ಸಂತೆ ಕಡೂರು, ಕಾಚಿನಕಟ್ಟೆ, ಉಂಬ್ಳೆಬೈಲು ಸೇರಿ ಹಲವು ಕಡೆ ಜ.12ರಂದು ಇಡೀ ದಿನ ಕರೆಂಟ್ ಇರಲ್ಲ

power cut mescom ELECTRICITY

SHIVAMOGGA LIVE NEWS | 11 JANUARY 2023 ಶಿವಮೊಗ್ಗ : ಮೆಸ್ಕಾಂ ವತಿಯಿಂದ ಸಂತೆ ಕಡೂರು ಗ್ರಾಮದಲ್ಲಿರುವ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜ.12ರಂದು ನಿರ್ವಹಣೆ ಕಾಮಗಾರಿ ಕೈಗೊಳ್ಳಲಾಗಿದೆ. ಈ ಹಿನ್ನೆಲೆ ತಾಲೂಕಿನ ವಿವಿಧೆಡೆ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (power cut) ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚಿನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೆಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, … Read more

ಶಿವಮೊಗ್ಗ ತಾಲೂಕು ಪಂಚಾಯಿತಿಗೆ 19 ಕ್ಷೇತ್ರ ಪ್ರಕಟ, ಯಾವ್ಯಾವ ಹಳ್ಳಿ ಯಾವ ಕ್ಷೇತ್ರಕ್ಕೆ ಸೇರುತ್ತೆ? ಇಲ್ಲಿದೆ ಪಟ್ಟಿ

SHIVAMOGGA-CITY-TALUK-NEWS-

SHIVAMOGGA LIVE NEWS |4 JANUARY 2023 SHIMOGA : ತಾಲೂಕು ಪಂಚಾಯಿತಿಗೆ 19 ಕ್ಷೇತ್ರಗಳನ್ನು ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ. ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. (shimoga taluk panchayat) 2021ಕ್ಕೂ ಮೊದಲು ಶಿವಮೊಗ್ಗದಲ್ಲಿ 14 ಕ್ಷೇತ್ರಗಳಿದ್ದವು. ಪುನರ್ ವಿಂಗಡಣೆ ಬಳಿಕ 15ಕ್ಕೆ ಏರಿಕೆಯಾಗಿತ್ತು. ಈಗ ಸೀಮಾ ನಿರ್ಣಯ ಆಯೋಗ 19 ಕ್ಷೇತ್ರಗಳನ್ನು ರಚಿಸಿದೆ. (shimoga taluk panchayat) ಯಾವ್ಯಾವ ಕ್ಷೇತ್ರಕ್ಕೆ ಯಾವ ಹಳ್ಳಿ ಸೇರುತ್ತೆ? ಕ್ಷೇತ್ರ 1 : ಗಾಜನೂರು ಗಾಜನೂರು ಅಗ್ರಾಹಾರ, … Read more

ಶಿವಮೊಗ್ಗದಲ್ಲಿ 31 ಜಿಲ್ಲಾ ಪಂಚಾಯಿತಿ ಕ್ಷೇತ್ರ ಪ್ರಕಟ, ಯಾವ್ಯಾವ ಊರು ಯಾವ ಕ್ಷೇತ್ರ ವ್ಯಾಪ್ತಿಗೆ ಒಳಪಟ್ಟಿದೆ? ಇಲ್ಲಿದೆ ಲಿಸ್ಟ್

Zilla-Panchayath-Contituency-update

SHIVAMOGGA LIVE NEWS |4 JANUARY 2023 ಶಿವಮೊಗ್ಗ : ಕರ್ನಾಟಕ ಪಂಚಾಯತ್ (zilla panchayat) ರಾಜ್ ಸೀಮಾ ನಿರ್ಣಯ ಆಯೋಗವು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಕರಡು ಪ್ರಕಟಿಸಿದೆ. ಶಿವಮೊಗ್ಗ (shimoga) ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಸಂಖ್ಯೆಯನ್ನು 31ಕ್ಕೆ ಸೀಮಿತಗೊಳಿಸಿದೆ. ಹೊಸ ಕ್ಷೇತ್ರಗಳು ಇಲ್ಲ 2021ರಲ್ಲಿ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ (constituency) ಮರು ವಿಂಗಡಣೆ ಮಾಡಲಾಗಿತ್ತು. ಆಗ 5 ಕ್ಷೇತ್ರಗಳನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿತ್ತು. ಶಿವಮೊಗ್ಗ ತಾಲೂಕಿನಲ್ಲಿ ಹರಮಘಟ್ಟ, ಸಾಗರದಲ್ಲಿ ಕುದರೂರು, ಶಿಕಾರಿಪುರದಲ್ಲಿ ಅಂಬಾರಗೊಪ್ಪ, ಹೊಸನಗರ ತಾಲೂಕಿನಲ್ಲಿ … Read more

ಹೊಳೆಹೊನ್ನೂರು ಸಮೀಪ ಸಿದ್ಲಿಪುರದಿಂದ ಸರ್ಕಾರಿ ಬಸ್ ಸಂಚಾರ ಶುರು

KSRTC-bus-inaguration-at-Sidlipura-in-Holehonnur

SHIVAMOGGA LIVE NEWS | 3 JANUARY 2023 ಹೊಳೆಹೊನ್ನೂರು : ಇಲ್ಲಿನ ಸಿದ್ಲಿಪುರ ಗ್ರಾಮದಲ್ಲಿ ಸರ್ಕಾರಿ ಬಸ್ (government bus) ಸೇವೆಗೆ ಶಾಸಕ ಕೆ.ಬಿ.ಅಶೋಕ್ ನಾಯ್ಕ್ ಚಾಲನೆ ನೀಡಿದರು. ಇದೆ ವೇಳೆ ಮಾತನಾಡಿದ ಅವರು, ಕೊರೋನ ಲಾಕ್ ಡೌನ್ ಹಿನ್ನೆಲೆ ಖಾಸಗಿ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಆ ಬಳಿಕ ಬಸ್ ಸಂಚಾರ ಪುನಾರಂಭಗೊಳ್ಳಲಿಲ್ಲ ಎಂದರು. ಬಸ್ ಗಳು ಇಲ್ಲದಿರುವುದರಿಂದ ವಿದ್ಯಾರ್ಥಿಗಳು ಶಾಲೆ, ಕಾಲೇಜಿಗೆ ತೆರಳುವುದು ಕಷ್ಟವಾಗುತ್ತಿದೆ. ಸಾರ್ವಜನಿಕರು ಪರದಾಡುವಂತಾಗಿದೆ. ಇದೆ ಕಾರಣಕ್ಕೆ ಎಲ್ಲೆಲ್ಲಿ ಬಸ್ ಸೇವೆ … Read more

ಆಯನೂರು – ರಿಪ್ಪನ್ ಪೇಟೆ ರಸ್ತೆಯಲ್ಲಿ ಟ್ಯಾಂಕರ್ ಪಲ್ಟಿ, ಅಗ್ನಿಶಾಮಕ ಸಿಬ್ಬಂದಿ ದೌಡು

tanker-lorry-accident-at-ayanur-ripponpete-road

SHIVAMOGGA LIVE NEWS | 22 DECEMBER 2022 ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಲಾರಿ (tanker lorry) ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಆಯನೂರು – ರಿಪ್ಪನ್ ಪೇಟೆ ಮಾರ್ಗ ಮಧ್ಯೆ 9ನೇ ಮೈಲಿಕಲ್ಲು ಬಳಿ ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ (tanker lorry) ರಸ್ತೆಯ ಬಲ ಭಾಗಕ್ಕೆ ಬಂದು ಪಲ್ಟಿಯಾಗಿದೆ. ಲಾರಿ ಶಿವಮೊಗ್ಗದ ಕಡೆಗೆ ಬರುತ್ತಿತ್ತು ಎಂದು ತಿಳಿದು ಬಂದಿದೆ. … Read more

ಶಿವಮೊಗ್ಗ ರಿಂಗ್ ರೋಡ್, ಜಿಲ್ಲೆಯ ಹಲವು ಹೆದ್ದಾರಿ ಅಭಿವೃದ್ಧಿಗೆ ಒಪ್ಪಿಗೆ, ಯಾವೆಲ್ಲ ರಸ್ತೆ ಅಭಿವೃದ್ಧಿಯಾಗುತ್ತೆ?

Shimoga-Bypass-Road

SHIVAMOGGA LIVE NEWS | 22 DECEMBER 2022 ಶಿವಮೊಗ್ಗ : ನಗರದ ಉತ್ತರ ಭಾಗದಲ್ಲಿ ಬಾಕಿ ಉಳಿದಿರುವ 15 ಕಿ.ಮೀ ಬೈಪಾಸ್ ರಸ್ತೆ ನಿರ್ಮಾಣ, ಬೈಂದೂರು – ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿ (national highway) ನಿರ್ಮಾಣಕ್ಕೆ ಮಂಜೂರಾತಿ ನೀಡಲು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಪ್ಪಿಗೆ ನೀಡಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಿಂಗ್ ರಸ್ತೆ ಪೂರ್ಣಗೊಳ್ಳಲಿದೆ ಶಿವಮೊಗ್ಗ ನಗರದ ಉತ್ತರ ಭಾಗದಲ್ಲಿ 15 ಕಿ.ಮೀ ಬೈಪಾಸ್ ರಸ್ತೆ (national highway) … Read more

ಪದ್ಮಶ್ರೀ ಪುರಸ್ಕೃತ ಶಿವಮೊಗ್ಗದ ಹೊಸಹಳ್ಳಿ ಕೇಶವಮೂರ್ತಿ ಇನ್ನಿಲ್ಲ, ಅವರ ಬಗ್ಗೆ ಗೊತ್ತಿರಬೇಕಾದ 4 ವಿಚಾರಗಳು ಇಲ್ಲಿವೆ

Padmashree-Keshavamurthy-No-More

SHIVAMOGGA LIVE NEWS | 21 DECEMBER 2022 ಶಿವಮೊಗ್ಗ : ಗಮಕ ಗಂಧರ್ವ (gamaka expert), ಪದ್ಮಶ್ರೀ ಪುರಸ್ಕೃತ ಹೊಸಹಳ್ಳಿ ಹೆಚ್.ಆರ್.ಕೇಶವಮೂರ್ತಿ (89) ಅವರು ನಿಧನರಾಗಿದ್ದಾರೆ. 2022ರಲ್ಲಿ ಕೇಂದ್ರ ಸರ್ಕಾರ ಹೆಚ್.ಆರ್.ಕೇಶವಮೂರ್ತಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಕೇಶವಮೂರ್ತಿ ಅವರಿಗೆ ಪದ್ಮಶ್ರೀ ಪಶ್ರಸ್ತಿ ನೀಡಿದ್ದರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಇದಕ್ಕೆ ಸಾಕ್ಷಿಯಾಗಿದ್ದರು. (gamaka expert) ಗೊತ್ತಿರಲೇಬೇಕಾದ 4 ವಿಚಾರಗಳು ಹೆಚ್‌.ಆರ್.ಕೇಶವಮೂರ್ತಿ ಅವರು ಶಿವಮೊಗ್ಗದ ಮತ್ತೂರು ಹೊಸಹಳ್ಳಿಯ … Read more

ಗ್ರಾಮ ಪಂಚಾಯಿತಿ ಅಧ್ಯಕ್ಷೆ, ಉಪಾಧ್ಯಕ್ಷೆ, ಸದಸ್ಯರು, ಗ್ರಾಮಸ್ಥರಿಂದ ಇಡೀ ರಾತ್ರಿ ಧರಣಿ

Choradi-Villagers-Protest-against-ZP-CEO

SHIVAMOGGA LIVE NEWS | 21 DECEMBER 2022 ಶಿವಮೊಗ್ಗ : ಗ್ರಾಪಂ ಪಿಡಿಒ ಅವರನ್ನು ಕಾರಣವೇ ಇಲ್ಲದೇ ಜಿಪಂ ಸಿಇಒ ಅಮಾನತು ಮಾಡಿದ್ದಾರೆ. ಜಿಲ್ಲಾ ಪಂಚಾಯಿತಿ ಸಿಇಒ ಸ್ಥಳಕ್ಕೆ ಆಗಮಿಸಿ ಅಮಾನತು ಹಿಂದಕ್ಕೆ ಪಡೆಯುವವರೆಗೆ ಗ್ರಾಪಂ ಕಚೇರಿ ಬೀಗ ತೆರೆಯಲೂ ಬಿಡುವುದಿಲ್ಲ ಎಂದು ಗ್ರಾಪಂ ಸದಸ್ಯರು ಮತ್ತು ಸಾರ್ವಜನಿಕರು ಅಹೋರಾತ್ರಿ ಧರಣಿ ನಡೆಸಿದರು. ತಾಲೂಕಿನ ಚೋರಡಿ ಗ್ರಾಪಂ ಆವರಣದಲ್ಲಿ ಸದಸ್ಯರು ಅರ್ನಿದಿಷ್ಟಾವಧಿ ಧರಣಿ (over night protest) ನಡೆಸಿದ್ದಾರೆ. ಗ್ರಾಮದಲ್ಲಿ ಪಶು ಆಸ್ಪತ್ರೆ ನಿರ್ಮಾಣ ಸಂಬಂಧ … Read more

ದಿಢೀರ್ ಒತ್ತುವರಿ ತೆರವು ಆರೋಪ, ವಿಷ ಕುಡಿದು ಮಹಿಳೆ ಅಸ್ವಸ್ಥ

SHIVAMOGGA-CITY-TALUK-NEWS-

SHIVAMOGGA LIVE NEWS | 20 DECEMBER 2022 ಶಿವಮೊಗ್ಗ : ನೊಟೀಸ್ ನೀಡದೆ ಒತ್ತುವರಿ ತೆರವು ಮಾಡಲು ಮುಂದಾಗಿದ್ದರಿಂದ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ (suicide attempt) ಯತ್ನಿಸಿದ್ದಾರೆ. ಆಕ್ರೋಶಗೊಂಡ ದಲಿತ ಸಂಘರ್ಷ ಸಮಿತಿ ಸದಸ್ಯರು ಜಿಲ್ಲಾ ಪಂಚಾಯಿತಿ ಸಭಾಂಗಣದ ಮುಂದೆ ಪ್ರತಿಭಟನೆ ನಡೆಸಿದರು. ಇವೆಲ್ಲದರ ನಡುವೆ ಪಿಡಿಒ ಅವರನ್ನು ಅಮಾನತು ಮಾಡಲಾಗಿದೆ. ಚೋರಡಿ ಗ್ರಾಮದಲ್ಲಿ ಗ್ರಾಮ ಠಾಣಾ ಜಾಗವನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ. ಗ್ರಾಮ ಪಂಚಾಯಿತಿ ಆಡಳಿತ ಸೋಮವಾರ ಒತ್ತುವರಿ ತೆರವಿಗೆ ಮುಂದಾಗಿದೆ. ಜೆಸಿಬಿ ಮೂಲಕ … Read more

ಶಿವಮೊಗ್ಗ ವಿಮಾನ ನಿಲ್ದಾಣ, ಪ್ರಮುಖ ಬದಲಾವಣೆ ಸೂಚಿಸಿದ ಕೇಂದ್ರದ ಅಧಿಕಾರಿಗಳು, ಏನದು?

Shimoga-Airport-Construction-Work

SHIVAMOGGA LIVE NEWS | 14 DECEMBER 2022 ಶಿವಮೊಗ್ಗ : ವಿಮಾನ ನಿಲ್ದಾಣದ ಟರ್ಮಿನಲ್ (shimoga airport terminal) ಮುಂದೆ ಕೊಳ ಮತ್ತು ಕಾರಂಜಿ ನಿರ್ಮಿಸಲು ಉದ್ದೇಶಿಸಲಾಗಿತ್ತು. ಆದರೆ ವಿಮಾನಯಾನ ಅಧಿಕಾರಿಗಳ ಸೂಚನೆ ಹಿನ್ನೆಲೆ ಈ ಕಾಮಗಾರಿ ಸ್ಥಗಿತಗೊಳಿಸಲಾಗಿದೆ. ಸೋಗಾನೆ ವಿಮಾನ ನಿಲ್ದಾಣದ ಟರ್ಮಿನಲ್ (shimoga airport terminal) ಮುಂದೆ ಕೊಳ, ಕಾರಂಜಿ ನಿರ್ಮಿಸಲು ಉದ್ದೇಶಿಸಲಾಗಿತ್ತು. ಟರ್ಮಿನಲ್ ಮುಂದೆ ಅಲಂಕಾರಕ್ಕಾಗಿ ಈ ಕೊಳ, ಕಾರಂಜಿ ನಿರ್ಮಿಸಲು ಯೋಜಿಸಲಾಗಿತ್ತು. ಈ ಹಿಂದೆ ಬಿಡುಗಡೆ ಮಾಡಿದ್ದ ಗ್ರಾಫಿಕಲ್ ವಿಡಿಯೋದಲ್ಲಿಯು … Read more