ಆಯನೂರು ಗೌಡನಕೆರೆಯಲ್ಲಿ ಈಜಲು ಹೋಗಿದ್ದ ವ್ಯಕ್ತಿ ನಾಪತ್ತೆ, ಸಂಜೆವರೆಗೂ ನಡೆಯಿತು ಶೋಧ ಕಾರ್ಯ

ಶಿವಮೊಗ್ಗ ಲೈವ್.ಕಾಂ | AYANUR NEWS | 29 ಜೂನ್ 2020 ಸ್ನೇಹಿತರೊಂದಿಗೆ ಗೌಡನಕೆರೆಯಲ್ಲಿ ಈಜಲು ತೆರಳಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದಾರೆ. ಕೆರೆಯಲ್ಲಿ ಮುಳುಗಿರುವ ಸಾದ್ಯತೆ ಇರುವುದರಿಂದ ಶೋಧ ಕಾರ್ಯ ನಡೆಸಲಾಯಿತು. ಶಿವಮೊಗ್ಗದ ವೆಂಕಟೇಶನಗರದ ನಿವಾಸಿ ಸಂತೊಷ್ (38) ನಾಪತ್ತೆಯಾದವರು. ಸ್ನೇಹಿತರಾದ ಅಖಿಲೇಶ್, ವಿನಾಯಕ ಮತ್ತು ನವೀನ್ ಅವರ ಜೊತೆಗೆ ಸಂತೋಷ್ ಗೌಡನಕೆರೆಯಲ್ಲಿ ಈಜಲು ತೆರಳಿದ್ದರು. ಹಣಗೆರೆಕಟ್ಟೆಗೆ ಹೋಗಿ ಬರುತ್ತಿದ್ದರು ಎಲ್ಲರು ಆಟೋದಲ್ಲಿ ಹಣಗೆರೆಕಟ್ಟೆಗೆ ತೆರಳಿದ್ದರು. ಅಲ್ಲಿಂದ ಹಿಂತಿರುಗುವ ವೇಳೆ ಗೌಡನಕೆರೆಯಲ್ಲಿ ಈಜಲು ಹೋಗಿದ್ದರು. ಈ ವೇಳೆ ಆಳವಾದ … Read more

ಗಾಜನೂರಿನ ತುಂಗಾ ಡ್ಯಾಮ್ ನಾಲ್ಕು ಗೇಟ್ ಓಪನ್, ಎಷ್ಟು ನೀರು ಹೊರ ಹರಿಸಲಾಗುತ್ತಿದೆ?

180620 Gajanur Tunga Dam Full Four Gates Opened 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಜೂನ್ 2020 ಗಾಜನೂರಿನ ತುಂಗಾ ಜಲಾಶಯದ ಕ್ರಸ್ಟ್ ಗೇಟುಗಳನ್ನು ಮೇಲೆತ್ತಲಾಗಿದ್ದು, ನದಿಗೆ ನೀರು ಹರಿಸಲಾಗುತ್ತಿದೆ. ಈ ಮಳೆಗಾಲದಲ್ಲಿ ಗೇಟ್ ತೆಗೆದು ನೀರು ಹೊರ ಹರಿಸುತ್ತಿರುವ ರಾಜ್ಯದ ಮೊದಲ ಡ್ಯಾಂ ಇದು. ಎಷ್ಟು ಗೇಟ್‍ಗಳನ್ನು ಮೇಲೆತ್ತಲಾಗಿದೆ? ಇವತ್ತು ಮಧ್ಯಾಹ್ನ ತುಂಗಾ ಜಲಾಶಯದ ನಾಲ್ಕು ಕ್ರಸ್ಟ್‍ ಗೇಟುಗಳನ್ನು ಮೇಲೆತ್ತಲಾಗಿದೆ. ಒಟ್ಟು 6836 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಈ ಪೈಕಿ ಕ್ರಸ್ಟ್ ಗೇಟುಗಳ ಮೂಲಕ 2086 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ವಿದ್ಯುತ್ … Read more

ಮೂರು ವರ್ಷದ ಮಗು ಸೇರಿ ಶಿವಮೊಗ್ಗದ ಹಕ್ಕಿಪಿಕ್ಕಿ ಕ್ಯಾಂಪ್‌ನ ಐದು ಜನರಿಗೆ ಕರೋನ

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಜೂನ್ 2020 ಮಹಾರಾಷ್ಟ್ರದಿಂದ ಹಿಂತಿರುಗಿದ್ದ ಐವರಿಗೆ ಕರೋನ ಸೋಂಕು ತಗುಲಿದೆ. ಇವರೆಲ್ಲ ಶಿವಮೊಗ್ಗ ತಾಲೂಕಿನ ಹಕ್ಕಿಪಿಕ್ಕಿ ಕ್ಯಾಂಪ್‍ನವರು. ಮಹಾರಾಷ್ಟ್ರದಿಂದ ಶನಿವಾರ ಹಿಂತಿರುಗಿದ್ದ ಐವರನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿತ್ತು. ಈ ವೇಳೆ ತಪಾಸಣೆ ನಡೆಸಿದಾಗ ಕರೋನ ಸೋಂಕು ಇರುವುದು ದೃಢವಾಗಿದೆ. 3 ವರ್ಷದ ಗಂಡು ಮಗುವಿಗೂ ಸೋಂಕು ಮೂರು ವರ್ಷದ ಗಂಡು ಮಗು ಸೇರಿ ಐವರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಪಿ7265 (19 ವರ್ಷದ ಪುರುಷ), ಪಿ7266 (25 ವರ್ಷದ … Read more

ಒಬ್ಬ ಶಾಸಕರಿಗೆ ಚೇರಿಲ್ಲ, ಮತ್ತೊಬ್ಬರು ವೇದಿಕೆಯ ಮೂಲೆಗೆ, ಸರ್ಕಾರಿ ಕಾರ್ಯಕ್ರಮದಲ್ಲಿ ಪಕ್ಷದ ಪದಾಧಿಕಾರಿಗಳಿಗೇಕೆ ಅವಕಾಶ?

150620 MLC Prasanna Kumar Gets out of Stage 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜೂನ್ 2020 ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಶಂಕುಸ್ಥಾಪನೆ ವೇಳೆ, ಶಾಸಕರೊಬ್ಬರಿಗೆ ವೇದಿಕೆ ಮೇಲೆ ಚೇರ್‌ ಸಿಗದೆ ಸಿಟ್ಟಾದ ಘಟನೆ ನಡೆಯಿತು. ವೇದಿಕೆಯಿಂದಲೇ ಕೆಳಗಿಳಿಯಲು ಹೊರಟವರನ್ನು ಸಚಿವ, ಸಂಸದರು ಸಮಾಧಾನಪಡಿಸಿದರು. ಸೋಗಾನೆ ಗ್ರಾಮದಲ್ಲಿ ವಿಮಾನ ನಿಲ್ದಾಣ ಕಾಮಗಾರಿಗೆ ಇವತ್ತು ಶಂಕುಸ್ಥಾಪನೆ ನೆರವೇರಿಸಲಾಯಿತು. ಈ ವೇಳೆ ವಿಧಾನ ಪರಿಷತ್‌ ಸದಸ್ಯ ಆರ್.ಪ್ರಸನ್ನ ಕುಮಾರ್‌ ಅವರಿಗೆ ಚೇರ್‌ ವ್ಯವಸ್ಥೆ ಮಾಡಿರಿಲಿಲ್ಲ. ವೇದಿಕೆ ಹತ್ತಿದ್ದ ಅವರು ಚೇರ್‌ ಸಿಗದೆ ಸಿಟ್ಟಾದರು. ತಾವು … Read more

ಆನ್‌ಲೈನ್‌ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಿಎಂ ಯಡಿಯೂರಪ್ಪ ಚಾಲನೆ

150620 Airport Work Inauguration in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜೂನ್ 2020 ಜಿಲ್ಲೆಯ ಜನತೆಯ ಬಹುದಿನಗಳ ಕನಸಾಗಿದ್ದ ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣದಿಂದಾಗಿ ಜಿಲ್ಲೆಯ ಹಾಗೂ ಸುತ್ತಲಿನ ಜಿಲ್ಲೆಗಳ ಪ್ರವಾಸೋದ್ಯಮ ಹಾಗೂ ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ಉತ್ತೇಜನ ದೊರೆಯುವ ನಿರೀಕ್ಷೆ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಿಂದ ಆನ್‍ಲೈನ್ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಶಿವಮೊಗ್ಗ ತಾಲೂಕಿನ ಸೋಗಾನೆ ಗ್ರಾಮದಲ್ಲಿ 220 ಕೋಟಿ … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಗಳ ಪಕ್ಕ ಮೂರು ಲಕ್ಷ ಸಸಿ, ನೆಡಲು ಇವತ್ತಿಂದ ಚಾಲನೆ

130620 Eshwarappa Planting in Sappling 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಜೂನ್ 2020 ಜಿಲ್ಲೆಯ ಎಲ್ಲಾ 271 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಕೆರೆಗಳ ಸುತ್ತ ಕನಿಷ್ಟ 3ಲಕ್ಷ ಸಸಿಗಳನ್ನು ನೆಡುವ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ವೀರಣ್ಣನಬೆನವಳ್ಳಿ ಗ್ರಾಮದ ಕೆರೆಯ ದಂಡೆಯಲ್ಲಿ ಸಸಿಗಳನ್ನು ನೆಟ್ಟು ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಂತರ್ಜಲ ಚೇತನ ಯೋಜನೆಯಡಿ ಅಭಿವೃದ್ಧಿಪಡಿಸುವ ಕಾರ್ಯಕ್ಕೆ ಈಗಾಗಲೆ ಚಾಲನೆ ನೀಡಲಾಗಿದೆ. ಇದೀಗ ಪ್ರತಿ ಗ್ರಾಮ … Read more

ಆಯನೂರು ಸಮೀಪ ರಾತ್ರಿ ಕುರಿ ಹಿಂಡಿನ ಮೇಲೆ ಹರಿದ ಲಾರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಜೂನ್ 2020 ರಸ್ತೆ ಬದಿಯಲ್ಲಿ ಬರುತ್ತಿದ್ದ ಕುರಿ ಹಿಂಡಿನ ಮೇಲೆ ಲಾರಿ ಹರಿದಿದೆ. ಘಟನೆಯಲ್ಲಿ 18 ಕುರಿಗಳು ಸಾವನ್ನಪ್ಪಿವೆ. ಆಯನೂರು ಸಮೀಪ ರಾತ್ರಿ ಘಟನೆ ಸಂಭವಿಸಿದೆ. ಉತ್ತರ ಕರ್ನಾಟಕದ ಕುಟುಂಬವೊಂದು ಕುರಿಗಳನ್ನು ಮೇಯಿಸಿಕೊಂಡು ಬಂದಿತ್ತು. ರಾತ್ರಿ ತಂಗಲು ವ್ಯವಸ್ಥೆ ಮಾಡುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಕುಂಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.   ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ … Read more

ಕಾಡಲ್ಲಿ ವೀಕೆಂಡ್ ಪಾರ್ಟಿ ಮಾಡುತ್ತಿದ್ದವರ ಕಿಕ್ ಇಳಿಸಿದ ಶಿವಮೊಗ್ಗ ಅಬಕಾರಿ ಅಧಿಕಾರಿಗಳು

080620 Abakari Raid in Shimoga Forest 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಜೂನ್ 2020 ಅರಣ್ಯ ಪ್ರದೇಶದಲ್ಲಿ ವೀಕೆಂಡ್ ಪಾರ್ಟಿ ಮಾಡುತ್ತಿದ್ದವರಿಗೆ ಶಿವಮೊಗ್ಗದ ಅಬಕಾರಿ ಇಲಾಖೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ದಿಢೀರ್ ದಾಳಿ ಮಾಡಿ ಕೇಸ್ ದಾಖಲಿಸಿದ್ದಾರೆ. ಶಿವಮೊಗ್ಗ ಅಬಕಾರಿ ರೇಂಜ್ ವ್ಯಾಪ್ತಿಯಲ್ಲಿ ಹಲವು ಕಡೆ ದಾಳಿ ನಡೆಸಲಾಗಿದೆ. ಸಾರ್ವಜನಿಕ ಪ್ರದೇಶ, ಅರಣ್ಯಗಳಲ್ಲಿ ಪಾರ್ಟಿ ಮಾಡುತ್ತಿದ್ದವರ ಕಿಕ್ ಇಳಿಸಲಾಗಿದೆ. ಎಷ್ಟು ಕಡೆ ದಾಳಿಯಾಗಿದೆ? ಎಷ್ಟು ಮದ್ಯ ವಶವಾಗಿದೆ? ಶಿವಮೊಗ್ಗ ರೇಂಜ್ ‍ವ್ಯಾಪ್ತಿಯ ಹಲವು ಕಡೆ ಅರಣ್ಯಗಳಲ್ಲಿ ಕೂಂಬಿಂಗ್ ಮಾಡಲಾಗಿದೆ. 25 … Read more

ರಸ್ತೆ ಪಕ್ಕದ ಗುಂಡಿಗಿಳಿದ KSRTC ಬಸ್, ಸ್ವಲ್ಪದರಲ್ಲಿ ತಪ್ಪಿತು ಭಾರಿ ಅನಾಹುತ

040620 Biranahalli KSRTC bus Accident 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಜೂನ್ 2020 ಚಾಲಕನ ನಿಯಂತ್ರಣ ತಪ್ಪಿದ ಕೆಎಸ್‍ಆರ್‍ಟಿಸಿ ಬಸ್ ರಸ್ತೆಯಿಂದ ಕೆಳಗಿಳಿದಿದೆ. ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಶಿವಮೊಗ್ಗ ತಾಲೂಕು ಬಿ.ಬೀರನಹಳ್ಳಿ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಬಸ್ಸಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದೆ. ಬಸ್ಸಿನಲ್ಲಿ ಸುಮಾರು 30 ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ. ಬಸ್ಸಿನ ವೇಗ ಕಡಿಮೆ ಇದ್ದಿದ್ದರಿಂದ ದೊಡ್ಡ ಅನಾಹುತ ತಪ್ಪಿತು. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494 ವಾಟ್ಸಪ್ ನಂಬರ್ | … Read more

ಸೀಲ್‌ಡೌನ್ ಏರಿಯಾದವರಿಂದ ಹಳ್ಳಿ ಮೇಲೆ ಕಲ್ಲು ತೂರಾಟ, ಐದು ಜನ ಮೆಗ್ಗಾನ್ ಆಸ್ಪತ್ರೆಗೆ, ಕಾರು ಗ್ಲಾಸ್ ಪೀಸ್ ಪೀಸ್

020620 Hakki Pikki Clash in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಜೂನ್ 2020 ಕೊರೊನಾ ಸೋಂಕು ಹಿನ್ನೆಲೆ ಸೀಲ್ ಡೌನ್ ಆಗಿದ್ದ ಪ್ರದೇಶದ ನಿವಾಸಿಗಳು ಪಕ್ಕದ ಹಳ್ಳಿಯ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದು ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಭವಿಸಿದ್ದು ಎಲ್ಲಿ? ಶಿವಮೊಗ್ಗ ತಾಲೂಕು ಹಸೂಡಿ ಸಮೀಪದ ಹಕ್ಕಿ ಪಿಕ್ಕಿ ಕ್ಯಾಂಪ್‌ನವರು ಚಿಕ್ಕಮರಡಿ ಗ್ರಾಮದ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗಿದೆ. ಮನೆಯ ಮುಂದೆ ನಿಲ್ಲಿಸಿದ್ದ … Read more