಂಕಿತರು ಮೃತರಾಗುತ್ತಿರುವ ಸಂಖ್ಯೆಯು ಏರಿಕೆಯಾಗುತ್ತಿದೆ. ಕರೋನಾಗೆ ತುತ್ತಾಗಿದ್ದ ವ್ಯಕ್ತಿಯೊಬ್ಬರು ಗುರುವಾರ ಮೃತರಾಗಿದ್ದು ಒಟ್ಟು ಸೋಂಕಿತರ ಕೊನೆಯುಸಿರೆಳೆದ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಈಗ ಮೃತರಾಗಿದ್ದು ಯಾರು? ಶಿಕಾರಿಪುರ ತಾಲೂಕಿನ ಖವಾಸಪುರ ಗ್ರಾಮದ ವೃದ್ಧರೊಬ್ಬರಿಗೆ ಕರೋನಾ ಸೋಂಕಿಗೆ ತುತ್ತಾಗಿದ್ದರು. ಇವರಿಗೆ 64 ವರ್ಷ ವಯಸ್ಸಾಗಿತ್ತು. ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗಿದ್ದ ಇವರು ಮೊದಲು ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. … Read more