ಹೊಳೆಹೊನ್ನೂರು ಠಾಣೆ ವ್ಯಾಪ್ತಿಯಲ್ಲಿ ಮನೆಗಳ್ಳತನ, ಇಬ್ಬರು ಅರೆಸ್ಟ್, ಚಿನ್ನ, ಬೆಳ್ಳಿ ಆಭರಣಗಳು ವಶಕ್ಕೆ

prison hand cuff image

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಅಕ್ಟೋಬರ್ 2020 ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆಗಳ್ಳತನ ಮಾಡಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿ ತಾಲೂಕು ಅಗರದಹಳ್ಳಿಯ ಶಶಿಕುಮಾರ್ (26) ಮತ್ತು ದೊಡ್ಡೇರಿಯ ರವಿ (29) ಬಂಧಿತರು. ಇವರಿಂದ 2.30 ಲಕ್ಷ ರೂ. ಮೌಲ್ಯದ 56 ಗ್ರಾಂ ಚಿನ್ನಾಭರಣ, 2 ಸಾವಿರ ಮೌಲ್ಯದ ಬೆಳ್ಳಿ ವಸ್ತುಗಳು, ಕೃತ್ಯಕ್ಕೆ ಬಳಸಿದ್ದ ಬೈಕನ್ನು ವಶಕ್ಕೆ ಪಡೆಯಲಾಗಿದೆ. ಡಿವೈಎಸ್‍ಪಿ ಕೃಷ್ಣಮೂರ್ತಿ ಅವರ ಮಾರ್ಗದರ್ಶನದಲ್ಲಿ ಭದ್ರಾವತಿ ಗ್ರಾಮಾಂತರ ಠಾಣೆ ಸಿಪಿಐ ಮಂಜುನಾಥ್, … Read more

ದಸರಾ ಗಜಪೂಜೆಗೆ ಶಿವಮೊಗ್ಗಕ್ಕೆ ಬರುತ್ತಿವೆ ಮೂರು ಆನೆಗಳು, ಕೋಟೆ ರಸ್ತೆಯಲ್ಲಿ ಆನೆಗಳ ವಾಸ್ತವ್ಯ

231020 Palike Mayor Visit Sakrebyle Elephant Camp 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಅಕ್ಟೋಬರ್ 2020 ದಸರಾ ಹಬ್ಬದ ಹಿನ್ನೆಲೆ ಶಿವಮೊಗ್ಗದ ಸಕ್ರೆಬೈಲು ಆನೆಗಳನ್ನು ಗಜಪೂಜೆಗೆ ಆಹ್ವಾನಿಸಲಾಗಿದೆ. ಮೂರು ಆನೆಗಳು ಗಜಪೂಜೆಯಲ್ಲಿ ಭಾಗವಹಿಸಲಿವೆ. ಶಿವಮೊಗ್ಗಕ್ಕೆ ಬರುತ್ತವೆ ಮೂರು ಆನೆಗಳು ಮೆರವಣಿಗೆ ಇಲ್ಲ, ಜಂಬೂ ಸವಾರಿಯು ಇಲ್ಲ. ಆದರೂ ದಸರಾ ಗಜಪೂಜೆಗೆ ಆನೆಗಳನ್ನು ಕರೆಯಿಸಲಾಗುತ್ತಿದೆ. ಅಕ್ಟೋಬರ್ 24ರ ಸಂಜೆ ಮೂರು ಆನೆಗಳು ಶಿವಮೊಗ್ಗಕ್ಕೆ ಬರಲಿವೆ. ಕೋಟೆ ರಸ್ತೆಯಲ್ಲಿರುವ ವಾಸವಿ ಶಾಲೆ ಆವರಣದಲ್ಲಿ ಆನೆಗಳಿಗೆ ವ್ಯವಸ್ಥೆ ಮಾಡಾಗಿದೆ ಎಂದು ಮೇಯರ್ ಸುವರ್ಣಾ ಶಂಕರ್ ಅವರು … Read more

ಸಕ್ರೆಬೈಲು ಆನೆ ಬಿಡಾರದ ಏಕದಂತ ಇನ್ನಿಲ್ಲ, ಸಾವಿಗೆ ಕಾರಣವೇನು?

201020 Elephant Ekadantha Dies at Sakrebyle 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಅಕ್ಟೋಬರ್ 2020 ಎರಡು ದಿನದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಶಿವಮೊಗ್ಗ ಸಕ್ರೆಬೈಲಿನ ಬಿಡಾರದ ಆನೆ ಏಕದಂತ ಇವತ್ತು ಮೃತಪಟ್ಟಿದೆ. ಆನೆಗೆ 35 ವರ್ಷ ವಯಸ್ಸಾಗಿತ್ತು. ಎರಡು ದಿನದಿಂದ ಏಕದಂತ ಆನೆಯ ಆರೋಗ್ಯದಲ್ಲಿ ವ್ಯತ್ಯಾಸವಾಗಿತ್ತು. ಇವತ್ತು ಶೆಟ್ಟಿಹಳ್ಳಿ ಅರಣ್ಯ ವ್ಯಾಪ್ತಿಯಲ್ಲಿ ಏಕದಂತ ಆನೆ ಮೃತಪಟ್ಟಿದೆ. ಎರಡು ವರ್ಷದ ಹಿಂದೆ ಹಾಸನ ಜಿಲ್ಲೆ ಸಕಲೇಶಪುರದಲ್ಲಿ ಈ ಆನೆಯನ್ನು ಸೆರೆ ಹಿಡಿಯಲಾಗಿತ್ತು. ಸಕ್ರೆಬೈಲು ಆನೆ ಬಿಡಾರದಲ್ಲಿ ಇದನ್ನು ಪಳಗಿಸಲಾಗಿತ್ತು. ಅನಾರೋಗ್ಯದ ಹಿನ್ನೆಲೆ ಸಕ್ರೆಬೈಲು … Read more

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಿಎಂ ಭೇಟಿ, ರನ್ ವೇ ಉದ್ದ, ಏರ್ ಪೋರ್ಟ್ ವೆಚ್ಚ ಮತ್ತಷ್ಟು ಹೆಚ್ಚಳ

191020 Yedyurappa Visit Shimoga Airport 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಅಕ್ಟೋಬರ್ 2020 ಸೋಗಾನೆ ಯಲ್ಲಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಮುಂದಿನ  ಡಿಸೆಂಬರ್ ಅಂತ್ಯದ ಒಳಗಾಗಿ ಪೂರ್ಣಗೊಳ್ಳಲಿದ್ದು 2022ರ ಜನವರಿ ಅಥವಾ ಫೆಬ್ರವರಿ ತಿಂಗಳಿನಿಂದ ವಿಮಾನ ಹಾರಾಟ ಆರಂಭವಾಗುವ ನಿರೀಕ್ಷೆ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. VIDEO REPORT ಸೋಗಾನೆ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಆರಂಭದಲ್ಲಿ 2050 ಮೀಟರ್ ರನ್ ವೇ  … Read more

ಕರೋನ ನಿರ್ವಹಣೆಯಲ್ಲಿ ಶಿವಮೊಗ್ಗ ತಾಲೂಕು ಆಡಳಿತ ವಿಫಲ, ತಾಲೂಕು ಪಂಚಾಯಿತಿಯಲ್ಲಿ ಸದಸ್ಯರ ಆಕ್ರೋಶ

181020 Taluk Panchayat Meeting Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಅಕ್ಟೋಬರ್ 2020 ಕರೊನಾ ನಿರ್ವಹಣೆಯ ಆರಂಭದಿಂದಲೂ ತಾಲೂಕು ಆಡಳಿತ ವಿಫಲವಾಗಿದೆ. ಕರೊನಾ ಸೋಂಕಿತರನ್ನು ಆಸ್ಪತ್ರೆಗೆ ಕರೆದೊಯ್ಯಲು ಆಂಬುಲೆನ್ಸ್ ಚಾಲಕನಿಗೆ ಎರಡೂವರೆ ಸಾವಿರ ರೂ. ನೀಡಬೇಕೆಂಬ ವಿಷಯದ ತಾಲೂಕಿನಲ್ಲಿ ಹರಿದಾಡುತ್ತಿದೆ ಎಂದು ಸಾಮಾಜಿಕ ನ್ಯಾಯಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಜಿ.ಶ್ರೀಧರ್ ದೂರಿದರು. ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಕರೋನ ನಿರ್ವಹಣೆಯಲ್ಲಿ ತಾಲೂಕು ಆಡಳಿತದ ವೈಫಲ್ಯದ ಕುರಿತು ಸದಸ್ಯರು ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು. ಕರೋನ ನಿರ್ವಹಣೆ ವೈಫಲ್ಯದ ಕುರಿತು ಅನೇಕ ಸದಸ್ಯರು … Read more

ಶಿವಮೊಗ್ಗ ವಿಮಾನ ನಿಲ್ದಾಣ, ರಿಂಗ್ ರಸ್ತೆ ಕಾಮಗಾರಿ ಪರಿಶೀಲಿಸಿದ ಡಿಸಿ, ಏರ್ ಪೋರ್ಟ್‍ಗೆ ಸಿಎಂ ಭೇಟಿ ಸಾದ್ಯತೆ

131020 DC Visit Shimoga Airport 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಅಕ್ಟೋಬರ್ 2020 ಜಿಲ್ಲಾಧಿಕಾರಿ ಶಿವಕುಮಾರ್ ಅವರು ಇವತ್ತು ಶಿವಮೊಗ್ಗ ವಿಮಾನ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣದ ಬಳಿ ನಡೆಯುತ್ತಿರುವ ರಿಂಗ್‍ ರಸ್ತೆ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಸೋಗಾನೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಪರಶೀಲನೆ ನಡೆಸಿದ ಜಿಲ್ಲಾಧಿಕಾರಿ ಶಿವಕುಮಾರ್ ಅವರು ಕಾಮಗಾರಿ ಪ್ರಗತಿ ಕುರಿತು ಮಾಹಿತಿ ಪಡೆದರು. ಅಲ್ಲದೆ ಕಾಮಗಾರಿ ಕುರಿತು ಕೆಲವು ಸೂಚನೆ ನೀಡಿದರು. ಸದ್ಯ ಅಪ್ರೋಚ್‍ ರಸ್ತೆ, ರನ್ ವೇ, ಕಾಂಪೌಂಡ್ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. … Read more

ಶಿವಮೊಗ್ಗ ಸಿಟಿ ಮತ್ತು ಸಾಗರ ತಾಲೂಕಿನ ವಿವಿಧೆಡೆ, ಹೊಳಲೂರು ಸುತ್ತಮುತ್ತ ಅಕ್ಟೋಬರ್ 8ರಂದು ಕರೆಂಟ್ ಇರಲ್ಲ

power cut graphics

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಅಕ್ಟೋಬರ್ 2020 ಮೆಸ್ಕಾಂ, ಸ್ಮಾರ್ಟ್ ಸಿಟಿ ಯೋಜನೆ ಸೇರಿದಂತೆ ವಿವಿಧ ಕಾಮಗಾರಿಗಳು ನಡೆಯುತ್ತಿರುವುದರಿಂದ ಶಿವಮೊಗ್ಗ ನಗರ ಮತ್ತು ಜಿಲ್ಲೆಯ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ. ಎಲ್ಲೆಲ್ಲಿ ಕರೆಂಟ್ ಇರಲ್ಲ ಶಿವಮೊಗ್ಗ ನಗರ ನಗರದ ಸ್ಮಾರ್ಟ್ ಸಿಟಿ ಕಾಮಗಾರಿ ಹಿನ್ನೆಲೆಯಲ್ಲಿ ಅ.8ರ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಕೋಟೆ ರಸ್ತೆ, ಅಪ್ಪಾಜಿ ರಾವ್ ಕಾಂಪೌಂಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಹೊಳಲೂರು ಸುತ್ತಮುತ್ತ ಹೊಳಲೂರು ವಿದ್ಯುತ್ … Read more

ಶಿವಮೊಗ್ಗದ 201 ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಛ ಸಂಕೀರ್ಣ ಘಟಕ, ಜಾಗ ಫೈನಲ್, ಏನದು ಘಟಕ? ಹೇಗಿರುತ್ತೆ?

021020 Swacha Sankirna at holaluru Eshwarappa 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಅಕ್ಟೋಬರ್ 2020 ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿ ಮಾಡಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‍ಗಳಲ್ಲಿ ಸ್ವಚ್ಛ ಸಂಕೀರ್ಣ ಘಟಕಗಳನ್ನು ಸ್ಥಾಪನೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಹೊಳಲೂರು ಗ್ರಾಮ ಪಂಚಾಯತ್‍ನಲ್ಲಿ ಸ್ವಚ್ಚ ಸಂಕೀರ್ಣ ಘಟಕವನ್ನು ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯ 271 ಗ್ರಾಮ ಪಂಚಾಯತ್‍ಗಳ ಪೈಕಿ 201 ಗ್ರಾಮ ಪಂಚಾಯತ್‍ಗಳಲ್ಲಿ ಸ್ವಚ್ಛ ಸಂಕೀರ್ಣ ಘಟಕ ಸ್ಥಾಪನೆಗೆ ಈಗಾಗಲೇ ಜಮೀನು ಗುರುತಿಸಲಾಗಿದ್ದು, ಕೆಲವು ಕಡೆಗಳಲ್ಲಿ … Read more

ಅರಕೆರೆ ದೇವಸ್ಥಾನದಲ್ಲಿ ಗಣಪತಿ ಮೂರ್ತಿ ಹೊಟ್ಟೆಗೆ ಸುತ್ತಿಕೊಂಡಿದ್ದ ನಾಗರ ಹಾವು

011020 Snake At Arakere Temple 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಅಕ್ಟೋಬರ್ 2020 ದೇವಸ್ಥಾನದ ಗರ್ಭಗುಡಿಯೊಳಗೆ ಗಣಪತಿ ಮೂರ್ತಿಯ ಹೊಟ್ಟೆಗೆ ಸುತ್ತಿಕೊಂಡು ಕೂತಿದ್ದ ನಾಗರ ಹಾವನ್ನು ಉರಗ ತಜ್ಞ ಸ್ನೇಕ್ ಕಿರಣ್ ರಕ್ಷಣೆ ಮಾಡಿದ್ದಾರೆ. ಹಾವು ಕಂಡು ಅರ್ಚಕರು ಮತ್ತು ಭಕ್ತರು ಭಯಗೊಂಡಿದ್ದರು. ಶಿವಮೊಗ್ಗದ ಅರಕೆರೆ ಶ್ರೀ ರಾಮೇಶ್ವರ ದೇವಸ್ಥಾನದ ಗರ್ಭಗುಡಿಯೊಳಗೆ ಗಣಪತಿ ಮೂರ್ತಿಯ ಹೊಟ್ಟೆಗೆ ನಾಗರ ಹಾವು ಸುತ್ತಿಕೊಂಡಿತ್ತು. ಇದನ್ನು ಗಮನಿಸಿ ಅರ್ಚಕರು ಆತಂಕಕ್ಕೀಡಾದರು. ಕೂಡಲೆ ಸ್ನೇಕ್ ಕಿರಣ್ ಅವರಿಗೆ ಕರೆ ಮಾಡಿ ಮಾಡಿ ವಿಚಾರ ತಿಳಿಸಿದ್ದರು. … Read more

ಗಾಜನೂರು ಸಮೀಪ ಅಬಕಾರಿ ಇಲಾಖೆ ದಾಳಿ, ಜಮೀನಿನಲ್ಲಿ ಬೆಳೆದಿದ್ದ 75 ಸಾವಿರ ಮೌಲ್ಯದ ಗಾಂಜಾ ಗಿಡ ವಶಕ್ಕೆ

250920 Ganja Raid by Excise Department 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟಂಬರ್ 2020 ಮಾರಾಟದ ಉದ್ದೇಶದಿಂದ ಜಮೀನಿನಲ್ಲಿ ಬೆಳೆದ ಗಾಂಜಾ ಗಿಡಗಳನ್ನು ಅಬಕಾರಿ ಅಧಿಕಾರಿಗಳು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ. ಗಾಜನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಡಲಮನೆ ಗ್ರಾಮದಲ್ಲಿ ದಾಳಿ ನಡೆಸಲಾಯಿತು. ಮೂಡಲಮನೆ ಟಿ.ಆರ್.ಮಂಜುನಾಥ್ ಎಂಬಾತ ಇಲ್ಲಿನ ಸರ್ವೆ ನಂಬರ್ 27ರಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ಹನ್ನೊಂದು ಗಾಂಜಾ ಗಿಡಗಳನ್ನು ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ 75 ಸಾವಿರ ರೂ. ಎಂದು … Read more