ಹಣಗೆರೆಯಿಂದ ಹಿಂತಿರುಗುತ್ತಿದ್ದಾಗ ಬೈಕ್ ಸ್ಕಿಡ್, ಗಾಯ, ಚಿಕಿತ್ಸೆ ಪಡೆದು ಮರಳಿದಾಗ ಕಾದಿತ್ತು ಶಾಕ್

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಸೆಪ್ಟೆಂಬರ್ 2021 ಹಣಗೆರೆಯಲ್ಲಿ ಪೂಜೆ ಸಲ್ಲಿಸಿ ಮರಳುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ದಂಪತಿ ಗಾಯಗೊಂಡಿದ್ದಾರೆ. ಬೇರೊಂದು ವಾಹನದಲ್ಲಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಹಿಂತಿರುಗಿದಾಗ, ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್ ನಾಪತ್ತೆಯಾಗಿದೆ. ಶಿವಮೊಗ್ಗದ ಇನಾಯತ್ ಉಲ್ಲಾ ಅವರ ಬೈಕ್ ಕಳುವಾಗಿದೆ. ತಮ್ಮ ಪತ್ನಿ ಜೊತೆಗೆ ಅವರು ಹಣಗೆರೆ ಕಟ್ಟೆಗೆ ತೆರಳಿ, ಪೂಜೆ ಸಲ್ಲಿಸಿ ಹಿಂತಿರುಗುತ್ತಿದ್ದರು. ಸಿರಿಗೆರೆ ಅರಣ್ಯ ಚೆಕ್ ಪೋಸ್ಟ್ ಸಮೀಪ ಬೈಕ್ ಸ್ಕಿಡ್ ಆಗಿದೆ. ಕಾರಲ್ಲಿ … Read more

ವಿದ್ಯುತ್ ತಂತಿಗೆ ತಾಗುತ್ತದೆ ಅಂತಾ ರೆಂಬೆಗಳನ್ನು ಕಡಿದವರ ವಿರುದ್ಧ ಕೇಸ್

120921 Case Against Tree Cutting Near Umblebyle

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಸೆಪ್ಟೆಂಬರ್ 2021 ಅನುಮತಿ ಪಡೆಯದೆ ಮರಗಳ ಕಡಿತಲೆ ಮಾಡಿದ ಆರೋಪದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಕಡಿದ ಮರಗಳು ಮತ್ತು ಟ್ರಾಕ್ಟರನ್ನು ವಶಪಡಿಸಿಕೊಳ್ಳಲಾಗಿದೆ. ಉಂಬ್ಳೇಬೈಲು – ಕೈದೊಟ್ಲು ಗ್ರಾಮಗಳ ನಡುವೆ ಘಟನೆ ಸಂಭವಿಸಿದೆ. ಮರ ಕಡಿಯುತ್ತಿರುವ ಕುರಿತು ಗ್ರಾಮಸ್ಥರು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಅನುಮತಿ ಪಡೆಯದೆ ಮರ ಕಡಿಯುತ್ತಿರುವುದು ಬೆಳಕಿಗೆ ಬಂದಿದೆ. ನಿರಂತರ ಜ್ಯೋತಿ ವಿದ್ಯುತ್ ಮಾರ್ಗಕ್ಕೆ ಕಡಿತಲೆ ನಿರಂತರ ಜ್ಯೋತಿ … Read more

ಆಯನೂರಿನಲ್ಲಿ ಅಂಗಡಿ ಬಾಗಿಲು ಮುರಿದು ಹಣಕ್ಕಿಂತಲೂ ಹೆಚ್ಚಿನ ಮೊತ್ತದ ಗುಟ್ಕಾ, ಸಿಗರೇಟು ಕಳ್ಳತನ

Ayanuru General Image Board 1

ಶಿವಮೊಗ್ಗ ಲೈವ್.ಕಾಂ | AYANUR NEWS | 7 ಸೆಪ್ಟೆಂಬರ್ 2021 ಅಂಗಡಿಯೊಂದರ  ಬಾಗಿಲು ಮುರಿದು ಒಳ ನಗ್ಗಿದ ಕಳ್ಳರು ಹಣಕ್ಕಿಂತಲೂ ಹೆಚ್ಚಿನ ಮೊತ್ತದ ಗುಟ್ಕಾ, ಸಿಗರೇಟು ಕದ್ದು ಪರಾರಿಯಾಗಿದ್ದಾರೆ. ಈ ಸಂಬಂಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಯನೂರಿನ ಬಿ.ಹೆಚ್.ರಸ್ತೆಯಲ್ಲಿರುವ ಭರತ್ ರಾಜ್ ಅವರಿಗೆ ಸೇರಿದ ಸಿದ್ಧೇಶ್ವರ ಪ್ರಾವಿಜನ್ ಸ್ಟೋರ್’ನಲ್ಲಿ ಕಳ್ಳತನವಾಗಿದೆ. ಅಂಗಡಿಯ ರೋಲಿಂಗ್ ಶೆಟರ್ ಮುರಿದು ಖದೀಮರು ಕೈಚಳಕ ತೋರಿಸಿದ್ದಾರೆ. ಗುಟ್ಕಾ, ಸಿಗರೇಟ್ ಕಳವು ಖದೀಮರು ಅಂಗಡಿಯಲ್ಲಿ ಸುಮಾರು 5 ಸಾವಿರ ರೂ. ನಗದು … Read more

ದೇವಸ್ಥಾನದ ಬೀಗ ಒಡೆದು ಆರತಿ ತಟ್ಟೆ, ಗಂಟೆ, ಕಾಣಿಕೆ ಹಣ ಸಹಿತ ಹಲವು ವಸ್ತುಗಳ ಕಳ್ಳತನ

theft case general image

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಸೆಪ್ಟೆಂಬರ್ 2021 ದೇವಸ್ಥಾನದ ಬೀಗ ಒಡೆದ ಕಳ್ಳರು ಕಾಣಿಕೆ ಹಣ ಮತ್ತು ಪೂಜಾ ಸಾಮಾಗ್ರಿಗಳನ್ನು ಕದ್ದೊಯ್ದಿದ್ದಾರೆ. ಈ ಸಂಬಂಧ ದೂರು ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಶಿವಮೊಗ್ಗ ತಾಲೂಕು ದೊಡ್ಡಮತಲಿ ಗ್ರಾಮದ ಶ್ರೀ ಹುಲಿಯಾಂಬಿಕ ದೇವಸ್ಥಾನದಲ್ಲಿ ಘಟನೆ ಸಂಭವಿಸಿದೆ. ಮಂಗಳವಾರ ಮಾತ್ರ ಪೂಜೆ ಶ್ರೀ ಹುಲಿಯಾಂಬಿಕ ದೇವಸ್ಥಾನದಲ್ಲಿ ವಾರಕ್ಕೆ ಒಮ್ಮೆ ಮಾತ್ರ ಪೂಜೆ ಸಲ್ಲಿಸಲಾಗುತ್ತದೆ. ಮಂಗಳವಾರದಂದು ಮಾತ್ರ ಅರ್ಚಕರು ಬಂದ ಪೂಜೆ ಮಾಡುತ್ತಿದ್ದರು. ಈ ವೇಳೆ ಗ್ರಾಮಸ್ಥರು ಪಾಲ್ಗೊಳ್ಳುತ್ತಿದ್ದರು. … Read more

ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಏಳನೆ ತರಗತಿ ವಿದ್ಯಾರ್ಥಿನಿ ಅತ್ಮಹತ್ಯೆ

Suicide-Hanging-General

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಸೆಪ್ಟೆಂಬರ್ 2021 ಮನೆಯಲ್ಲಿ ಯಾರೂ ಇಲ್ಲದ ವೇಳೆ ಏಳನೆ ತರಗತಿ ವಿದ್ಯಾರ್ಥಿನಿಯೊಬ್ಬಳು ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸಹನಾ (13) ಮೃತಳು. ಶಿವಮೊಗ್ಗ ತಾಲೂಕು ಹಾರನಹಳ್ಳಿಯ ಸಹನಾ, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಮನೆಯ ಬಾಗಿಲುಗಳನ್ನು ಬಂದ್ ಮಾಡಿಕೊಂಡು ಸೀರೆಯಿಂದ ನೇಣು ಬಿಗಿದುಕೊಂಡಿದ್ದಾಳೆ. ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಹನಾ ಏಳನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. … Read more

ಶಿವಮೊಗ್ಗದ ಕಲ್ಲಗಂಗೂರಿನಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳಿಂದ ದಾಳಿ

010921 Raid At Kallagangur by Excise Department

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಸೆಪ್ಟೆಂಬರ್ 2021 ಶಿವಮೊಗ್ಗದ ಕಲ್ಲಗಂಗೂರು ಗ್ರಾಮದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಮೆಕ್ಕೆ ಜೋಳದ ನಡುವೆ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ಕಲ್ಲಗಂಗೂರಿನ ಈಶ್ವರ್ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಮೆಕ್ಕೆ ಜೋಳ ಬೆಳೆಯಲಾಗಿತ್ತು. ಇದರ ನಡುವೆ ಯಾರಿಗೂ ಕಾಣದ ಹಾಗೆ ಗಾಂಜಾ ಬೆಳೆಸಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 30 … Read more

ಸಕ್ರೆಬೈಲು ಆನೆ ಬಿಡಾರದಲ್ಲಿ ಶೂಟಿಂಗ್, ಪುನಿತ್ ರಾಜ್ ಕುಮಾರ್ ಭಾಗಿ, ತುಂಗಾ ಡ್ಯಾಂಗೂ ಭೇಟಿ

puneeth-rajkumar-visit-sakrebyle-camp

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಸೆಪ್ಟೆಂಬರ್ 2021 ಸಕ್ರೆಬೈಲು ಆನೆ ಬಿಡಾರಕ್ಕೆ ನಟ ಪುನಿತ್ ರಾಜ್ ಕುಮಾರ್ ಅವರು ಇವತ್ತು ಭೇಟಿ ನೀಡಿದ್ದಾರೆ. ಡಾಕ್ಯೂಮೆಂಟರಿ ಒಂದರ ಚಿತ್ರೀಕರಣಕ್ಕಾಗಿ ಅವರು ಬಿಡಾರಕ್ಕೆ ಬಂದಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಪವರ್ ಸ್ಟಾರ್ ಅಭಿಮಾನಿಗಳು ಆನೆ ಬಿಡಾರದ ಬಳಿ ಸೇರಿದ್ದರು. ಮಧ್ಯಾಹ್ನ ಸಕ್ರೆಬೈಲು ಆನೆ ಬಿಡಾರಕ್ಕೆ ನಟ ಪುನಿತ್ ರಾಜ್ ಕುಮಾರ್ ಭೇಟಿ ನೀಡಿದ್ದಾರೆ. ಸಾಕ್ಷ್ಯಚಿತ್ರದ ಚಿತ್ರೀಕರಣದ ಸಲುವಾಗಿ ಅವರು ಬಿಡಾರಕ್ಕೆ ಬಂದಿದ್ದಾರೆ. ಬಿಡಾರದ ಕ್ರಾಲ್ ಪ್ರದೇಶದಲ್ಲಿ ಚಿತ್ರೀಕರಣ … Read more

ಆಯನೂರು ಬಳಿ ಮರಕ್ಕೆ ಹಾಲಿನ ವ್ಯಾನ್ ಡಿಕ್ಕಿ, ಕ್ಲೀನರ್​​​ಗೆ ಗಂಭೀರ ಗಾಯ

230821 Milk Truck Accident Near Ayanur

ಶಿವಮೊಗ್ಗ ಲೈವ್.ಕಾಂ | AYANUR NEWS | 23 ಆಗಸ್ಟ್ 2021 ಹಾಲು ಸರಬರಾಜು ವಾಹನ ಮರಕ್ಕೆ ಡಿಕ್ಕಿಯಾಗಿ, ಕ್ಲೀನರ್​ ಗಂಭೀರವಾಗಿ ಗಾಯಗೊಂಡಿದ್ದಾರೆ. ಆಯನೂರು ಸಮೀಪದ ಚೌಡೇಶ್ವರಿ ದೇವಸ್ಥಾನದ ಬಳಿ ರಾತ್ರಿ ಘಟನೆ ಸಂಭವಿಸಿದೆ. ಸಂತೋಷ್, ಗಾಯಗೊಂಡಿರುವ ಕ್ಲೀನರ್​. ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಮತ್ತು ಸಾರ್ವಜನಿಕರ ನೆರವಿನಿಂದ  ಕ್ಲೀನರ್​ನನ್ನು ರಕ್ಷಣೆ ಮಾಡಲಾಗಿದೆ. ಸಂತೋಷ್​​ನ ಎರಡು ಕಾಲುಗಳಿಗೆ ಗಂಭೀರ ಗಾಯವಾಗಿದೆ. ಕೂಡಲೆ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೇಗಾಯ್ತು ಅಪಘಾತ? ಹಾಲು ಸರಬರಾಜು ವಾಹನ ಶಿವಮೊಗ್ಗದಿಂದ ಸಾಗರದ … Read more

ಹಾಡೋನಹಳ್ಳಿಯಲ್ಲಿ ಮನೆ ಬಾಗಿಲು ಮುರಿದ ಖದೀಮರು, ಚಿನ್ನಾಭರಣ, ನಗದು ಕಳ್ಳತನ

theft case general image

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಆಗಸ್ಟ್ 2021 ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲು ಮುರಿದು ಚಿನ್ನಾಭರಣ ಮತ್ತು ಹಣ ಕಳ್ಳತನ ಮಾಡಲಾಗಿದೆ. ಶಿವಮೊಗ್ಗ ತಾಲೂಕು ಹಾಡೋನಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಹಾಡೋನಹಳ್ಳಿಯ ಮಂಜುಳಾ ಎಂಬುವವರು ತಮ್ಮ ಸಹೋದರಿಯ ಮನೆಗೆ ತೆರಳಿದ್ದರು. ಈ ವೇಳೆ ಬಾಗಿಲಿನ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಮನೆಯ ಬೀರುವಿನಲ್ಲಿ ಇಟ್ಟಿದ್ದ ಬಂಗಾರದ ಜುಮುಕಿ, ಬಟನ್ಸ್, ಕಾಲುಚೈನ್, ಬೆಳ್ಳಿಯ ಗುಂಡು, ಅರಿಶಿಣ ಕುಂಕುಮದ ಬೆಳ್ಳಿ ಬಟ್ಟಲು, ಐದು ಸಾವಿರ ರೂ. … Read more

ಶಿವಮೊಗ್ಗದಲ್ಲಿ ಮನೆಗೆ ನುಗ್ಗಿ ದರೋಡೆ, ಮಗು ಸಾಯಿಸುವುದಾಗಿ ಬೆದರಿಸಿ ಹಣ, ಚಿನ್ನಾಭರಣ ದೋಚಿ ಪರಾರಿ

theft case general image

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಆಗಸ್ಟ್ 2021 ಮಂಕಿ ಕ್ಯಾಪ್ ಧರಿಸಿಕೊಂಡು ಬಂದು ಮನೆಯೊಂದಕ್ಕೆ ನುಗ್ಗಿ ಹಾಡಹಗಲೆ ದರೋಡೆ ಮಾಡಲಾಗಿದೆ. ಮನೆಯಲ್ಲಿದ್ದ ಒಬ್ಬರಿಗೆ ಚಾಕುವಿನಿಂದ ಹಲ್ಲೆ ಮಾಡಲಾಗಿದೆ. ಯಾರಾದರೂ ಕಿರುಚಾಡಿದರೆ ಮಗುವನ್ನು ಕೊಲ್ಲುವುದಾಗಿ ಬೆದರಿಕೆಯೊಡ್ಡಿ, ಹಣ, ಚಿನ್ನಾಭರಣ ಕದ್ದೊಯ್ಯಲಾಗಿದೆ. ಶಿವಮೊಗ್ಗ ತಾಲೂಕು ಚಿಕ್ಕಮರಡಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಜಯಣ್ಣಗೌಡ ಎಂಬುವವರ ಮನೆಯಲ್ಲಿ ಘಟನೆ ನಡೆದಿದೆ. ಮಂಕಿ ಕ್ಯಾಪ್ ಧರಿಸಿ, ಎರಡು ಬೈಕ್’ನಲ್ಲಿ ಬಂದ ನಾಲ್ವರು ಕೃತ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹೇಗಾಯ್ತು … Read more