ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ, ಧಗಧಗ ಹೊತ್ತಿ ಉರಿದ ಕಾರು

230520 Car Burnt In Holehonnur 1 1

ಶಿವಮೊಗ್ಗ ಲೈವ್.ಕಾಂ | HOLEHONNURU NEWS | 23 ಮೇ 2020 ಪೂಜೆಗೆಂದು ತೆರಳುತ್ತಿದ್ದವರ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಕೆಲವೆ ಕ್ಷಣದಲ್ಲಿ ಕಾರು ಸಂಪೂರ್ಣ ಸುಟ್ಟು ಹೋಗಿದೆ. ಶಿವಮೊಗ್ಗ – ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ 13ರ ಕೂಡ್ಲಿ ಕ್ರಾಸ್ ಬಳಿ ಚಲಿಸುತ್ತಿದ್ದ ಕಾರಿನ ಮುಂಭಾಗದಲ್ಲಿ ಹೊಗೆ ಕಾಣಿಸಿಕೊಂಡಿದೆ. ಕಾರಿನಲ್ಲಿದ್ದ ಅಪ್ಪ, ಮಗ ಕೂಡಲೇ ರಸ್ತೆ ಪಕ್ಕಕ್ಕೆ ನಿಲ್ಲಿಸಿ, ಕೆಳಗಿಳಿದಿದ್ದಾರೆ. ಕೆಲವೇ ಕ್ಷಣದಲ್ಲಿ ಕಾರು ಧಗಧಗ ಹೊತ್ತಿ ಉರಿದಿದೆ. ಪೂಜೆಗೆ ಹೊರಟಿದ್ದಾಗ ಅವಘಡ ಶಿವಮೊಗ್ಗದ ನೆಹರು ರಸ್ತೆಯ … Read more

ಪಿ1305ಗೆ ಕರೋನ ಸೋಂಕು ತಗುಲಿದ್ದು ಹೇಗೆ ಅನ್ನೋದೇ ನಿಗೂಢ, ಊಹಾಪೋಹದಿಂದ ಕುಂಸಿ, ಚೋರಡಿ ಸುತ್ತಲು ಆತಂಕ

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಮೇ 2020 ಪೇಷೆಂಟ್ ನಂಬರ್ 1305 ಕೇಸ್ ಜಿಲ್ಲಾಡಳಿತಕ್ಕೆ ದೊಡ್ಡ ಸವಾಲಾಗಿದೆ. ಇವರಿಗೆ ಕರೋನ ಸೋಂಕು ತಗುಲಿದ್ದು ಹೇಗೆ ಅನ್ನುವುದು ಈತನಕ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ಹಾಗಾಗಿ ಸೋಂಕು ಮತ್ತಷ್ಟು ಜನಕ್ಕೆ ಹರಡಬಹುದೆ ಎಂಬ ಅನುಮಾನ ಮೂಡಿದೆ. ಶಿವಮೊಗ್ಗ ತಾಲೂಕು ಬಾಳೆಕೊಪ್ಪ ಗ್ರಾಮದ ಪಿ1305 ಅವರಿಗೆ ಸೋಂಕು ತಗುಲಿರುವ ಕುರಿತು ನಿನ್ನೆ ಸ್ಟೇಟ್ ಬುಲೆಟಿನ್‍ನಲ್ಲಿ ಪ್ರಕಟಿಸಲಾಗಿದೆ. ಇವರಿಗೆ 63 ವರ್ಷ ವಯಸ್ಸು. ಇವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು … Read more

ಶಿವಮೊಗ್ಗದಲ್ಲಿ ಕರೋನ ಕಂಟೈನ್ಮೆಂಟ್ ಜೋನ್ ಹೆಚ್ಚಳ, ಮೂರು ಗ್ರಾಮ ಸಂಪೂರ್ಣ ಸ್ಥಬ್ಧ, ಯಾವೆಲ್ಲ ಗ್ರಾಮಗಳು ಗೊತ್ತಾ?

150520 Rajadakatte Sealdown 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಮೇ 2020 ಶಿವಮೊಗ್ಗ ಜಿಲ್ಲೆಯಲ್ಲಿ ಕಂಟೈನ್ಮೆಂಟ್ ಜೋನ್‍ಗಳ ಸಂಖ್ಯೆ ಹೆಚ್ಚಳವಾಗಿದೆ. ಈ ತನಕ ಒಂದೆ ಕಂಟೈನ್ಮೆಂಟ್ ಜೋನ್ ಇತ್ತು. ಆದರೆ ಎರಡು ಹೊಸ ಪಾಸಿಟಿವ್ ಪ್ರಕರಣದಿಂದ ಕಂಟೈನ್ಮೆಂಟ್ ಜೋನ್ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಕಂಟೈನ್ಮೆಂಟ್ ಜೋನ್ 1 | ತೀರ್ಥಹಳ್ಳಿ ತಾಲೂಕಿನ ಗ್ರಾಮ ಪೇಷೆಂಟ್ ನಂಬರ್ 995 ಮುಂಬೈನಿಂದ ತೀರ್ಥಹಳ್ಳಿ ತಾಲೂಕು ಹಳ್ಳಿಕಬೈಲು ಗ್ರಾಮಕ್ಕೆ ಬಂದಿದ್ದರು. ಮರು ದಿನವೆ ಇವರಿಗೆ ಕರೋನ ಪಾಸಿಟಿವ್ ಬಂದಿತ್ತು. ಪಿ995 ಮತ್ತು … Read more

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ 3 ದಿನದಲ್ಲಿ ನಡೆಯಬೇಕಿದ್ದ 4 ಬಾಲ್ಯ ವಿವಾಹಕ್ಕೆ ಬ್ರೇಕ್, ಎಲ್ಲೆಲ್ಲಿ ನಡೆಯಲಿದ್ದವು ಮದುವೆ?

shivamogga graphics map

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಮೇ 2020 ಜಿಲ್ಲೆಯ ವಿವಿಧೆಡೆ ಕಳೆದ ಮೂರು ದಿನದಲ್ಲಿ ನಾಲ್ಕು ಕಡೆ ನಡೆಯಬೇಕಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದಿದ್ದಾರೆ. ಅಲ್ಲದೆ ಪೋಷಕರಿಗೆ ತಿಳಿ ಹೇಳಿ, ಮದುವೆ ನಡೆಸದಂತೆ ಎಚ್ಚರಿಕೆಯನ್ನು ನೀಡಿದ್ದಾರೆ. ಪ್ರಕರಣ 1 ಶಿವಮೊಗ್ಗ ತಾಲೂಕಿನ ಗ್ರಾಮವೊಂದರಲ್ಲಿ 16 ವರ್ಷದ ಬಾಲಕಿಯೊಬ್ಬಳ ಮದುವೆ ನಿಶ್ಚಯ ಮಾಡಲಾಗಿತ್ತು. ಮಾಹಿತಿ ತಿಳಿದ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ತೆರಳಿ ಮದುವೆಯನ್ನು ನಿಲ್ಲಿಸಿದ್ದಾರೆ. ಪ್ರಕರಣ 2 ಶಿಕಾರಿಪುರದ ಹಳ್ಳಿಯೊಂದರಲ್ಲಿ 15 ವರ್ಷದ ಬಾಲಕಿಯೊಬ್ಬಳ … Read more

ಹೊಳೆಹೊನ್ನೂರು ಚೆಕ್ ಪೋಸ್ಟ್‌ನಲ್ಲಿ ತಪಾಸಣೆ ಚುರುಕು, ಕ್ವಾರಂಟೈನ್‌ಗೆ ಒಂದೆಡೆ ಗ್ರಾಮಸ್ಥರಿಂದ ಎಸ್, ಮತ್ತೊಂದೆಡೆ ನೋ

140520 Holehonnuru checkpost checking 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಮೇ 2020 ದಾವಣಗೆರೆ ಜಿಲ್ಲೆಯಿಂದ ಶಿವಮೊಗ್ಗಕ್ಕೆ ಬರುವವರ ಆರೋಗ್ಯ ತಪಾಸಣೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಈ ಭಾಗದಲ್ಲಿ ತಪಾಸಣೆಗೆ ಇಳಿದಿರುವ ಸಿಬ್ಬಂದಿಗೆ ಪಿಪಿಇ ಮಾದರಿಯ ಕಿಟ್ ನೀಡಲಾಗಿದೆ. ಪಿಪಿಇ ಕಿಟ್ ಮಾದರಿಯಲ್ಲಿರುವ ಸುರಕ್ಷಿತ ಸಾಧನ ಧರಿಸಿಕೊಂಡು, ಹೊರ ರಾಜ್ಯ ಮತ್ತು ಜಿಲ್ಲೆಯಿಂದ ಬರುವವರ ತಪಾಸಣೆ ನಡೆಸಲಾಗುತ್ತಿದೆ. ಪ್ರತಿಯೊಬ್ಬರಿಗೂ ಥರ್ಮಲ್ ಸ್ಕ್ಯಾನಿಂಗ್ ಮಾಡಲಾಗುತ್ತಿದೆ. ಕ್ವಾರಂಟೈನ್‍ಗೆ ಇಲ್ಲಿ ಒಪ್ಪಿಗೆ, ಅಲ್ಲಿ ನಿರಾಕರಣೆ ಹಂಚಿನ ಸಿದ್ಧಾಪುರ ಮತ್ತು ಆನವೇರಿಯಲ್ಲಿರುವ ಮೊರಾರ್ಜಿ ವಸತಿ ಶಾಲೆಯಲ್ಲಿ … Read more

ವೈರಲ್ ಆಯ್ತು ಸಕ್ರೆಬೈಲು ಬಳಿ ಸಂಭವಿಸಿದ ಭೀಕರ ಅಪಘಾತದ ವಿಡಿಯೋ, ಹೇಗಾಯ್ತು? ಅಪಘಾತಕ್ಕೇನು ಕಾರಣ?

110520 Accident In Shimoga Sakrebyle 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಮೇ 2020 ಸಕ್ರೆಬೈಲು ಸಮೀಪ ಭಾನುವಾರ ಸಂಭವಿಸಿದ ಭೀಕರ ಅಪಘಾತದ ವಿಡಿಯೋ ವೈರಲ್ ಆಗಿದೆ. ಮಳೆಯ ದೃಶ್ಯವನ್ನು ಮೊಬೈಲ್‍ನಲ್ಲಿ ಸೆರೆ ಹಿಡಿಯುತ್ತಿದ್ದಾಗ ಅಪಘಾತ ಸೆರೆಯಾಗಿದೆ. ಹೇಗಾಯ್ತು ಅಪಘಾತ? ಭಾರಿ ಮಳೆ ಸುರಿಯುತ್ತಿದ್ದ ವೇಳೆ ಅಪಘಾತವಾಗಿದೆ. ತಿರುವಿನಲ್ಲಿ ವೇಗವಾಗಿ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬಲಕ್ಕೆ ಜಾರಿದೆ. ಎದುರಿನಿಂದ ಬರುತ್ತಿದ್ದ ಬೈಕ್‍ಗೆ ಲಾರಿಯ ಹಿಂಭಾಗ ಅಪ್ಪಳಿಸಿದೆ. ಬಳಿಕ ಬೈಕ್‍ನ ಹಿಂದೆ ಬರುತ್ತಿದ್ದ ಕಾರಿಗೂ ಲಾರಿ ಗುದ್ದಿದೆ. ಕಾರಿನ … Read more

ತೀರ್ಥಹಳ್ಳಿಯಲ್ಲಿ ಹಾರ್ಡ್‌ವೇರ್ ಸಾಮಗ್ರಿ ಹೊತ್ತ ಲಾರಿ ಪಲ್ಟಿ, ಶಿವಮೊಗ್ಗ ಭದ್ರಾವತಿ ನಡುವೆ ಲಾರಿ ಅಪಘಾತ

080520 Lorry Accident Near Thirthahalli 1

ಶಿವಮೊಗ್ಗ ಲೈವ್.ಕಾಂ | SHIMOGA | 8 ಮೇ 2020 ಶಿವಮೊಗ್ಗ ಮತ್ತು ತೀರ್ಥಹಳ್ಳಿಯಲ್ಲಿ ಸಂಭವಿಸಿದ ಪ್ರತ್ಯೇಕ ಘಟನೆಯಲ್ಲಿ ಎರಡು ಲಾರಿಗಳು ಅಪಘಾತಕ್ಕೀಡಾಗಿವೆ. ತೀರ್ಥಹಳ್ಳಿ ರಿಪೋರ್ಟ್ ಹಾರ್ಡ್‍ವೇರ್ ಸಾಮಾಗ್ರಿಗಳನ್ನು ತುಂಬಿಕೊಂಡು ಬರುತ್ತಿದ್ದ ಲಾರಿಯೊಂದು ತೀರ್ಥಹಳ್ಳಿ ತಾಲೂಕು ಕುಡುಮಲ್ಲಿಗೆ ಬಳಿ ಉರುಳಿ ಬಿದ್ದಿದೆ. ಆಂಧ್ರ ಪ್ರದೇಶದಿಂದ ತೀರ್ಥಹಳ್ಳಿಯ ಸಿರಿಬೈಲು ಗ್ರಾಮದ ಅಂಗಡಿಯೊಂದಕ್ಕೆ ಹಾರ್ಡ್‍ವೇರ್ ವಸ್ತುಗಳನ್ನು ತುಂಬಿಕೊಂಡು ಬರುತ್ತಿತ್ತು. ನಿದ್ರೆ ಮಂಪರಿನಲ್ಲಿ ಅಪಘಾತ ಸಂಭವಿಸಿರುವ ಶಂಕೆ ಇದೆ. ಶಿವಮೊಗ್ಗ ವರದಿ ಶಿವಮೊಗ್ಗದ ಭದ್ರಾವತಿ ಹೈವೇಯಲ್ಲಿ ಲಾರಿಯೊಂದ ಪಲ್ಟಿಯಾಗಿದೆ. ಮಲವಗೊಪ್ಪದ ಬಳಿ … Read more

ಸೂಗೂರಲ್ಲಿ ಮೊಬೈಲ್ ಸ್ಫೋಟ, ಬಾಲಕನ ಕಣ್ಣು, ಕೈ, ಮೊಣಕಾಲುಗಳಿಗೆ ಗಾಯ

shivamogga graphics map

ಶಿವಮೊಗ್ಗ ಲೈವ್.ಕಾಂ | SHIMOGA | 8 ಮೇ 2020 ಕೀಪ್ಯಾಡ್ ಮೊಬೈಲ್ ಸ್ಪೋಟಗೊಂಡು ಬಾಲಕನೊಬ್ಬನಿಗೆ ಗಾಯವಾಗಿದೆ. ಶಿವಮೊಗ್ಗ ತಾಲೂಕು ಸೂಗುರು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ರಾಕೇಶ್, ಗಾಯಗೊಂಡ ಬಾಲಕ. ಬಲಗಣ್ಣು, ಕೈ ಮತ್ತು ಮೊಣಕಾಲುಗಳಿಗೆ ಗಾಯವಾಗಿದೆ. ಪೋಷಕರು ಕೂಡಲೇ ರಾಕೇಶ್‍ನನ್ನು ಮೆಗ್ಗಾನ್ ಅಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ್ದಾರೆ. ಮೊಬೈಲ್ ಬಳಕೆ ಮಾಡುವ ಹೊತ್ತಿಗೆ ಸ್ಫೋಟಗೊಂಡಿದ್ದು, ಬಾಲಕ ಗಾಯಗೊಂಡಿದ್ದಾನೆ. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494 ವಾಟ್ಸಪ್ ನಂಬರ್ | 7411700200 ಈ ಮೇಲ್ ಐಡಿ … Read more

ಶಿವಮೊಗ್ಗ – ದಾವಣಗೆರೆ ಗಡಿಯಲ್ಲಿ ಬಂದೋಬಸ್ತ್ ಹೆಚ್ಚಳ, ಚೆಕ್‌ಪೋಸ್ಟ್‌ಗೆ ಡಿಸಿ, ಎಸ್ಪಿ ದಿಢೀರ್ ಭೇಟಿ

050520 Suttukote Checkpost Visit By DC SP copy 1

ಶಿವಮೊಗ್ಗ ಲೈವ್.ಕಾಂ | SHIMOGA | 5 ಮೇ 2020 ದಾವಣಗೆರೆಯಲ್ಲಿ ಕರೋನ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ, ಶಿವಮೊಗ್ಗದ ಗಡಿ ಭಾಗಗಳಲ್ಲಿ ಬಂದೋಬಸ್ತ್ ಹೆಚ್ಚಿಸಲಾಗಿದೆ. ದಾವಣಗೆರೆ ಕಡೆಯಿಂದ ಬರುವ ವಾಹನಗಳನ್ನು ಯಾವುದೆ ಕಾರಣಕ್ಕೂ ಜಿಲ್ಲೆಯೊಳಗೆ ಪ್ರವೇಶ ನೀಡದಂತೆ ಕಠಿಣ ಸೂಚನೆ ನೀಡಲಾಗಿದೆ. ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಮತ್ತು ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್‍.ಟಿ.ಶೇಖರ್‍ ಅವರು ಇವತ್ತು ಶಿವಮೊಗ್ಗದ ಗಡಿ ಭಾಗದಲ್ಲಿರುವ ಚೆಕ್‍ಪೋಸ್ಟ್‍ಗೆ ದಿಢೀರ್ ಭೇಟಿ ನೀಡಿದ್ದರು. ಸುತ್ತುಕೋಟೆ ಚೆಕ್‍ಪೋಸ್ಟ್‍ಗೆ ತೆರಳಿದ್ದ ಅಧಿಕಾರಿಗಳು, ಯಾವ ವಾಹನವನ್ನೂ … Read more

ಆಯನೂರು ಬಳಿ ಉರುಳಿ ಬಿತ್ತು ನಿರ್ಮಾಣ ಹಂತದ ವಿದ್ಯುತ್ ಟವರ್, ಕಾರ್ಮಿಕರಿಗೆ ಗಾಯ, ಸ್ಥಳದಲ್ಲಿ ಕೆಲಕಾಲ ಆತಂಕ

290420 Tower Falls in Ayanur Shimoga 1

ಶಿವಮೊಗ್ಗ ಲೈವ್.ಕಾಂ | SHIMOGA | 29 ಏಪ್ರಿಲ್ 2020 ನಿರ್ಮಾಣ ಹಂತದ ವಿದ್ಯತ್‌ ಟವರ್‌ ದಿಢೀರ್‌ ಉರುಳಿದ ಬಿದ್ದಿದ್ದು, ಇಬ್ಬರು ಕಾರ್ಮಿಕರು ಗಾಯಗೊಂಡಿದ್ದಾರೆ. ಸ್ಥಳೀಯರ ನೆರವಿನೊಂದಿಗೆ ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಯನೂರು ಸಮೀಪದ ಹೊಸನಗರ ರಸ್ತೆ ಬಳಿ 220 ಕೆ.ವಿ. ಟವರ್‌ ಲೈನ್‌ ಕಾಮಗಾರಿ ನಡೆಯುತ್ತಿದೆ. ಬೆಂಗಳೂರಿನ ಖಾಸಗಿ ಕಂಪನಿಯೊಂದು ಟವರ್‌ ನಿರ್ಮಾಣ ಮಾಡುತ್ತಿದೆ. ಪಶ್ಚಿಮ  ಬಂಗಾಳ ಮೂಲದ ಕಾರ್ಮಿಕರು ಇಲ್ಲಿ ಕೆಲಸ ಮಾಡುತ್ತಿದ್ದಾರೆ. ‌ ದೊಡ್ಡ ಅನಾಹುತ ತಪ್ಪಿಸಿದ ಊಟ ಬೆಳಗ್ಗೆಯಿಂದಲೇ ಟವರ್‌ … Read more