ಕೂಡ್ಲಿಗೆರೆಯಲ್ಲಿ ವ್ಯಕ್ತಿ ಮೇಲೆ ಹರಿದ ಖಾಸಗಿ ಶಾಲೆ ಬಸ್‌

Person-Succumbed-near-Kudligere-to-School-Bus-BDVT

SHIVAMOGGA LIVE | 7 JULY 2023 HOLEHONNURU : ಖಾಸಗಿ ಶಾಲೆ ಬಸ್‌ ಹರಿದು ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾರೆ (Succumbed). ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಕಚೇರಿ ಬಳಿ ಘಟನೆ ಸಂಭವಿಸಿದೆ. ಹಾವೇರಿ ಜಿಲ್ಲೆ ಬೆಳವಗಿ ಗ್ರಾಮದ ವಿಶ್ವನಾಥ ಕೊಟ್ರಪ್ಪ ಬಾಜಿಗುಂಡಿ (35) ಎಂಬಾತನ ಮೃತ (Succumbed) ವ್ಯಕ್ತಿ. ಖಾಸಗಿ ಶಾಲೆಯ ಬಸ್ಸು ಕಲ್ಪನಹಳ್ಳಿ ಕಡೆಯಿಂದ ಕೂಡ್ಲಿಗೆರೆಗೆ ಬರುವಾಗ ಘಟನೆ ಸಂಭವಿಸಿದೆ. ಚಾಲಕ ಬಸ್ಸನ್ನು ಬಿಟ್ಟು ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ … Read more

ಗಾಜನೂರು ತುಂಗಾ ಡ್ಯಾಂನ 12 ಗೇಟ್‌ ಓಪನ್‌, ಒಳ ಹರಿವು ಎಷ್ಟಿದೆ? ಹೊರ ಹೋಗುತ್ತಿರುವ ನೀರೆಷ್ಟು?

Gajanur-Tunga-Dam-2023-12-gates-opened.

SHIVAMOGGA LIVE | 7 JULY 2023 GAJANURU : ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾದ ಹಿನ್ನೆಲೆ ತುಂಗಾ ಜಲಾಶಯಕ್ಕೆ (Tunga Dam) ಒಳ ಹರಿವು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಹೆಚ್ಚುವರಿ ನೀರನ್ನು ಜಲಾಶಯದಿಂದ ಹೊರ ಬಿಡಲಾಗುತ್ತಿದೆ. ಪ್ರಸ್ತುತ ಡ್ಯಾಂನ 12 ಗೇಟ್‌ಗಳನ್ನು ಮೇಲೆತ್ತಲಾಗಿದೆ. ಒಳ, ಹೊರ ಹರಿವು ಎಷ್ಟಿದೆ? ಗಾಜನೂರಿನ ತುಂಗಾ ಜಲಾಶಯಕ್ಕೆ (Tunga Dam) ಪ್ರಸ್ತುತ 25,971 ಕ್ಯೂಸೆಕ್‌ ಒಳ ಹರಿವು ಇದೆ. ಈಗಾಗಲೇ ನೀರಿನ ಮಟ್ಟ ಗರಿಷ್ಠ ಹಂತಕ್ಕೆ ತಲುಪಿರುವುದರಿಂದ ಹೆಚ್ಚುವರಿ ನೀರನ್ನು … Read more

ಎರಡು ಊರಿನ ಮಧ್ಯೆ ಅಪಘಾತ, ಮೃತ ವ್ಯಕ್ತಿ ಬಳಿ ಇದ್ದ ಹಣ ನಾಪತ್ತೆ ಆರೋಪ, ಏನಿದು ಪ್ರಕರಣ?

Crime-News-General-Image

SHIVAMOGGA LIVE | 6 JULY 2023 HOLEHONNURU : ಜಾತ್ರೆಗೆ ಶಾಮಿಯಾನ (Shamiana) ಹಾಕಲು ಹಣ ಪಡೆದು ಬರುವುದಾಗಿ ತಿಳಿಸಿ ಹೋಗಿದ್ದ ವ್ಯಕ್ತಿಯೊಬ್ಬರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅಪಘಾತದ ನಂತರ ಮೃತ ವ್ಯಕ್ತಿಯ ಬಳಿ ಮೊಬೈಲ್‌ ಮಾತ್ರ ಇದ್ದು ಹಣ ಸಿಕ್ಕಿಲ್ಲ ಎಂದು ಕುಟುಂಬದವರು ಆಪಾದಿಸಿದ್ದಾರೆ. ಏನಿದು ಪ್ರಕರಣ? ಹಾರೊಬೆನವಳ್ಳಿ ನಿವಾಸಿ ಮಂಜನಾಯ್ಕ (40) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ತಮ್ಮ ಬೈಕಿನಲ್ಲಿ ಬಿ.ಬೀರನಹಳ್ಳಿಯಿಂದ ಹಾರೊಬೆನವಳ್ಳಿಗೆ ಬರುತ್ತಿದ್ದಾಗ ಅಪಘಾತವಾಗಿದೆ. ಅಪರಿಚಿತ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಇದನ್ನೂ ಓದಿ … Read more

ಗಾಜನೂರು ಜಲಾಶಯದ ಗೇಟ್‌ ಓಪನ್‌, ಹೊಳೆಗೆ ಹೆಚ್ಚುವರಿ ನೀರು

Gajanur-Tunga-Dam-one-gate-opened.

SHIVAMOGGA LIVE | 6 JULY 2023 SHIMOGA : ಗಾಜನೂರು ತುಂಗಾ ಜಲಾಶಯ (Tunga Dam) ಭರ್ತಿಯಾದ ಹಿನ್ನೆಲೆ ಒಂದು ಗೇಟ್‌ ಮೇಲೆತ್ತಲಾಗಿದೆ. ಹೆಚ್ಚುವರಿ ನೀರನ್ನು ಹೊಳೆಗೆ ಬಿಡಲಾಗುತ್ತಿದೆ. ಹಿನ್ನೀರು ಭಾಗದಲ್ಲಿ ನಿರಂತರ ಮಳೆಯಾದ ಹಿನ್ನೆಲೆ ಜಲಾಶಯಕ್ಕೆ (Tunga Dam) ಒಳ ಹರಿವು ಹೆಚ್ಚಾಗುತ್ತಿದೆ. ಆದ್ದರಿಂದ ಹೆಚ್ಚುವರಿ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಅಂದಾಜು ಎರಡು ಸಾವಿರ ಕ್ಯೂಸೆಕ್‌ ನೀರನ್ನು ಒಂದು ಗೇಟ್‌ ಮೂಲಕ ಹೊಳೆಗೆ ಬಿಡಲಾಗುತ್ತಿದೆ. ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಕಳೆದ … Read more

BREAKING NEWS – ಗಾಜನೂರಿನ ತುಂಗಾ ಡ್ಯಾಂ ಭರ್ತಿ, ಸಂಜೆಯೊಳಗೆ ಗೇಟ್‌ ಓಪನ್‌, ಒಳ ಹರಿವು ಎಷ್ಟಿದೆ?

050723 Gajanur Tunga Dam Full

SHIVAMOGGA LIVE | 5 JULY 2023 SHIMOGA : ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾದ ಹಿನ್ನೆಲೆ ಗಾಜನೂರಿನಲ್ಲಿರುವ ತುಂಗಾ ಜಲಾಶಯ (Tunga Dam) ಭರ್ತಿಯಾಗಿದೆ. ಇವತ್ತು ಸಂಜೆಯೊಳಗೆ ಯಾವುದೆ ಸಂದರ್ಭ ಜಲಾಶಯದ ಗೇಟ್‌ಗಳನ್ನು ಮೇಲೆತ್ತಿ ನೀರು ಹೊರಗೆ ಬಿಡುವ ಸಾಧ್ಯತೆ ಇದೆ. ತುಂಗಾ ಜಲಾಶಯದಲ್ಲಿ (Tunga Dam) ಗರಿಷ್ಠ ನೀರಿನ ಸಂಗ್ರಹ ಮಟ್ಟ 588.24 ಅಡಿ. ಇವತ್ತು ನೀರಿನ ಮಟ್ಟ 587.54 ಅಡಿಗೆ ತಲುಪಿದೆ. ಕಳೆದ 24 ಗಂಟೆ ಅವಧಿಯಲ್ಲಿ ನೀರಿನ ಮಟ್ಟ ಸುಮಾರು ಒಂದು … Read more

ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ಭೀಕರ ಅಪಘಾತ, ನುಜ್ಜುಗುಜ್ಜಾದ ಕಾರು, ಚಾಲಕ ಸಾವು, ಹೇಗಾಯ್ತು ಘಟನೆ?

Car-Bus-Accident-at-Sakrebyle-in-Shimoga-Thirthahalli-Road-Today.

SHIVAMOGGA LIVE | 4 JULY 2023 SHIMOGA : ಕಾರು ಮತ್ತು ಖಾಸಗಿ ಬಸ್‌ (Private Bus) ಡಿಕ್ಕಿಯಾಗಿದ್ದು ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ಸಕ್ರೆಬೈಲು ಸಮೀಪ ಘಟನೆ ಸಂಭವಿಸಿದೆ. ಕಾರು ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುತ್ತಿತ್ತು ಎಂದು ಹೇಳಲಾಗುತ್ತಿದೆ. ಬಸ್ಸು ತೀರ್ಥಹಳ್ಳಿಯಿಂದ ಶಿವಮೊಗ್ಗ ಕಡೆಗೆ ಸಾಗುತ್ತಿತ್ತು. ಕಾರಿನಲ್ಲಿದ್ದ ಮೂವರ ಪೈಕಿ ಓರ್ವ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಗಾಯಗೊಂಡಿದ್ದು ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತ ವ್ಯಕ್ತಿ ಮತ್ತು ಗಾಯಾಳುಗಳ ಗುರುತು ಇನ್ನಷ್ಟೆ … Read more

ಶಿವಮೊಗ್ಗದಲ್ಲಿ ಆರೋಪಿ ಕಾಲಿಗೆ ಗುಂಡು ಹೊಡೆದ ಪೊಲೀಸರು, ಯಾರದು ಆರೋಪಿ? ಗುಂಡು ಹಾರಿಸಿದ್ದೇಕೆ?

Police-Van-Jeep-at-Shimoga-Nehru-Road

SHIVAMOGGA LIVE | 3 JULY 2023 SHIMOGA : ಕೊಲೆ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನ ಕಾಲಿಗೆ ಶಿವಮೊಗ್ಗ ಪೊಲೀಸರು ಗುಂಡು (BULLET) ಹಾರಿಸಿದ್ದಾರೆ. ಬಂಧಿಸಲು ತೆರಳಿದ್ದ ವೇಳೆ ಪೊಲೀಸ್‌ ಸಿಬ್ಬಂದಿ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದರಿಂದ ಪೊಲೀಸರು ಆರೋಪಿ ಕಾಲಿಗೆ ಗುಂಡು ಹೊಡೆದಿದ್ದಾರೆ. ಸೈಫುಲ್ಲಾ ಖಾನ್‌ ಅಲಿಯಾಸ್‌ ಸೈಫು ಎಂಬಾತನ ಕಾಲಿಗೆ ಗುಂಡು ಹಾರಿಸಲಾಗಿದೆ. ಆಯನೂರು ಸಮೀಪದ ದೊಡ್ಡದಾನವಂದಿ ಗ್ರಾಮದಲ್ಲಿ ಸೈಫುನನ್ನು ಬಂಧಿಸಲು ತೆರಳಿದ್ದ ವೇಳೆ ಘಟನೆ ಸಂಭವಿಸಿದೆ. ಆಸ್ಪತ್ರೆಗೆ ಆರೋಪಿ ಶಿಫ್ಟ್‌ … Read more

ಶಾಸಕಿ ಶಾರದಾ ಪೂರ್ಯಾನಾಯ್ಕ್‌ಗೆ ವಿಧಾನಸಭೆಯಲ್ಲಿ ಮಹತ್ವದ ಜವಾಬ್ದಾರಿ ವಹಿಸಿದ ಜೆಡಿಎಸ್‌

Sharadha-Puryanaik-Shivamogga-Rural-MLA

SHIVAMOGGA LIVE | 3 JULY 2023 SHIMOGA : ಜೆಡಿಎಸ್‌ನ ಶಾಸಕಾಂಗ ಪಕ್ಷದ (Legislative Party) ನಾಯಕರಾಗಿ ಹೆಚ್‌.ಡಿ.ಕುಮಾರಸ್ವಾಮಿ, ಉಪ ನಾಯಕಿಯಾಗಿ ಶಾಸಕಿ ಶಾರದಾ ಪೂರ್ಯಾನಾಯ್ಕ್‌ ಆಯ್ಕೆಯಾಗಿದ್ದಾರೆ. ಈ ಸಂಬಂಧ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ವಿಧಾನಸಭೆ ಅಧ್ಯಕ್ಷರಿಗೆ ಪತ್ರ ರವಾನಿಸಿದ್ದಾರೆ. ಒಲಿದ ಮಹತ್ವದ ಜವಾಬ್ದಾರಿ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ್‌ ಅವರಿಗೆ ಜೆಡಿಎಸ್‌ ಪಕ್ಷ ಮಹತ್ವದ ಜವಾಬ್ದಾರಿ ವಹಿಸಿದೆ. ವಿಧಾನಸಭೆಯಲ್ಲಿ ಶಾಸಕಾಂಗ ಪಕ್ಷದ (Legislative Party) ನಾಯಕ, ಉಪ ನಾಯಕ ಹುದ್ದೆ ಅತ್ಯಂತ … Read more

ಸಭೆಗಳು ನಡೆಯುವುದು ಕಾಫಿ, ಟೀ ಕುಡಿಯಲು ಅಲ್ಲ, ನೀರಿನ ಸಮಸ್ಯೆ ಬಗೆಹರಿಯದಿದ್ದರೆ ಕಚೇರಿಗೆ ಜನ ಕಳುಹಿಸುವೆ

Shimoga-Rural-MLA-held-KDP-Meeting-at-Taluk-Panchayath

SHIVAMOGGA LIVE | 29 JUNE 2023 SHIMOGA : ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿಗೆ (Drinking Water) ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕಿದೆ. ಎಲ್ಲೆಲ್ಲಿ ಕುಡಿಯುವ ನೀರಿನ ಅಗತ್ಯವಿದೆಯೋ ಅಲ್ಲೆಲ್ಲ ಜಲಜೀವನ ಮಿಷನ್‌ ಮತ್ತು 15ನೇ ಹಣಕಾಸು ಯೋಜನೆ ಅನುದಾನದಲ್ಲಿ ಕೊಳವೆ ಬಾವಿ ಕೊರೆಸುವಂತೆ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ್‌ ಅಧಿಕಾರಿಗಳಿಗೆ ಸೂಚಿಸಿದರು. ಶಿವಮೊಗ್ಗ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಶಾಸಕಿ, ಕುಡಿಯುವ ನೀರಿಗಾಗಿ (Drinking Water) ಟಾಸ್ಕ್‌ ಫೋರ್ಸ್‌ ಬಿಡುಗಡೆ … Read more

ಹೊಳೆಹಟ್ಟಿ ಬಳಿ ಕೆಎಸ್‌ಆರ್‌ಟಿಸಿ ಬಸ್‌, ಬೈಕ್‌ ಡಿಕ್ಕಿ, ಸವಾರ ಸಾವು

ACCIDENT-NEWS-GENERAL-IMAGE.

SHIVAMOGGA LIVE | 23 JUNE 2023 HOLEHONNURU : ಬೈಕ್‌ ಮತ್ತು ಕೆಎಸ್‌ಆರ್‌ಟಿಸಿ ಬಸ್‌ ಮಧ್ಯೆ ಅಪಘಾತ (Mishap) ಸಂಭವಿಸಿದ್ದು, ಸವಾರ ಸಾವನ್ನಪ್ಪಿದ್ದಾನೆ. ಹೊಳೆಹಟ್ಟಿ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಇದನ್ನೂ ಓದಿ – ವೇಶ್ಯಾವಾಟಿಕೆ ಆರೋಪ, ಮನೆ ಮೇಲೆ ಪೊಲೀಸರ ದಾಳಿ, ಮೂವರು ಮಹಿಳೆಯರ ರಕ್ಷಣೆ, ಇಬ್ಬರು ಅರೆಸ್ಟ್‌ ಹಸೂಡಿ ಗ್ರಾಮದ ಮಂಜುನಾಥ (45) ಮೃತ ದುರ್ದೈವಿ. ಬೆಳಗಾವಿಯಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ಬಸ್‌ ಮತ್ತು ಬೈಕ್‌ ಮಧ್ಯೆ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ಮಂಜುನಾಥ ಮೃತಪಟ್ಟಿದ್ದಾರೆ. … Read more