ಮಾಸ್ಕ್ ಧರಿಸದವರಿಗೆ ಫೈನ್ ಹಾಕ್ತೀವಿ ಅಂತಿದ್ದರು, ಅನುಮಾನದಿಂದ ವಿಚಾರಿಸಿದ ಗ್ರಾಮಸ್ಥರಿಗೆ ಕಾದಿತ್ತು ಶಾಕ್

prison hand cuff image

ಶಿವಮೊಗ್ಗ ಲೈವ್.ಕಾಂ | SHIMOGA | 21 ಏಪ್ರಿಲ್ 2020 ಲಾಕ್‍ಡೌನ್ ಸಂದರ್ಭವನ್ನು ಬಳಿಸಿಕೊಂಡು ಜನರಿಂದ ಹಣ ವಸೂಲಿ ಮಾಡುತ್ತಿದ್ದ ನಕಲಿ ಪೊಲೀಸ್ ಮತ್ತು ನಕಲಿ ಆರೋಗ್ಯ ಇಲಾಖೆ ಅಧಿಕಾರಿ ಜೈಲು ಸೇರಿಸಿದ್ದಾರೆ. ಶಿವಮೊಗ್ಗ ತಾಲೂಕಿನ ಗ್ರಾಮಗಳಲ್ಲಿ ಜನರನ್ನ ಬೆದರಿಸಿ ಹಣ ವಸೂಲಿಗಿಳಿದಿದ್ದರು. ಹಣ ವಸೂಲಿ ಹೇಗೆ? ಯಾಕೆ? ಕರೋನ ಹರಡದಂತೆ ತಡೆಗಟ್ಟಲು ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಇಲಾಖೆ ಜನರಿಗೆ ಸೂಚನೆ ನೀಡಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಯುವಕರಿಬ್ಬರು, ವಾಹನಗಳಲ್ಲಿ ಹೋಗುತ್ತಿದ್ದವರನ್ನು ತಡೆಯುತ್ತಿದ್ದರು. ತಮ್ಮನ್ನು ಪೊಲೀಸ್ … Read more

ಶಿವಮೊಗ್ಗದ ಗಾಜನೂರಿನಲ್ಲಿ ಬಾರ್ ಗೋಡೆ ಕೊರೆದ ಕಳ್ಳರು

120420 Bar theft attempt in gajanur 1

ಶಿವಮೊಗ್ಗ ಲೈವ್.ಕಾಂ | SHIMOGA | 12 ಏಪ್ರಿಲ್ 2020 ಲಾಕ್‌ಡೌನ್‌ ಹಿನ್ನೆಲೆ ದೇಶಾದ್ಯಂತ ಮದ್ಯ ಮಾರಾಟ ಬಂದ್‌ ಆಗಿದೆ. ಇದರಿಂದ ಮದ್ಯ ಪ್ರಿಯರು ಪರಿತಪಿಸುತ್ತಿದ್ದಾರೆ. ಈ ನಡುವೆ ಬಾರ್‌, ವೈನ್‌ ಶಾಪ್‌ಗಳ ಗೋಡೆ ಕೊರೆದು, ಬಾಟಲಿ ಕಳ್ಳತನ ಪ್ರಕರಣಗಳು ವರದಿಯಾಗುತ್ತಿವೆ. ಶಿವಮೊಗ್ಗ ತಾಲೂಕು ಗಾಜನೂರಿನಲ್ಲೂ ಇಂಥದ್ದೇ ಪ್ರಕರಣ ನಡೆದಿದೆ. ಗೋಡೆ ಕೊರೆದು ಎಣ್ಣೆ ಹಾರಿಸಲು ಪ್ಲಾನ್‌ ಗಾಜನೂರಿನ ಸ್ನೇಹ ಬಾರ್‌ ಅಂಡ್‌ ರೆಸ್ಟೋರೆಂಟ್‌ನಲ್ಲಿ ಮದ್ಯ ಕಳ್ಳತನಕ್ಕೆ ವಿಫಲ ಯತ್ನ ನಡೆಸಲಾಗಿದೆ. ಬಾರ್‌ನ ಗೋಡೆ ಕೊರೆದು ಕಳ್ಳರು … Read more

ಆಯನೂರು ಸಮೀಪ 70ಕ್ಕೂ ಹೆಚ್ಚು ಮಂದಿಯಿಂದ ನಮಾಜ್, ಏಳು ಮಂದಿಗೆ ಜ್ವರದ ಲಕ್ಷಣ, ಎಲ್ಲರಿಗೂ ಈಗ ಕ್ವಾರಂಟೈನ್

030420 Namaaz in Ayanuru 1

ಶಿವಮೊಗ್ಗ ಲೈವ್.ಕಾಂ | SHIMOGA | 3 ಏಪ್ರಿಲ್ 2020 ಲಾಕ್’ಡೌನ್ ಮತ್ತು ನಿಷೇಧಾಜ್ಞೆ ಆದೇಶ ಉಲ್ಲಂಘಿಸಿ ಮಸೀದಿಯೊಂದರಲ್ಲಿ ನಮಾಜ್ ಮಾಡುತ್ತಿದ್ದ 77 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು, ಕ್ವಾರಂಟೈನ್’ನಲ್ಲಿ ಇರಿಸಿದ್ದಾರೆ. ನಮಾಜ್’ನಲ್ಲಿ ಭಾಗಿಯಾದವರ ಪೈಕಿ ಏಳು ಮಂದಿಯಲ್ಲಿ ಜ್ವರದ ಲಕ್ಷಣ ಇರುವುದು ಬೆಳಕಿಗೆ ಬಂದಿದೆ. ಆಯನೂರು ಸಮೀಪದ ಕೆಸವಿನಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದೆ. ಶುಕ್ರವಾರದ ನಮಾಜ್ ಮಾಡಲು 70ಕ್ಕೂ ಹೆಚ್ಚು ಮಂದಿ ಸೇರಿದ್ದಾರೆ ಅಂತಾ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಸ್ಥಳಕ್ಕೆ ದೌಡಾಯಿಸಿದ ಡಾಕ್ಟರ್ ಸ್ಥಳಕ್ಕೆ ಭೇಟಿ … Read more

ಲಾಕ್’ಡೌನ್ ಪರಿಣಾಮ, ಶಿವಮೊಗ್ಗದಲ್ಲಿ ಎರಡು ಎಕರೆಯಲ್ಲಿ ಬೆಳೆದ ಸುಗಂಧರಾಜ ಕಿತ್ತೊಗೆದ ರೈತ ಮಹಿಳೆ

020420 Flower Cut By Farmer Woman 1

ಶಿವಮೊಗ್ಗ ಲೈವ್.ಕಾಂ | SHIMOGA | 2 ಏಪ್ರಿಲ್ 2020 ಕರೋನ ಲಾಕ್’ಡೌನ್ ಹೂವು ಕೃಷಿಗೆ ಭಾರೀ ಪೆಟ್ಟು ನೀಡಿದೆ. ಹೂವುಗಳನ್ನು ಬೆಳೆದವರ ಬದುಕು ಬೀದಿಗೆ ಬರುವಂತಾಗಿದೆ. ಹಾಗಾಗಿ, ಅರಳಿ ನಿಂತ ಹೂವುಗಳನ್ನು ಮಾರಾಟ ಮಾಡಲಾಗದೆ, ಹೂವು ಕೃಷಿಕರೊಬ್ಬರು ಅವುಗಳನ್ನು ಕಿತ್ತೊಗೆದಿದ್ದಾರೆ. ಕಾಶಿಪುರದ ನಿವಾಸಿ ಕೃಷಿಕ ಮಹಿಳೆ ಲಕ್ಷ್ಮೀ ನರಸಿಂಹಮೂರ್ತಿ ಅವರು ಎರಡು ಎಕರೆಯಲ್ಲಿ ಹೂವು ಬೆಳೆದಿದ್ದಾರೆ. ಸುಗಂಧರಾಜ ಹೂವು ಇವರ ಬದುಕನ್ನು ಅರಳಿಸಬೇಕಿತ್ತು. ಆದರೆ ಲಾಕ್’ಡೌನ್ ಆಗುತ್ತಿದ್ದಂತೆ ಹೂವು ಖರೀದಿಗೆ ಯಾರು ಬರುತ್ತಿಲ್ಲ. ಹೊರ ಹೋಗಿ … Read more

*ಉಂಬ್ಳೆಬೈಲು ಬಳಿ ರಸ್ತೆ ದಾಟುತ್ತಿದ್ದ ಜಿಂಕೆಗೆ ಅಪರಿಚಿತ ವಾಹನ ಡಿಕ್ಕಿ

ಶಿವಮೊಗ್ಗ ಲೈವ್.ಕಾಂ | SHIMOGA | 8 ಫೆಬ್ರವರಿ 2020 ಅಪರಿಚಿತ ವಾಹನ ಡಿಕ್ಕಿಹೊಡೆದು ಜಿಂಕೆಯೊಂದು ಸಾವನ್ನಪ್ಪಿದೆ. ಶಿವಮೊಗ್ಗ – ಎನ್.ಆರ್.ಪುರ ರಸ್ತೆಯಲ್ಲಿ ರಾತ್ರಿ ಘಟನೆ ಸಂಭವಿಸಿದೆ. ಉಂಬ್ಳೆಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟಕೆರೆ ಗ್ರಾಮದ ಬಳಿ ಘಟನೆ ಸಂಭವಿಸಿದೆ. ರಾತ್ರಿ ರಸ್ತೆ ದಾಟುತ್ತಿದ್ದ ಜಿಂಕೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿದೆ. ಅರಣ್ಯಾಧಿಕಾರಿ ಸುನಿಲ್ ಸ್ಥಳಕ್ಕೆ ಭೇಟಿ ನೀಡಿದ್ದರು. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494 ವಾಟ್ಸಪ್ ನಂಬರ್ | … Read more

ಆಯನೂರು ಬಳಿ ರೈಲು ಡಿಕ್ಕಿ ಹೊಡೆದು ಚಿರತೆ ಸಾವು, ಸ್ಥಳದಲ್ಲೇ ಮರಣೋತ್ತರ ಪರೀಕ್ಷೆ

ಶಿವಮೊಗ್ಗ ಲೈವ್.ಕಾಂ | SHIMOGA | 7 ಫೆಬ್ರವರಿ 2020 ಆಯನೂರು ಸಮೀಪದ ಕೊನಗವಳ್ಳಿಯಲ್ಲಿ ರೈಲು ಹಳಿ ಪಕ್ಕದಲ್ಲಿ ಏಳರಿಂದ ಎಂಟು ವರ್ಷದ ಗಂಡು ಚಿರತೆಯ ಮೃತದೇಹ ಗುರುವಾರ ಪತ್ತೆಯಾಗಿದ್ದು, ರಾತ್ರಿ ರೈಲು ಡಿಕ್ಕಿ ಹೊಡೆದು ಮೃತಪಟ್ಟಿರಬಹುದು ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ಕೊನಗವಳ್ಳಿ ಸರ್ವೇ ನಂ.56ರ ಸಿದ್ಧಿಪುರ ಮೈನರ್ ಫಾರೆಸ್ಟ್ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ರೈಲ್ವೆ ಸಿಬ್ಬಂದಿ, ಟ್ರಾಕ್‌ಮನ್ ಹಾಗೂ ಕೀಮನ್’ಗಳು ಚಿರತೆ ಸತ್ತು ಬಿದ್ದಿರುವುದನ್ನು ಕಂಡಿದ್ದು, ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. … Read more

ಆಯನೂರು ಬಳಿ ರಸ್ತೆ ಅಪಘಾತ, ಕ್ಯಾಂಟರ್, ಬೈಕ್ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ಸಾವು

ಶಿವಮೊಗ್ಗ ಲೈವ್.ಕಾಂ | SHIMOGA | 4 ಫೆಬ್ರವರಿ 2020 ಆಯನೂರು ಬಳಿ ಕ್ಯಾಂಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಯನೂರು ಬಳಿಯ ಚೆನ್ನಹಳ್ಳಿ ಕ್ರಾಸ್’ನಲ್ಲಿ ಘಟನೆ ಸಂಭವಿಸಿದೆ. ಬೈಕ್ ಸವಾರ ಮೋಹನ್ ಕುಮಾರ್ (46) ಸ್ಥಳದಲ್ಲೆ ಮೃತರಾಗಿದ್ದಾರೆ. ಮೋಹನ್ ಕುಮಾರ್ ಅವರು ಆಯನೂರು ಸಮೀಪದ ಚಾಮುಂಡಿಪುರ ನಿವಾಸಿ. ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494 ವಾಟ್ಸಪ್ … Read more

ಕಾಮಗಾರಿ ಗುದ್ದಲಿ ಪೂಜೆ ಸ್ಥಳದಲ್ಲಿದ್ದ ಫ್ಲೆಕ್ಸ್’ನಲ್ಲಿ ಕಣ್ಮರೆಯಾದ ಫೋಟೊ, ಮಾಜಿ ಮೇಯರ್ ಗರಂ

ಶಿವಮೊಗ್ಗ ಲೈವ್.ಕಾಂ | SHIMOGA | 1 ಫೆಬ್ರವರಿ 2020 ಅನುಪಿನಕಟ್ಟೆಯ ಕಸ ವಿಲೇವಾರಿ ಘಟಕದಿಂದ ಪುರದಾಳು ಗ್ರಾಮದವರೆಗಿನ ರಸ್ತೆ ಕಾಮಗಾರಿಗೆ ಇವತ್ತು ಗುದ್ದಲಿ ಪೂಜೆ ನೆರವೇರಿಸಲಾಯಿತು. ಆದರೆ ಈ ವೇಳೆ ಫ್ಲೆಕ್ಸ್’ನಲ್ಲಿ ಫೋಟೊ ಬಳಸದೆ ಇರುವುದಕ್ಕೆ ಶಿವಮೊಗ್ಗದ ಮಾಜಿ ಮೇಯರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ್, ಮೇಯರ್ ಸುವರ್ಣ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಮಾಜಿ ಮೇಯರ್ ಲತಾ ಗಣೇಶ್, ಮಾಜಿ ಉಪ ಮೇಯರ್ ಚನ್ನಬಸಪ್ಪ ಅವರು ಗುದ್ದಲಿ ಪೂಜೆ … Read more

ಸೇತುವೆಯಿಂದ ಕೆಳಗೆ ಹಾರಿದ ಕಂಟೈನರ್ ಲಾರಿ, ಅಫಘಾತದಲ್ಲಿ ಲಾರಿ ಜಖಂ

ಶಿವಮೊಗ್ಗ ಲೈವ್.ಕಾಂ | SHIMOGA | 26 ಜನವರಿ 2020 ತಾಲೂಕಿನ ಸೂಡೂರು ಸೇತುವೆಯಿಂದ ಕುಮದ್ವತಿ ನದಿಗೆ ಶನಿವಾರ ಸಂಜೆ ಟ್ರಕ್‌ವೊಂದು ಕೆಳಕ್ಕೆ ಬಿದ್ದ ಪರಿಣಾಮ ಟ್ರಕ್ ಚಾಲಕನಿಗೆ ಕಾಲು ಹಾಗೂ ತಲೆಗೆ ಗಾಯಗಳಾಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕಂಟೈನರ್ ಕೊಂಡೊಯ್ಯುತ್ತಿದ್ದ ಟ್ರಕ್‌ ಶಿವಮೊಗ್ಗ ಕಡೆಯಿಂದ ಹೊಸನಗರ ಮಾರ್ಗವಾಗಿ ಕುಂದಾಪುರಕ್ಕೆ ತೆರಳುತ್ತಿತ್ತು ಎನ್ನಲಾಗಿದೆ. ಅಪಘಾತ ಸಂಭವಿಸಿದ ಸ್ಥಳ ಶಿವಮೊಗ್ಗ ಹಾಗೂ ಹೊಸನಗರ ತಾಲೂಕಿನ ಗಡಿ ಪ್ರದೇಶದಲ್ಲಿದೆ. ಸ್ಥಳಕ್ಕೆ ಕುಂಸಿ ಹಾಗೂ ರಿಪ್ಪನ್‌ಪೇಟೆ ಪೊಲೀಸರು ಭೇಟಿ ನೀಡಿದರು. ಆದರೆ … Read more

ಅಕ್ರಮವೋ, ಸಕ್ರಮವೋ ಒಟ್ಟಿನಲ್ಲಿ ಇಲ್ಲಿ ಮರಳು ಗಣಿಗಾರಿಕೆ ಅವಕಾಶ ಬೇಡ, ಸಚಿವರಿಗೆ ಗ್ರಾಮಸ್ಥರ ಒತ್ತಾಯ

ಶಿವಮೊಗ್ಗ ಲೈವ್.ಕಾಂ | SHIMOGA | 25 ಜನವರಿ 2020 ಶ್ರೀ ಕ್ಷೇತ್ರ ಕೂಡಲಿಯಲ್ಲಿ ಮರಳು ಗಣಿಗಾರಿಕೆ ನಿಲ್ಲಿಸುವಂತೆ ಆಗ್ರಹಿಸಿ ಕೂಡಲಿ ಗ್ರಾಮಸ್ಥರು ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಮನವಿ ಸಲ್ಲಿಸಿದರು. ಕೂಡಲಿ ಪುರಾಣ ಪ್ರಸಿದ್ಧ ಮತ್ತು ಐತಿಹಾಸಿಕ ಗ್ರಾಮವಾಗಿದ್ದು ಇತ್ತೀಚೆಗೆ ಮರಳುಗಾರಿಕೆಯಿಂದ ಈ ಗ್ರಾಮ ಅಳಿವಿನ ಅಂಚಿಗೆ ಸಾಗುತ್ತಿದೆ ಎಂದು ಆರೋಪಿಸಿದರು.   ಮರಳು ಗಣಿಗಾರಿಕೆಯಿಂದ ಇಡೀ ಗ್ರಾಮವೇ ನಶಿಸಿ ಹೋಗುವಂತಹ ಸ್ಥಿತಿಗೆ ತಲುಪಿದೆ. ಕೂಡಲಿ ಶ್ರೀ ಕ್ಷೇತ್ರ ಶಂಕರಾಚಾರ್ಯರ ಸ್ಥಾಪಿತ ಮೂಲ ಶಾರದಾಂಬೆಯ ಮಹಾಸಂಸ್ಥಾನ, ಆರ್ಯ … Read more