ಶಿವಮೊಗ್ಗ, ಭದ್ರಾವತಿ, ಹೊಳೆಹೊನ್ನೂರು ವ್ಯಾಪ್ತಿಯ ವಿವಿಧೆಡೆ ಪೊಲೀಸರ ದಾಳಿ

crime name image

SHIVAMOGGA LIVE NEWS | 29 ಮಾರ್ಚ್ 2022 ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಅಕ್ರಮ ಮದ್ಯ ಮಾರಾಟ, ಗಾಂಜಾ ಸೇವನೆ ಮತ್ತು ಓಸಿ ಪ್ರಕರಣಗಳನ್ನು ದಾಖಲು ಮಾಡಲಾಗಿದೆ. ಯಾವ್ಯಾವ ಠಾಣೆ ವ್ಯಾಪ್ತಿಯಲ್ಲಿ ಯಾವೆಲ್ಲ ಪ್ರಕರಣ ದಾಖಲಾಗಿದೆ. ಅಕ್ರಮವಾಗಿ ಮದ್ಯ ಮಾರಾಟ ಬಳ್ಳಾಪುರ ಗ್ರಾಮದ ಹೊನ್ನಾಳಿ ಮುಖ್ಯರಸ್ತೆಯ ತೋಟದ ಬಳಿಯ ಅಂಗಡಿ ಹತ್ತಿರ ಸಾರ್ವಜನಿಕರಿಗೆ ಮದ್ಯ ಕುಡಿಯಲು ಅವಕಾಶ ಮಾಡಿಕೊಡಲಾಗಿತ್ತು. ಶಿವಮೊಗ್ಗ ಗ್ರಾಮಾಂತರ ಠಾಣೆ ಎಎಸ್ಐ ಕೃಷ್ಣಮೂರ್ತಿ ಅವರು ಗಸ್ತು ತಿರುಗುತ್ತಿದ್ದಾಗ ವಿಚಾರ ತಿಳಿದು ಬಂದಿದೆ. ದಾಳಿ ನಡೆಸಿದ ಪೊಲೀಸರು … Read more

ಜಮೀನಿನಲ್ಲಿ ಕರುವನ್ನು ಕತ್ತರಿಸಲು ಸಿದ್ಧವಾಗಿದ್ದವರ ಮೇಲೆ ಪೊಲೀಸರ ದಾಳಿ

crime name image

SHIVAMOGGA LIVE NEWS | 26 ಮಾರ್ಚ್ 2022 ಕರುವನ್ನ ಕತ್ತರಿಸಲು ಅಣಿಯಾಗಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಖಾಕಿ ಪಡೆಯನ್ನು ಕಂಡು ಮೂವರು ಪರಾರಿಯಾಗಿದ್ದು, ಕರುವನ್ನು ರಕ್ಷಣೆ ಮಾಡಲಾಗಿದೆ. ಶಿವಮೊಗ್ಗದ ಗೋವಿಂದಾಪುರ ಗ್ರಾಮದ ಜಮೀನು ಒಂದರಲ್ಲಿ ಘಟನೆ ಸಂಭವಿಸಿದೆ. ಜಮೀನು ಮಾಲೀಕ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಏನಿದು ಪ್ರಕರಣ? ಗೋವಿಂದಾಪುರದ ಜಮೀನಿನಲ್ಲಿ ಕರು ಒಂದನ್ನು ಕಡಿಯಲು ಮುಂದಾಗಿರುವ ಕುರಿತು ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ತುಂಗಾ ನಗರ ಠಾಣೆ ಪಿಎಸ್ಐ ಶಿವಪ್ರಸಾದ್ ಅವರ … Read more

ಹೊಳೆಹೊನ್ನೂರು ರಸ್ತೆಯಲ್ಲಿ ಎರಡು ಬೈಕುಗಳಿಗೆ ಬಸ್ ಡಿಕ್ಕಿ, ಬೈಕ್ ಸವಾರನ ಕೈ ಮೇಲೆ ಹತ್ತಿದ ಬಸ್ ಚಕ್ರ

crime name image

SHIVAMOGGA LIVE NEWS | 25 ಮಾರ್ಚ್ 2022 ಎದುರಿನಿಂದ ಬರುತ್ತಿದ್ದ ಎರಡು ಬೈಕುಗಳಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕ್ ಸವಾರರು ಗಾಯಗೊಂಡಿದ್ದಾರೆ. ಒಬ್ಬನ ಕೈ ಮೇಲೆ ಬಸ್ಸಿನ ಚಕ್ರ ಹತ್ತಿದ್ದರಿಂದ ಗಂಭೀರ ಪೆಟ್ಟು ಬಿದ್ದಿದೆ. ಹೆಚ್ಚಿನ ಚಿಕಿತ್ಸೆಗಾಗಿ ಆತನನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಹೊಳೆಹೊನ್ನೂರು ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಎರಡು ಬೈಕುಗಳಿಗೆ ಎದುರಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಹಾರೊಬೆನವಳ್ಳಿಯ ರಾಘವೇಂದ್ರ ಎಂಬುವವರ ಕೈ ಮೇಲೆ ಬಸ್ … Read more

ಮೇಯಲು ಹೋಗಿದ್ದ ಹಸುವಿನ ಕಾಲು ಕತ್ತರಿಸಿದ ದುಷ್ಕರ್ಮಿಗಳು

Assault-on-Cow-in-Shimoga-Horabailu-Choradi

SHIVAMOGGA LIVE NEWS | 20 ಮಾರ್ಚ್ 2022 ಮೇಯಲು ಹೋಗಿದ್ದ ಹಸುವಿನ ಕಾಲನ್ನು ದುಷ್ಕರ್ಮಿಗಳು ಕತ್ತರಿಸಿದ್ದಾರೆ. ಮಚ್ಚಿನಿಂದ ಹಲ್ಲೆ ನಡೆಸಿ ಹಸುವಿನ ಕಾಲು ಕತ್ತರಿಸಲಾಗಿದೆ. ಶಿವಮೊಗ್ಗ ತಾಲೂಕು ಚೋರಡಿ ಸಮೀಪದ ಹೊರಬೈಲು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ನಾಗರಾಜ ಎಂಬುವವರಿಗೆ ಸೇರಿದ ಹಸುವಿನ ಕಾಲು ಕತ್ತರಿಸಲಾಗಿದೆ. ಎಲ್ಲಾ ಹಸುಗಳನ್ನು ಮೇವಿಗಾಗಿ ಕಾಡಿಗೆ ಬಿಡಲಾಗಿತ್ತು. ಸಂಜೆ ಹೊತ್ತಿಗೆ ಎಲ್ಲಾ ಹಸುಗಳು ಮನೆಗೆ ಹಿಂತಿರುಗಿವೆ. ಒಂದು ಹಸು ಮಾತ್ರ ಮರಳಿರಲಿಲ್ಲ. ಮರುದಿನ ಬೆಳಗ್ಗೆ ಖಾಲಿ ಹೊಲದಲ್ಲಿ ಹಸು ಇರುವುದು ಗೊತ್ತಾಗಿದೆ. ಸಮೀಪಕ್ಕೆ … Read more

ಚಾರ್ಜ್’ಗೆ ಹಾಕಿದ್ದ ಎಲೆಕ್ಟ್ರಿಕ್ ಬೈಕ್ ಸ್ಪೋಟ, ಹಲವು ವಸ್ತುಗಳು ಭಸ್ಮ, ಹೇಗಾಯ್ತು ಘಟನೆ?

Electric-Bike-Blast-at-Nimbegondi-Village-Near-Holehonnur.

SHIVAMOGGA LIVE NEWS | 16 ಮಾರ್ಚ್ 2022 ಚಾರ್ಜ್’ಗೆ ಹಾಕಿದ್ದ ಎಲೆಕ್ಟ್ರಿಕ್ ಬೈಕ್ ಸ್ಪೋಟಗೊಂಡು ಹಲವು ವಸ್ತುಗಳು ಬೆಂಕಿಗೆ ಆಹುತಿ ಆಗಿವೆ. ಅದೃಷ್ಟವಶಾತ್ ಯಾರಿಗೂ ಹಾನಿಯಾಗಿಲ್ಲ. ಹೊಳೆಹೊನ್ನೂರು ಸಮೀಪದ ನಿಂಬೆಗುಂದಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ರಾತ್ರಿ ಚಾರ್ಜ್’ಗೆ ಹಾಕಿದ್ದಾಗ ವಾಹನ ಸ್ಪೋಟಗೊಂಡು ಅವಘಡ ಸಂಭವಿಸಿದೆ. ಹೇಗಾಯ್ತು ಘಟನೆ? ನಿಂಬೆಗುಂದಿ ಗ್ರಾಮದ ಕಾಡಪ್ಪರ ಮಲ್ಲಿಕಾರ್ಜುನ ಎಂಬುವವರಿಗೆ ಸೇರಿದ ಬೈಕ್ ಸ್ಪೋಟಗೊಂಡಿದೆ. ಮಲ್ಲಿಕಾರ್ಜುನ ಅವರ ಮಗ ಕಿರಣ್ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಕಾಡಪ್ಪರ ಮಲ್ಲಿಕಾರ್ಜುನ … Read more

BREAKING NEWS | ಟ್ಯಾಂಕರ್ ಪಲ್ಟಿ, ಪೆಟ್ರೋಲ್ ತುಂಬಿಸಿಕೊಳ್ಳಲು ನೂಕುನುಗ್ಗಲು

Petrol-Tanker-Accident-at-Javalli

SHIVAMOGGA LIVE NEWS | 16 ಮಾರ್ಚ್ 2022 ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿದೆ. ಈ ಮಧ್ಯೆ ಟ್ಯಾಂಕರ್’ನಲ್ಲಿದ್ದ ಪೆಟ್ರೋಲ್ ತುಂಬಿಸಿಕೊಳ್ಳಲು ಜನರು ಮುಗಿಬಿದ್ದಿದ್ದಾರೆ. ಶಿವಮೊಗ್ಗ ತಾಲೂಕು ಜಾವಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಟ್ಯಾಂಕರ್ ಶಿವಮೊಗ್ಗ ಕಡೆಯಿಂದ ಚನ್ನಗಿರಿಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಇನ್ನು, ವಿಚಾರ ತಿಳಿಯುತ್ತಿದ್ದ ಹಾಗೆ ಜನರು ಟ್ಯಾಂಕರ್’ಗೆ ಮುಗಿಬಿದ್ದಿದ್ದಾರೆ. ಅಪಾಯವನ್ನು ಲೆಕ್ಕಿಸದೆ ಕೆಲವರು ಪೆಟ್ರೋಲ್ ತುಂಬಿಸಿಕೊಳ್ಳಲು ಮುಂದಾಗಿದ್ದಾರೆ. ಪೊಲೀಸರು ಜನರನ್ನು ನಿಯಂತ್ರಿಸಿದರು ಎಂದು ಸ್ಥಳೀಯರು ತಿಳಿಸಿದರು. ಅಗ್ನಿಶಾಮಕ ಸಿಬ್ಬಂದಿ ಭೇಟಿ … Read more

ಮಂಡಗದ್ದೆ ಸಮೀಪ ಎಲಿಫೆಂಟ್ ಡ್ರೈವ್, ಸಕ್ರೆಬೈಲು ಬಿಡಾರದ ಮೂರು ಆನೆಗಳು ಭಾಗಿ, ಏನಿದು ಡ್ರೈವ್? ಕಾರಣವೇನು?

Elephant-Drive-In-Kigadi-Forest-Range

SHIVAMOGGA LIVE NEWS | 12 ಮಾರ್ಚ್ 2022 ಮಂಡಗದ್ದೆ ಸಮೀಪದ ಕೀಗಡಿ ಅರಣ್ಯ ಪ್ರದೇಶದಲ್ಲಿ ಕೆಲವು ದಿನದಿಂದ ಪುಂಡಾಟ ಮೆರೆಯುತ್ತಿದ್ದ ಕಾಡಾನೆಯನ್ನು ಹಿಮ್ಮೆಟ್ಟಿಸಲು ಸಕ್ರೆಬೈಲು ಬಿಡಾರದ ಸಾಕಾನೆಗಳು ಎಲಿಫೆಂಟ್ ಡ್ರೈವ್ ಆರಂಭಿಸಿವೆ. ಮೂರು ಆನೆಗಳನ್ನು ಈ ಅರಣ್ಯ ಪ್ರದೇಶಕ್ಕೆ ಕರೆತರಲಾಗಿದೆ. ಕೀಗಡಿ ಅರಣ್ಯ ಪ್ರದೇಶದಲ್ಲಿ ತಾತ್ಕಾಲಿಕವಾಗಿ ಶೆಡ್ ನಿರ್ಮಿಸಿಕೊಂಡು ಕಾರ್ಯಾಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಭಯ ಹುಟ್ಟಿಸಿರುವ ಕಾಡಾನೆ ಕೀಗಡಿ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಕಾಡಾನೆಯೊಂದು ಪುಂಡಾಟ ಮೆರೆಯುತ್ತಿದೆ. ತೋಟ, ಗದ್ದೆಗಳಿಗೆ ನುಗ್ಗಿ ಬೆಳೆ ಹಾನಿ ಉಂಟು … Read more

ಅರಹತೊಳಲು, ಯಡೇಹಳ್ಳಿ ಸುತ್ತಮುತ್ತ ಮಾರ್ಚ್ 13ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ ವ್ಯತ್ಯಯವಾಗಲಿದೆ?

POWER-CUT-UPDATE-NEWs ELECTRICITY

SHIVAMOGGA LIVE NEWS | 11 ಮಾರ್ಚ್ 2022 ರಸ್ತೆ ಅಗಲೀಕರಣದ ಹಿನ್ನೆಲೆ ಮರಗಳ ಕಡಿತಲೆ ಮಾಡಲಾಗುತ್ತಿದೆ. ಆದ್ದರಿಂದ ಹೊಳೆಹೊನ್ನೂರು, ಯಡೇಹಳ್ಳಿ, ಕೈಮರ ಫೀಡರ್’ಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯವಾಗಲಿದೆ. ಆದ್ದರಿಂದ ವಿವಿಧೆಡೆ ಮಾರ್ಚ್ 13ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ಕರೆಂಟ್ ಇರಲ್ಲ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಹೆಂಚಿನಸಿದ್ದಾಪುರ, ಕೊಪ್ಪ, ಮೂಡಲ ವಿಠಲಾಪುರ, ಜಂಬರಘಟ್ಟಿ, ಕರೆಬೀರನಹಳ್ಳಿ, ಶ್ರೀನಿವಾಸಪುರ, ಸಿದ್ಧರ ಕಾಲೋನಿ, ಚಂದನಕರ, ಆರಹತೊಳಲು, ಹನುಮಂತಾಪುರ, ಯಡೇಹಳ್ಳಿ, ಆಗರದಹಳ್ಳಿ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. … Read more

ಪ್ರಧಾನಿ ಮೋದಿ ಭೇಟಿ ಮೊದಲು ಹೊಳಲೂರಿನಲ್ಲಿ ಕೇಂದ್ರದ ಅಧಿಕಾರಿಗಳ ಪರಿಶೀಲನೆ

Officials-Visit-Before-PM-Modi-Visit

SHIVAMOGGA LIVE NEWS | 8 ಮಾರ್ಚ್ 2022 ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳ ತಂಡ ಇವತ್ತು ಶಿವಮೊಗ್ಗದ ಹೊಳಲೂರು ಗ್ರಾಮದಲ್ಲಿ ಪರಿಶೀಲನೆ ನಡೆಸಿದರು. ಕೇಂದ್ರ ಸರ್ಕಾರದ ಪಂಚಾಯತ್ ರಾಜ್ ಇಲಾಖೆ ಅಪರ ಕಾರ್ಯದರ್ಶಿ ಡಾ. ಚಂದ್ರಶೇಖರ್ ಕುಮಾರ್, ರಾಜ್ಯ ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಶಿಲ್ಪಾ ಶರ್ಮಾ ಸೇರಿದಂತೆ ಹಿರಿಯ ಅಧಿಕಾರಿಗಳು ಹೊಳಲೂರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಏನೆಲ್ಲ ಪರಿಶೀಲಿಸಿದರು? ಹೊಳಲೂರು ಗ್ರಾಮದ ಸ್ವಚ್ಚ … Read more

ಗಾಜನೂರಿನಲ್ಲಿ ಪೊಲೀಸರ ದಾಳಿ, ಆರು ಮಂದಿ ವಿರುದ್ಧ ಕೇಸ್

Tunga-Nagara-Police-Station-Shimoga

SHIVAMOGGA LIVE NEWS | 8 ಮಾರ್ಚ್ 2022 ಅಂದರ್ ಬಾಹರ್ ಜೂಜಾಟ ಆಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಆರು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಗಾಜನೂರು ಮೊರಾರ್ಜಿ ವಸತಿ ಶಾಲೆ ಹಿಂಭಾಗದ ಖಾಲಿ ಜಾಗದಲ್ಲಿ ಜನರು ಗುಂಪು ಕಟ್ಟಿಕೊಂಡು ಜೂಜಾಟದಲ್ಲಿ ತೊಡಗಿದ್ದರು. ಇದರ ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಖಾಕಿ ಕಂಡು ಕಾಲ್ಕಿತ್ತರು ಪೊಲೀಸರು ದಾಳಿ ನಡೆಸುತ್ತಿದ್ದಂತೆ ಜೂಜಾಟದಲ್ಲಿ ತೊಡಗಿದ್ದ ಆರು ಮಂದಿ ಪರಾರಿಯಾಗಿದ್ದಾರೆ. ಬೆನ್ನಟ್ಟಿದ ಪೊಲೀಸರು ಇಬ್ಬರನ್ನು ಹಿಡಿದುಕೊಂಡಿದ್ದಾರೆ. … Read more