BREAKING NEWS – ಶಿವಮೊಗ್ಗದಲ್ಲಿ ಆರೋಪಿ ಕಾಲಿಗೆ ಗುಂಡು ಹೊಡೆದ ಪೊಲೀಸರು

Police-use-gun-at-malligenahalli-in-Shimoga

SHIVAMOGGA LIVE NEWS | 25 MARCH 2024 SHIMOGA : ಬಂಧನಕ್ಕೆ ತೆರಳಿದ್ದ ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿ ಕಾಲಿಗೆ ಗುಂಡು ಹಾರಿಸಿಲಾಗಿದೆ. ಫಾರು ಎಂಬಾತನ ಕಾಲಿಗೆ ಇಂದು ಬೆಳಗ್ಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿ ಫಾರು ಎಂಬಾತ ಮಲ್ಲಿಗೇನಹಳ್ಳಿ ಬಳಿ ಇರುವ ಕುರಿತು ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಆತನ ಬಂಧನಕ್ಕೆ ತೆರಳಿದ್ದ ವೇಳೆ ತುಂಗಾ ನಗರ ಠಾಣೆ ಸಿಬ್ಬಂದಿ ನಾಗಪ್ಪ ಅವರ ಮೇಲೆ ಆರೋಪಿ ಫಾರು ಚಾಕುವಿನಿಂದ … Read more

ಗಾಜನೂರು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮಾ.23ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ?

power cut mescom ELECTRICITY

SHIVAMOGGA LIVE NEWS | 22 MARCH 2024 SHIMOGA : ಗಾಜನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಮಾ.23 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಗೆವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಗಾಜನೂರು, ಕ್ಯಾಂಪ್ ಮತ್ತು ಡ್ಯಾಮ್, ಸಕ್ಕರೆಬೈಲು, ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರಿನ ಸ್ಥಾವರ, ಹಾಲಲಕ್ಕವಳ್ಳಿ, ಕಡೆಕಲ್, ಯರಗನಾಳ್, ಕುಸ್ಕೂರು, ಶ್ರೀಕಂಠಪುರ, ವೀರಾಪುರ, ತಟ್ಟಿಕೆರೆ, ಹೊಸಕೊಪ್ಪ, … Read more

ಶಿವಮೊಗ್ಗ – ಸವಳಂಗ ರಸ್ತೆಯಲ್ಲಿ ಟೋಲ್‌ ಗೇಟ್‌ಗೆ ಬಸ್‌ ಅಡ್ಡ ನಿಲ್ಲಿಸಿ ದಿಢೀರ್‌ ಪ್ರತಿಭಟನೆ

Bus Owners Protest in Kallapura toll gate in Shimoga savalanga road

SHIVAMOGGA LIVE NEWS | 19 MARCH 2024 SHIMOGA : ರಾಜ್ಯ ಸರ್ಕಾರ ಕೂಡಲೆ ಟೋಲ್‌ ಸಂಗ್ರಹ ಕೈ ಬಿಡಬೇಕು ಎಂದು ಆಗ್ರಹಿಸಿ ಖಾಸಗಿ ಬಸ್‌ ಮಾಲೀಕರು ಕಲ್ಲಾಪುರದ ಟೋಲ್‌ ಗೇಟ್‌ ಮುಂದೆ ಬಸ್‌ಗಳನ್ನು ಅಡ್ಡ ನಿಲ್ಲಿಸಿ ದಿಢೀರ್‌ ಪ್ರತಿಭಟಿಸಿದರು. ಇದರಿಂದ ಶಿವಮೊಗ್ಗ – ಸವಳಂಗ ಮಧ್ಯೆ ವಾಹನ ಸಂಚಾರ ವ್ಯತ್ಯಯವಾಗಿತ್ತು. ಶಿವಮೊಗ್ಗ – ಶಿಕಾರಿಪುರ – ಹಾನಗಲ್‌ ರಾಜ್ಯ ಹೆದ್ದಾರಿಯ ಕಲ್ಲಾಪುರ ಮತ್ತು ಕುಟ್ರಳ್ಳಿಯಲ್ಲಿ ಟೋಲ್‌ ಗೇಟ್‌ಗಳನ್ನು ಸ್ಥಾಪಿಸಲಾಗಿದೆ. ಇದರಿಂದ ಖಾಸಗಿ ಬಸ್‌ ಮಾಲೀಕರಿಗೆ … Read more

ಆಗರದಹಳ್ಳಿಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಗುದ್ದಿದ ಬೈಕ್‌ | ಭದ್ರಾವತಿಯಲ್ಲಿ ಲಾರಿ ಚಾಲಕ ಸೇರಿ ಇಬ್ಬರ ಮೇಲೆ ಅಟ್ಯಾಕ್‌

crime name image

SHIVAMOGGA LIVE NEWS | 15 MARCH 2024 ‌ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್‌ HOLEHONNURU : ನಡೆದು ಹೋಗುತ್ತಿದ್ದ ವ್ಯಕ್ತಿಗೆ ಹಿಂಬದಿಯಿಂದ ಬೈಕ್‌ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದಾರೆ. ಅಗರದಳ್ಳಿ ಕ್ಯಾಂಪ್‌ನಲ್ಲಿ ಕೂಲಿ ಕೆಲಸಕ್ಕೆ ಹೋಗಿ ಸಿದ್ದರ ಕಾಲೋನಿಯ ಮನೆಗೆ ಮರಳುತ್ತಿದ್ದ ನಾಗರಾಜಪ್ಪ ಅವರಿಗೆ ಬೈಕ್‌ ಡಿಕ್ಕಿ ಹೊಡೆದಿದೆ. ಅಗರದಳ್ಳಿ ಕ್ಯಾಂಪ್‌ ಕಡೆಯಿಂದ ವೇಗವಾಗಿ ಬಂದ ಬೈಕ್‌ ಹಿಂಬದಿಯಿಂದ ನಾಗರಾಜಪ್ಪ ಅವರಿಗೆ ಡಿಕ್ಕಿ ಹೊಡೆದು ಗಾಯಗೊಂಡಿದ್ದಾರೆ. ಕೂಡಲೆ ನಾಗರಾಜಪ್ಪ ಅವರನ್ನು ಹೊಳೆಹೊನ್ನೂರು ಸಮುದಾಯ ಕೇಂದ್ರಕ್ಕೆ ಕರೆದೊಯ್ದು … Read more

ಹೇಳದೆ, ಕೇಳದೆ ಕೆರೆಯಿಂದ ಮಣ್ಣು ತೆಗೆದು ಸಾಗಣೆ, ಪಿಡಿಓ ದೂರು

Crime-News-General-Image

SHIVAMOGGA LIVE NEWS | 13 MARCH 2024 SHIMOGA : ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆದು ಸಾಗಣೆ ಮಾಡಲಾಗಿದೆ ಎಂದು ಆರೋಪಿಸಿ ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ದೂರು ನೀಡಿದ್ದಾರೆ. ವಿರುಪಿನಕೊಪ್ಪ ಗ್ರಾಮದ ಕೆರೆಗಳಲ್ಲಿ ಅಕ್ರಮವಾಗಿ ಮಣ್ಣು ತೆಗೆಯಲಾಗಿದೆ. ಶಿವಮೊಗ್ಗ ತಾಲೂಕಿನ ವಿರುಪಿನಕೊಪ್ಪದಲ್ಲಿ ಗ್ರಾಮ ಪಂಚಾಯಿತಿ ನಿರ್ವಹಣೆಯಲ್ಲಿರುವ ಕೆರೆಗಳಲ್ಲಿ ಅಕ್ರಮವಾಗಿ ಮಣ್ಣು ತೆಗೆದು ಸಾಗಣೆ ಮಾಡಲಾಗಿದೆ. ಈ ಸಂಬಂಧ ಗ್ರಾಮಸ್ಥರ ಮಾಹಿತಿ ಮೇರೆಗೆ ಪಿಡಿಒ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಮಣ್ಣು ತೆಗೆದಿರುವುದು … Read more

ಅಬ್ಬಲಗೆರೆಯ ಬಾರ್‌ನ ಬಾಗಿಲು ತೆಗೆಯಲು ಬಂದ ಕ್ಯಾಶಿಯರ್‌ಗೆ ಬೆಳಗ್ಗೆ ಕಾದಿತ್ತು ಶಾಕ್‌

Police-Jeep-at-Shimoga-General-Image

SHIVAMOGGA LIVE NEWS | 7 MARCH 2024 SHIMOGA : ಬಾರ್‌ ಅಂಡ್‌ ರೆಸ್ಟೋರೆಂಟ್‌ನ ಗೋಡೆಗೆ ಕನ್ನ ಕೊರೆದು ಕ್ಯಾಶ್‌ ಬಾಕ್ಸ್‌ನಲ್ಲಿದ್ದ ನಗದು ಮತ್ತು ವಿವಿಧ ಬ್ರ್ಯಾಂಡ್‌ನ ಮದ್ಯ ಕಳ್ಳತನ ಮಾಡಲಾಗಿದೆ. ಘಟನೆ ಸಂಬಂಧ ಕ್ಯಾಶಿಯರ್‌ ಶಿವಮೊಗ್ಗ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ಅಬ್ಬಲಗೆರೆಯಲ್ಲಿರುವ ದುರ್ಗ ಬಾರ್‌ ಅಂಡ್‌ ರೆಸ್ಟೋರೆಂಟ್‌ನಲ್ಲಿ ಘಟನೆ ಸಂಭವಿಸಿದೆ. ಮಾ.4ರಂದು ರಾತ್ರಿ 11 ಗಂಟೆಗೆ ವ್ಯವಹಾರ ಮುಗಿಸಿ ಬಾರ್‌ ಅಂಡ್‌ ರೆಸ್ಟೋರೆಂಟ್‌ ಬಂದ್‌ ಮಾಡಲಾಗಿತ್ತು. ಮರುದಿನ ಬೆಳಗ್ಗೆ ಬಂದ ಕನ್ನ ಕೊರೆದಿರುವುದು … Read more

ಶಿವಮೊಗ್ಗ ಜಿಲ್ಲೆಯ 2 ಟೋಲ್‌ಗಳಲ್ಲಿ ಯಾವ್ಯಾವ ವಾಹನಕ್ಕೆ ಎಷ್ಟು ನಿಗದಿಯಾಗಿದೆ ದರ? ಇಲ್ಲಿದೆ ಲಿಸ್ಟ್‌

toll-gate-at-savalanga-road-in-Shimoga-Shikaripura-road

SHIVAMOGGA LIVE NEWS | 29 FEBRUARY 2024 SHIMOGA : ಜಿಲ್ಲೆಯಲ್ಲಿ ಸ್ಥಾಪಿಸಿರುವ ಎರಡು ಟೋಲ್‌ ಪ್ಲಾಜಾಗಳಲ್ಲಿ ಮಾರ್ಚ್‌ 1ರಿಂದ ಟೋಲ್‌ ಸಂಗ್ರಹಿಸುವ ಕಾರ್ಯ ಅರಂಭವಾಗುವ ಸಾಧ್ಯತೆ ಇದೆ. ಈಗಾಗಲೆ ಪೂರ್ವ ಸಿದ್ಧತೆಗಳನ್ನು ನಡೆಸಲಾಗಿದೆ. ಅಲ್ಲದೆ ಟೋಲ್‌ ದರಗಳ ಪಟ್ಟಿಯು ಹೊರ ಬಿದ್ದಿದೆ. ಏನೆಲ್ಲ ಸಿದ್ಧತೆಯಾಗಿದೆ? ಸವಳಂಗ ಸಮೀಪ ನಿರ್ಮಿಸಲಾಗಿರುವ ಟೋಲ್‌ ಪ್ಲಾಜಾದಲ್ಲಿ ಬುಧವಾರ ಅಂತಿಮ ಹಂತದ ಸಿದ್ಧತೆ ನಡೆಸಲಾಯಿತು. ಗುತ್ತಿಗೆ ಪಡೆದಿರುವ ಸಂಸ್ಥೆಯ ಸಿಬ್ಬಂದಿ ಟೋಲ್‌ ಪ್ಲಾಜಾದ ವಿವಿಧ ಉಪಕರಣಗಳ ಪರಿಶೀಲನೆ ನಡೆಸಿದರು. ಸಿಸಿಟಿವಿ, … Read more

ಶಿವಮೊಗ್ಗದ ಸಿರಿಗೆರೆಯ ಕೊಟ್ಟಿಗೆಯಲ್ಲಿ 12 ಅಡಿಯ ಕಾಳಿಂಗ ಸರ್ಪ

King-Cobra-found-in-Sirigere-in-Shimoga

SHIVAMOGGA LIVE NEWS | 28 FEBRUARY 2024 SHIMOGA : ತಾಲೂಕಿನ ಸಿರಿಗೆರೆಯಲ್ಲಿ 12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ ಹಿಡಿಯಲಾಗಿದೆ. ಇಲ್ಲಿನ ಚಂದ್ರಶೇಖರಪ್ಪ ಎಂಬುವವರ ಮನೆಯ ಕೊಟ್ಟಿಗೆಯಲ್ಲಿ ಕಾಳಿಂಗ ಸರ್ಪ ಕಾಣಿಸಿಕೊಂಡಿತ್ತು. ಕೂಡಲೆ ಅರಣ್ಯ ಇಲಾಖೆಗೆ ಮಾಹಿತಿ ತಲುಪಿಸಲಾಗಿತ್ತು. ಉರಗ ರಕ್ಷಕ ಬೆಳ್ಳೂರು ನಾಗರಾಜ್‌ ಅವರು ಸ್ಥಳಕ್ಕೆ ಆಗಮಿಸಿ ಕಾಳಿಂಗ ಸರ್ಪ ಸೆರೆ ಹಿಡಿದಿದ್ದಾರೆ. ಈ ಕಾಳಿಂಗ ಸರ್ಪವು 12 ಅಡಿ ಉದ್ದ, 7.5 ಕೆ.ಜಿ ತೂಕವಿತ್ತು. ಅರಣ್ಯಾಧಿಕಾರಿಗಳ ನೇತೃತ್ವದಲ್ಲಿ ಕಾಳಿಂಗ ಸರ್ಪವನ್ನು … Read more

ನಡು ರಸ್ತೆಯಲ್ಲೆ ನಿಂತ ಬಸ್ಸು, ಅದೇ ಮಾರ್ಗದಲ್ಲಿ ಬಂತು ಸಂಸದರ ಕಾರು, ಮುಂದೇನಾಯ್ತು? ಫೋಟೊ ವೈರಲ್

250224 BY Rahavendra Helps KSRTC Passangers

SHIVAMOGGA LIVE NEWS | 25 FEBRUARY 2024 SHIMOGA : ಕೆಟ್ಟು ನಿಂತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಿಂದಾಗಿ ತೊಂದರೆಗೊಳಗಾಗಿದ್ದ ಪ್ರಯಾಣಿಕರಿಗೆ ಸಂಸದ ಬಿ.ವೈ.ರಾಘವೇಂದ್ರ ನೆರವು ನೀಡಿದ್ದಾರೆ. ಇದರ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಂಸದರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಬೆಂಗಳೂರಿನಿಂದ ಕುಮಟಾಗೆ ತೆರಳುತ್ತಿದ್ದ ಶಿರಸಿ ಉಪ ವಿಭಾಗಕ್ಕೆ ಸೇರಿದ ಸರ್ಕಾರಿ ಬಸ್, ಶಿವಮೊಗ್ಗದ ತ್ಯಾವರೆಕೊಪ್ಪ ಸಮೀಪ ಕೆಟ್ಟು  ರಸ್ತೆ ಬದಿಯಲ್ಲಿ ನಿಂತಿತ್ತು. ಇದರಿಂದ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕುವಂತಾಗಿತ್ತು. ಇದೇ ವೇಳೆ ಶಿವಮೊಗ್ಗದಿಂದ ಸಾಗರಕ್ಕೆ  ಕಾರಿನಲ್ಲಿ … Read more

ಅಕ್ಕಪಕ್ಕದ ಮನೆ ಮಹಿಳೆಯರಿಗೆಲ್ಲ ಅಶ್ಲೀಲ ಮೆಸೇಜ್‌, ಅಪರಿಚಿತನ ವಿರುದ್ಧ ದಾಖಲಾಯ್ತು ಕೇಸ್‌

Mobile Theft Case General Image

SHIVAMOGGA LIVE NEWS | 25 FEBRUARY 2024 KUMSI : ರಸ್ತೆಯಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೊಬೈಲ್‌ ಕಸಿದುಕೊಂಡು ಹೋಗಿದ್ದ ಕಳ್ಳನೊಬ್ಬ, ಅದರಲ್ಲಿರುವ ಯುವತಿಯರು, ಮಹಿಳೆಯರ ಮೊಬೈಲ್‌ ನಂಬರ್‌ಗೆ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದಾನೆ. ಈ ಸಂಬಂಧ ಯುವತಿ ದೂರು ನೀಡಿದ್ದಾಳೆ. ಶಿವಮೊಗ್ಗ ತಾಲೂಕು ಗ್ರಾಮವೊಂದರ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು  (ಹೆಸರು, ಊರು ಗೌಪ್ಯ) ಅಡ್ಡಗಟ್ಟಿ ಅಪರಿಚಿತನೊಬ್ಬ ಮೊಬೈಲ್‌ ಕಸಿದು ಪರಾರಿಯಾಗಿದ್ದ. ಡಿ.29ರಂದು ಘಟನೆ ಸಂಭವಿಸಿತ್ತು. ಯುವತಿಯ ಮೊಬೈಲ್‌ನಲ್ಲಿದ್ದ ಮಹಿಳೆಯರು, ಯುವತಿಯರ ನಂಬರ್‌ಗೆ ಕಳ್ಳ ಕರೆ ಮಾಡುತ್ತಿದ್ದ. … Read more