ಕಂಟೈನ್ಮೆಂಟ್ ಜೋನ್ನಲ್ಲಿದ್ದ ಜನರಿಂದಲೇ ಪ್ರತಿಭಟನೆ, ಅಧಿಕಾರಿಗಳ ನಡೆ ವಿರುದ್ಧ ಆಕ್ರೋಶ, ಕಾರಣವೇನು?

300620 Shikaripura Containment Zone Protest copy 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 30 ಜೂನ್ 2020 ಸರ್ಕಾರದ ಸೂಚನೆಗಳನ್ನು ಅಧಿಕಾರಿಗಳು ಸರಿಯಾಗಿ ಪಾಲಿಸುತ್ತಿಲ್ಲ ಎಂದು ಆರೋಪಿಸಿ, ಶಿಕಾರಿಪುರದ ಕಂಟೈನ್ಮೆಂಟ್ ಜೋನ್‍ನಲ್ಲಿರುವ ಜನರು ಪ್ರತಿಭಟನೆ ನಡೆಸಿದರು. ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು. ವ್ಯಕ್ತಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಕುಂಬಾರ ಬೀದಿಯಲ್ಲಿ ಕಂಟೈನ್ಮೆಂಟ್ ಜೋನ್ ರಚಿಸಲಾಗಿದೆ. ಆದರೆ ಒಂದು ವಾರ ಕಳೆದರೂ ಏರಿಯಾದಲ್ಲಿ ಸ್ಯಾನಿಟೈಸೇಷನ್ ಮಾಡಿಲ್ಲ. ಆರೋಗ್ಯ ತಪಾಸಣೆಯನ್ನೂ ನಡೆಸಿಲ್ಲ. ಸರ್ಕಾರ ಕೊಟ್ಟ ಯಾವುದೇ ಸೂಚನೆಗಳನ್ನು ಅಧಿಕಾರಿಗಳು ಪಾಲಿಸುತ್ತಿಲ್ಲ ಎಂದು ತಾಲೂಕು ಆಡಳಿತದ ವಿರುದ್ಧ … Read more

ಶಿಕಾರಿಪುರದ ಬಹು ನಿರೀಕ್ಷಿತ ನಿರಾವರಿ ಯೋಜನೆ ಕಾಮಗಾರಿ ಪರಿಶೀಲಿಸಿದ ಸಂಸದ ರಾಘವೇಂದ್ರ

290620 Hirekeruru Shikaripura Irrigation project 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 29 ಜೂನ್ 2020 ಶಿಕಾರಿಪುರ ತಾಲೂಕಿನ ಹಲವು ಭಾಗಕ್ಕೆ ನೀರು ಒದಗಿಸುವ ಉಡುಗಣಿ – ತಾಳಗುಂದ ಏತ ನೀರಾವರಿ ಯೋಜನೆ ಕಾಮಗಾರಿಯನ್ನು, ಇವತ್ತು ಸಂಸದ ಬಿ.ವೈ.ರಾಘವೇಂದ್ರ ಪರಿಶೀಲನೆ ನಡೆಸಿದರು. ಆ ಭಾಗದ ರೈತರನ್ನು ಕರೆಯಿಸಿ ಯೋಜನೆ ಕುರಿತು ಮಾಹಿತಿ ನೀಡಿದರು. ಎಲ್ಲಿ ನಡೆಯುತ್ತಿದೆ ಯೋಜನೆ? ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕು ಚಟ್ನಹಳ್ಳಿ ಗ್ರಾಮದಲ್ಲಿ ಜಾಕ್ ವೆಲ್ ನಿರ್ಮಾಣ ಕಾಮಗಾರಿಯನ್ನು ಸಂಸದ ರಾಘವೇಂದ್ರ ಪರಿಶೀಲನೆ ನಡೆಸಿದರು. ಈ ವೇಳೆ ಸುದ್ದಿಗಾರರೊಂದಿಗೆ … Read more

ಬೆಂಗಳೂರು ನಂಟು, ಮಹಿಳೆಗೆ ಕರೋನ, ಶಿರಾಳಕೊಪ್ಪದ ರಸ್ತೆ ಸೀಲ್ ಡೌನ್

280620 Ripponpete Road sealdown 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಜೂನ್ 2020ಬೆಂಗಳೂರಿಂದ ಹಿಂತಿರುಗಿದ್ದ ಮಹಿಳೆಯೊಬ್ಬರಿಗೆ ಕರೋನ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಶಿರಾಳಕೊಪ್ಪದ ರಸ್ತೆಯೊಂದನ್ನು ಸೀಲ್ ಡೌನ್ ಮಾಡಲಾಗಿದೆ. ಬೆಂಗಳೂರಿಗೆ ತೆರಳಿದ್ದ ಮಹಿಳೆ ಜೂ.23ರಂದು ಶಿರಾಳಕೊಪ್ಪಕ್ಕೆ ಕಾರಿನಲ್ಲಿ ಹಿಂತಿರುಗಿದ್ದರು. ಆರೋಗ್ಯ ಇಲಾಖೆ ಸಿಬ್ಬಂದಿ ಇವರ ಗಂಟಲು ದ್ರವ ಪರೀಕ್ಷೆ ನಡೆಸಿದ್ದರು. ಆಗ ಮಹಿಳೆಗೆ ಕರೋನ ಸೋಂಕು ತಗುಲಿರುವುದು ದೃಢವಾಗಿದೆ. ತಕ್ಷಣ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಾಥಮಿಕ ಸಂಪರ್ಕ ಪತ್ತೆ ಮಹಿಳೆಯ ಕುಟುಂಬದ ಆರು ಮಂದಿಯ ಗಂಟಲು … Read more

ಪಿ9546 ಸಂಪರ್ಕ ತಂದ ಸಂಕಷ್ಟ, ಮತ್ತೆ ಒಂಭತ್ತು ಮಂದಿಗೆ ಕರೋನ, ಶಿವಮೊಗ್ಗ ಜಿಲ್ಲೆಯಲ್ಲಿ ಆತಂಕ

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಜೂನ್ 2020ಮೃತ ವೃದ್ಧೆಯ ಸಂಪರ್ಕದಲ್ಲಿದ್ದ ಮತ್ತಷ್ಟು ಮಂದಿಗೆ ಜಿಲ್ಲೆಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದು ಶಿಕಾರಿಪುರ ತಾಲೂಕಿನಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ತಾಲೂಕಿನ ಖವಾಸಪುರ ಗ್ರಾಮದ ವೃದ್ಧೆಯ ಸಂಬಂಧಿಕರು, ಅಕ್ಕಪಕ್ಕದ ಮನೆಯವರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಜೂ.27ರ ವರದಿಯಲ್ಲಿ 13 ಮಂದಿಗೆ ಸೋಂಕು ತಗುಲಿದೆ ಎಂದು ತಿಳಿಸಲಾಗಿದೆ. ಈ ಪೈಕಿ 9 ಮಂದಿಗೆ ಕರೋನ ಬರಲು ಕಾರಣ ವೃದ್ಧೆಯ ಸಂಪರ್ಕ ಎಂದು ತಿಳಿದು ಬಂದಿದೆ. ಒಟ್ಟು 11 ಸೋಂಕಿತರುಜೂ.26ರಂದು … Read more

ಶಿಕಾರಿಪುರದ ಮೃತ ವೃದ್ಧೆಯ ಕುಟುಂಬದ ಇಬ್ಬರಿಗೆ ಕರೋನ, ಇಡೀ ಊರು ಸೀಲ್ ಡೌನ್

SHIKARIPURA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಜೂನ್ 2020 ಕರೋನಾದಿಂದ ಮೃತಪಟ್ಟ ವೃದ್ಧೆಯ ಸಂಪರ್ಕದಲ್ಲಿದ್ದ ಕುಟುಂಬದ ಇಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ. ಇದು ಶಿಕಾರಿಪುರ ತಾಲೂಕಿನಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಜೂ.೨೨ರಂದು ೭೫ ವರ್ಷದ ವೃದ್ಧೆ ಮೃತಪಟ್ಟಿದ್ದರು. ಮೃತ ಮಹಿಳೆಗೆ ಕರೋನದ ಒಂದು ಬಗೆಯಾದ ಸಾರಿ (SARI) ಇತ್ತು ಎಂದು ವರದಿಯಲ್ಲಿ ತಿಳಿಸಲಾಗಿತ್ತು. ಈಗ ಅವರ ಸಂಪರ್ಕದಲ್ಲಿದ್ದ ಕುಟುಂಬದ ಇಬ್ಬರಲ್ಲೇ ಸೋಂಕು ಕಾಣಿಸಿಕೊಂಡಿದೆ. ವೃದ್ಧೆಯ ಕುಟುಂಬದ 40 ವರ್ಷದ ಪುರುಷ ಪಿ10829 ಮತ್ತು ೨೦ ವರ್ಷದ … Read more

ಶನಿವಾರ ವೃದ್ಧೆ ಸಾವು, ಸೋಮವಾರ ಬಂತು ಕರೋನ ರಿಪೋರ್ಟ್, ಊರಿಗೂರೆ ಶಾಕ್, ಶಿವಮೊಗ್ಗ ಜಿಲ್ಲಾಡಳಿತಕ್ಕೆ ಹೊಸ ತಲೆನೋವು

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 23 ಜೂನ್ 2020 ಉಸಿರಾಟದ ಸಮಸ್ಯೆಯಿಂದ ಮೃತಪಟ್ಟ ವೃದ್ಧೆಯೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಮೃತ ಮಹಿಳೆಯ ಗಂಟಲು ದ್ರವ ಮಾದರಿಯ ಸ್ಯಾಂಪಲ್ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ತಗುಲಿರುವುದು ದೃಢವಾಗಿದೆ. ಇದು ತಾಲೂಕಿನಲ್ಲಿ ಆತಂಕ ಸೃಷ್ಟಿಸಿದೆ. ಇನ್ನು ಕರೋನ ಮಾರ್ಗಸೂಚಿಯಂತೆ ಅಂತ್ಯಕ್ರಿಯೆ ನಡೆಯದೆ ಇರುವುದು ಜಿಲ್ಲಾಡಳಿತಕ್ಕೆ ತಲೆ ನೋವು ತರಿಸಿದೆ. ಯಾರಿದು ವೃದ್ಧೆ? ಎಲ್ಲಿಯವರು? ಶಿಕಾರಿಪುರ ತಾಲೂಕಿನ ಖವಾಸಪುರದ ವೃದ್ಧೆಯೊಬ್ಬರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಶನಿವಾರ ಇವರು ಮೃತಪಟ್ಟಿದ್ದಾರೆ. ವೃದ್ಧೆಯ … Read more

ವಿಷ ಕುಡಿದು ಮಹಿಳೆ ಸಾವು, ವಿಜ್ಞಾನಿ, ಎಂಜಿನಿಯರ್, ಟೀಚರ್ ವಿರುದ್ಧ ಕೇಸ್, ವಿಷ ಸೇವಿಸಲು ಕಾರಣವೇನು?

SHIKARIPURA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 14 ಜೂನ್ 2020 ಜಮೀನು ವಿಚಾರವಾಗಿ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣ ಸಂಬಂಧ ವಿಜ್ಞಾನಿ, ಎಂಜಿನಿಯರ್ ಮತ್ತು ಟೀಚರ್ ವಿರುದ್ಧ ಕೇಸ್ ದಾಖಲಾಗಿದೆ. ಶಿಕಾರಿಪುರ ತಾಲೂಕು ಕಾಗಿನೆಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ಕಾಗಿನೆಲ್ಲಿ ಗ್ರಾಮದ ಸುಶೀಲಮ್ಮ(43) ವಿಷ ಸೇವಿಸಿ ಮೃತರಾಗಿದ್ದಾರೆ. ಸುಶೀಲಮ್ಮ ಅವರು ಶನಿವಾರ ವಿಷ ಸೇವಿಸಿದ್ದಾರೆ. ಕೂಡಲೇ ಅವರನ್ನು ಶಿಕಾರಿಪುರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ … Read more

ಶಿವಮೊಗ್ಗದಲ್ಲಿ ಕರೋನ ಕಂಟೈನ್ಮೆಂಟ್ ಜೋನ್ ಹೆಚ್ಚಳ, ಮೂರು ಗ್ರಾಮ ಸಂಪೂರ್ಣ ಸ್ಥಬ್ಧ, ಯಾವೆಲ್ಲ ಗ್ರಾಮಗಳು ಗೊತ್ತಾ?

150520 Rajadakatte Sealdown 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಮೇ 2020 ಶಿವಮೊಗ್ಗ ಜಿಲ್ಲೆಯಲ್ಲಿ ಕಂಟೈನ್ಮೆಂಟ್ ಜೋನ್‍ಗಳ ಸಂಖ್ಯೆ ಹೆಚ್ಚಳವಾಗಿದೆ. ಈ ತನಕ ಒಂದೆ ಕಂಟೈನ್ಮೆಂಟ್ ಜೋನ್ ಇತ್ತು. ಆದರೆ ಎರಡು ಹೊಸ ಪಾಸಿಟಿವ್ ಪ್ರಕರಣದಿಂದ ಕಂಟೈನ್ಮೆಂಟ್ ಜೋನ್ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಕಂಟೈನ್ಮೆಂಟ್ ಜೋನ್ 1 | ತೀರ್ಥಹಳ್ಳಿ ತಾಲೂಕಿನ ಗ್ರಾಮ ಪೇಷೆಂಟ್ ನಂಬರ್ 995 ಮುಂಬೈನಿಂದ ತೀರ್ಥಹಳ್ಳಿ ತಾಲೂಕು ಹಳ್ಳಿಕಬೈಲು ಗ್ರಾಮಕ್ಕೆ ಬಂದಿದ್ದರು. ಮರು ದಿನವೆ ಇವರಿಗೆ ಕರೋನ ಪಾಸಿಟಿವ್ ಬಂದಿತ್ತು. ಪಿ995 ಮತ್ತು … Read more

ಶಿವಮೊಗ್ಗ ಜಿಲ್ಲಾಡಳಿತಕ್ಕೆ ತಲೆನೋವು ತಂದ ಪೇಷಂಟ್ ನಂಬರ್ 1304, ಪೊಲೀಸರು, ಅಧಿಕಾರಿಗಳೇ ಕ್ವಾರಂಟೈನ್

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಮೇ 2020 ಕರೋನ ಸೋಂಕಿತ ಪೇಷಂಟ್‍ ನಂಬರ್ 1304 ಶಿವಮೊಗ್ಗ ಜಿಲ್ಲಾಡಳಿತಕ್ಕೆ ದೊಡ್ಡ ತಲೆನೋವು ತಂದಿದೆ. ಸೋಂಕಿತೆಗೆ ಆಪ್ತ ಸಮಾಲೋಚನೆ ನಡೆಸಿದ್ದ ಅಧಿಕಾರಿಗಳೆಲ್ಲ ಈಗ ಕ್ವಾರಂಟೈನ್‍ಗೆ ಒಳಗಾಗುವಂತಾಗಿದೆ. 15 ವರ್ಷದ ಬಾಲಕಿಯನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆತಂದು ಆರೋಗ್ಯ ತಪಾಸಣೆ ನಡೆಸಲಾಗುತ್ತಿತ್ತು. ಪ್ರಕರಣವೊಂದರ ಸಂಬಂಧ ಈ ಬಾಲಕಿಯನ್ನು ಪೊಲೀಸರು ವಿಚಾರಣೆ ನಡೆಸಿದ್ದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಬ್ಬಂದಿ ಈ ಬಾಲಕಿಗೆ ಆಪ್ತ ಸಮಾಲೋಚನೆಯನ್ನು ನಡೆಸಿದ್ದರು ಎಂದು … Read more

ಮದುವೆ ಲೈವ್, ಶಿಕಾರಿಪುರದಲ್ಲಿ ಡಿಫರೆಂಟ್ ಕಲ್ಯಾಣ, ಸಂಬಂಧಿಕರು, ಸ್ನೇಹಿತರಿಗೆ ಆಮಂತ್ರಣ ಪತ್ರಿಕೆ ಜೊತೆಗೆ ಲೈವ್ ಲಿಂಕ್

190520 Ulli Darshan Marriage Live on Youtube 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 19 ಮೇ 2020 ಒಂದೆಡೆ ಕರೋನ ಆತಂಕ. ಮತ್ತೊಂದು ಕಡೆ ಸಾಮಾಜಿಕ ಅಂತರ ಪಾಲಿಸಬೇಕು ಎಂಬ ಕಟ್ಟಪ್ಪಣೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಯುವ ನಾಯಕರೊಬ್ಬರು ವಿಭಿನ್ನವಾಗಿ ಸಪ್ತಪದಿ ತುಳಿದಿದ್ದಾರೆ. ಇವರ ವಿವಾಹದ ಶೈಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೇಗಾಯ್ತು ಮದುವೆ? ಶಿಕಾರಿಪುರ ತಾಲೂಕಿನ ಕಾಂಗ್ರೆಸ್ ಪಕ್ಷದ ಯುವ ಘಟಕದ ಅಧ್ಯಕ್ಷ ದರ್ಶನ್ ಉಳ್ಳಿ ಭದ್ರಾವತಿ ತಾಲೂಕು ಹೊನ್ನೆಹಟ್ಟಿಯ ಪ್ರತಿಮಾ ಅವರೊಂದಿಗೆ ಸೋಮವಾರ ವಿವಾಹವಾಗಿದ್ದಾರೆ. ಸರ್ಕಾರದ ಸೂಚನೆಯಂತೆ … Read more