ರಾತ್ರಿ ಬಂತು ಫೋನ್‌ ಕರೆ, ಕೊಟ್ಟಿಗೆಗೆ ದೌಡಾಯಿಸಿದಾಗ ಕಾದಿತ್ತು ಆಘಾತ, ಆಗಿದ್ದೇನು?

Shimoga-Police-Jeep

ಸೊರಬ: ಜಿರಲೆಕೊಪ್ಪ ಗ್ರಾಮದಲ್ಲಿ ಕೊಟ್ಟಿಗೆಗೆ ನುಗ್ಗಿದ ಕಳ್ಳರು ಸುಮಾರು ₹80,000 ಮೌಲ್ಯದ ಎರಡು ಜರ್ಸಿ ಹಸುಗಳನ್ನು (Jersey cows) ಅಪಹರಿಸಿದ್ದಾರೆ. ಜಿರಲೆಕೊಪ್ಪ ಲೋಕೇಶ್ ಕುಮಾರ್ ಎಂಬುವವರು ರಾತ್ರಿ ತಮ್ಮ ಹಸುಗಳನ್ನು ಕೊಟ್ಟಿಗೆಯಲ್ಲಿ ಕಟ್ಟಿ ಮನೆಗೆ ತೆರಳಿದ್ದರು. ಗದ್ದೆ ಕಾಯುತ್ತಿದ್ದ ವ್ಯಕ್ತಿಯೊಬ್ಬರು ಲೋಕೇಶ್ ಅವರ ತಂದೆ ಕೃಷ್ಣಮೂರ್ತಿಯವರಿಗೆ ಫೋನ್ ಮಾಡಿ, ನಿಮ್ಮ ಗದ್ದೆಯ ಕಡೆಯಿಂದ ಅಶೋಕ್ ಲೈಲ್ಯಾಂಡ್ ವಾಹನವೊಂದು ಅತಿ ವೇಗವಾಗಿ ಹೋಗುತ್ತಿದೆ, ಯಾಕೋ ಅನುಮಾನ ಬರುತ್ತಿದೆ ಎಂದು ತಿಳಿಸಿದ್ದಾರೆ. ತಕ್ಷಣ ಲೋಕೇಶ್ ಮತ್ತು ಅವರ ತಂದೆ ಕೊಟ್ಟಿಗೆಗೆ … Read more

ಕಾರು, ಬೈಕ್‌ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಗೆ ನೆರವಾದ ಶಿವಮೊಗ್ಗ ಜಿಲ್ಲಾಧಿಕಾರಿ, ಆಗಿದ್ದೇನು?

Shimoga-DC-Prabhulinga-Kavalikatti-helps-a-injured-in-Soraba

ಸೊರಬ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿಯವರು ಇಂದು ಸೊರಬ ತಾಲೂಕಿನ ವಿವಿಧೆಡೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು. ಈ ನಡುವೆ, ಮಾರ್ಗಮಧ್ಯೆ ಸಂಭವಿಸಿದ ರಸ್ತೆ ಅಪಘಾತದ ಸಂತ್ರಸ್ತರ (victim) ನೆರವಿಗೆ ನಿಲ್ಲುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಗಾಯಾಳುಗಳಿಗೆ ನೆರವು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸಾಗರದಿಂದ ಸೊರಬಕ್ಕೆ ತೆರಳುತ್ತಿದ್ದಾಗ ಮಾರ್ಗಮಧ್ಯೆ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿತ್ತು. ಇದನ್ನು ಗಮನಿಸಿದ ಕೂಡಲೇ ತಮ್ಮ ವಾಹನವನ್ನು ನಿಲ್ಲಿಸಿದ ಅವರು, ಗಾಯಗೊಂಡ ವ್ಯಕ್ತಿಯನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲು ಅಗತ್ಯ ವ್ಯವಸ್ಥೆ … Read more

ಆನಂದಪುರ, ಆನವಟ್ಟಿಯಲ್ಲಿ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

power cut mescom ELECTRICITY

ಆನಂದಪುರಂ: ಸಮೀಪದ ಮಲಂದೂರಿ ನಲ್ಲಿನ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಪ್ರಯುಕ್ತ ಫೆ.3ರಂದು ಬೆ.10 ರಿಂದ ಸಂಜೆ 6ರವರೆಗೆ ಈ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ (power cut) ಉಂಟಾಗಲಿದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ಕೋರಲಾಗಿದೆ. ಆನವಟ್ಟಿಯಲ್ಲಿ ಕರೆಂಟ್‌ ಇರಲ್ಲ ಆನವಟ್ಟಿ: ಕೋಟಿಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಿನ್ನೆಲೆಯಲ್ಲಿ ಫೆ.3ರಂದು ಬೆಳಗ್ಗೆ 10ರಿಂದ ಸಂಜೆ 6ರ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. … Read more

ಟ್ರ್ಯಾಕ್ಟರ್‌ಗೆ ಡಿಕ್ಕಿ, ಬೈಕ್‌ ಸವಾರ ಸಾವು, ಹೇಗಾಯ್ತು ಘಟನೆ?

soraba anavatti graphics

ಆನವಟ್ಟಿ: ಇಲ್ಲಿನ ತಲ್ಲೂರು ಪೆಟ್ರೋಲ್ ಬಂಕ್ ಹತ್ತಿರ ಹೆದ್ದಾರಿಯಲ್ಲಿ ನಾಟಾ ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗೆ (Tractor) ಬೈಕ್ ಡಿಕ್ಕಿಯಾಗಿ, ಬೈಕ್ ಸವಾರರೊಬ್ಬರು ಮೃತಪಟ್ಟಿದ್ದಾರೆ. ಆನವಟ್ಟಿಯ ನೆಹರೂ ನಗರದ ನಿವಾಸಿ ರಮೇಶ್ (30) ಮೃತರು. ಟ್ರ್ಯಾಕ್ಟ‌ರ್ ಚಾಲಕ ಬ್ರೇಕ್ ಹಾಕಿದ್ದರಿಂದ ಹಿಂಬದಿಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನವು ಅದಕ್ಕೆ ಡಿಕ್ಕಿ ಹೊಡೆದಿದೆ. ಟ್ರ್ಯಾಕ್ಟರ್‌ಗೆ ಯಾವುದೇ ರಿಪ್ಲೆಕ್ಟರ್‌ಗಳನ್ನು ಬಳಸದೇ ಇರುವುದು ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಧಗಧಗ ಹೊತ್ತಿ ಉರಿದ ಬಟ್ಟೆ ಅಂಗಡಿ, … Read more

ಫೋನ್‌‌ ಕರೆ, ಶಿವಮೊಗ್ಗದಿಂದ ವ್ಯಕ್ತಿ ದೌಡು, ಆನವಟ್ಟಿ ಮನೆ ಬಳಿ ಕಾದಿತ್ತು ಶಾಕ್

soraba anavatti graphics

ಸೊರಬ: ಆನವಟ್ಟಿಯ ದಾನಮ್ಮ ಬಡಾವಣೆಯಲ್ಲಿ ಮನೆಯೊಂದರ ಬಾಗಿಲಿನ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣ ಕಳ್ಳತನ (House burglary) ಮಾಡಲಾಗಿದೆ. ಹೆಚ್.ಜಿ. ಮಂಜುನಾಥ್ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಮಂಜುನಾಥ್ ಅವರು ತಮ್ಮ ಪತ್ನಿಯ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ಹೋಗಿದ್ದ ಸಮಯ ಕೃತ್ಯ ನಡೆದಿದೆ. ನೆರೆಹೊರೆಯವರು ಕರೆ ಮಾಡಿ ಮನೆಯ ಮುಂಭಾಗದ ಬಾಗಿಲು ತೆರೆದಿರುವ ಬಗ್ಗೆ ತಿಳಿಸಿದ್ದರು. ತಕ್ಷಣ ಮಂಜುನಾಥ್ ಅವರು ಶಿವಮೊಗ್ಗದಿಂದ ವಾಪಸ್ ಬಂದು ನೋಡಿದಾಗ, ಕಳ್ಳರು ಮನೆಯ ಬಾಗಿಲು … Read more

ಆನವಟ್ಟಿ ಪೊಲೀಸರ ಕಾರ್ಯಾಚರಣೆ ಪಿಕಪ್‌ ವಾಹನ ವಶಕ್ಕೆ, ಡ್ರೈವರ್‌ ಅರೆಸ್ಟ್‌, ಕಾರಣವೇನು?

soraba anavatti graphics

ಸೊರಬ: ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪಿಕ್‌ಅಪ್ ವಾಹನವೊಂದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಆನವಟ್ಟಿ ಪಟ್ಟಣದಲ್ಲಿ ಪೊಲೀಸರು ಕಾರ್ಯಾಚರಣೆ (Police Raid) ನಡೆಸಿ ವಾಹವನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ » ರಸ್ತೆಯಲ್ಲಿ ದಿಢೀರ್‌ ಎದುರಿಗೆ ಬಂದ ಮುಸುಕುಧಾರಿ, ಖಾರದ ಪುಡಿ ಎರಚಿ, ಗೃಹಿಣಿ ತಲೆಗೆ ರಾಡ್‌ನಿಂದ ಹೊಡೆತ ಮಹೀಂದ್ರಾ ಮ್ಯಾಕ್ಸ್ ಗೂಡ್ಸ್ ವಾಹನದಲ್ಲಿ ಆರು ಹಸುಗಳನ್ನು ಕುತ್ತಿಗೆ ಹಾಗೂ ಕಾಲುಗಳನ್ನು ಕಟ್ಟಿ ತುಂಬಲಾಗಿತ್ತು. ಈ ಸಂಬಂಧ ವಾಹನದ ಚಾಲಕ ಜಟ್ಟೆಪ್ಪ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. … Read more

ಸೊರಬ, ಹೊಸನಗರದ ವಿವಿಧ ಕಾರ್ಯಕ್ರಮಗಳಲ್ಲಿ ನಾಳೆ ಸಚಿವ ಮಧು ಬಂಗಾರಪ್ಪ ಭಾಗಿ

270925 Minister Madhu Bangarappa speaks to media in shimoga

ಶಿವಮೊಗ್ಗ: ಸಚಿವ (Minister) ಮಧು ಬಂಗಾರಪ್ಪ ಅವರು ಡಿಸೆಂಬರ್‌ 26ರಂದು ಸೊರಬ ಮತ್ತು ಹೊಸನಗರ ಪ್ರವಾಸ ಕೈಗೊಂಡಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಂಭ್ರಮದ ಕ್ರಿಸ್‌ಮಸ್‌, ಎಲ್ಲೆಲ್ಲಿ ಹೇಗಿತ್ತು ಆಚರಣೆ? ಬೆಳಗ್ಗೆ 8.30ಕ್ಕೆ ಸೊರಬದ ಬಂಗಾರಧಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಸ್‌.ಬಂಗಾರಪ್ಪ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 8.45ಕ್ಕೆ ಸೊರಬ – ಎಡ್ರಬೈಲು ಮಾರ್ಗದ ಕೆಎಸ್‌ಆರ್‌ಟಿಸಿ ಬಸ್‌ಗೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 11ಕ್ಕೆ ಹೊಸನಗರದ ಈಡಿಗರ ಸಮುದಾಯ ಭವನದ ಉದ್ಘಾಟನೆ, ಬಾಲಕಿಯರ ವಿದ್ಯಾರ್ಥಿ … Read more

ಕೆರೆಗೆ ಹಾರಿದ ಕಾರು, ಓರ್ವ ಸಾವು, ಮತ್ತೊಬ್ಬ ನಾಪತ್ತೆ, ಎಲ್ಲಿ, ಹೇಗಾಯ್ತು ಘಟನೆ?

car-plunge-to-lake-in-anavatti.

ಸೊರಬ: ಚಾಲಕನ ನಿಯಂತ್ರಣ ತಪ್ಪಿದ ಕಾರು (car plunge) ಕೆರೆಗೆ ಉರುಳಿದ್ದು ಓರ್ವ ಸಾವನ್ನಪ್ಪಿದ್ದು, ಮತ್ತೊಬ್ಬ ನಾಪತ್ತೆಯಾಗಿದ್ದಾರೆ. ಅದೃಷ್ಟವಶಾತ್‌ ಇಬ್ಬರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಸೊರಬ ತಾಲೂಕು ಆನವಟ್ಟಿ ಸಮೀಪದ ಕನೆಕೊಪ್ಪ ಹೊಸೂರು ತಿರುವಿನಲ್ಲಿ ಇಂದು ಬೆಳಗಿನ ಜಾವ ಘಟನೆ ಸಂಭವಿಸಿದೆ. ಪುನೇದಹಳ್ಳಿಯ ನವೀನ್‌ ಮೃತಪಟ್ಟಿದ್ದಾರೆ. ರಾಮಚಂದ್ರ ಎಂಬುವವರು ನಾಪತೆಯಾಗಿದ್ದಾರೆ. ಅವರಿಗಾಗಿ ಕೆರೆಯಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಹೇಗಾಯ್ತು ಘಟನೆ? ಇವತ್ತು ಬೆಳಗಿನ ಜಾವ ನವೀನ್‌, ರಾಮಚಂದ್ರ, ರುದ್ರೇಶ್‌ ಮತ್ತು ಮಂಜುನಾಥ್‌ ಎಂಬುವವರು ಶಿಕಾರಿಪುರದಿಂದ ಆನವಟ್ಟಿಗೆ ತೆರಳುತ್ತಿದ್ದರು. ಇವರು … Read more

ವಿದ್ಯುತ್‌ ಗ್ರಿಡ್‌ನಿಂದ ಹಾರಿದ ಕಿಡಿಗೆ ಜಮೀನಿನಲ್ಲಿದ್ದ ಜೋಳ ಸಂಪೂರ್ಣ ಭಸ್ಮ

jower-burnt-due-to-a-spark-from-electric-grid.

ಆನವಟ್ಟಿ: ವಿದ್ಯುತ್‌ ಗ್ರಿಡ್‌ನಲ್ಲಿ (power grid) ಶಾರ್ಟ್‌ ಸರ್ಕಿಟ್‌ ಉಂಟಾಗಿ, ಪಕ್ಕದ ಜಮೀನಿನಲ್ಲಿ ಒಕ್ಕಲು ಮಾಡಿದ್ದ ನಾಲ್ಕು ಎಕರೆ ಜೋಳ ಸುಟ್ಟು ಕರಕಲಾಗಿದೆ. ಸೊರಬ ತಾಲೂಕು ಅನವಟ್ಟಿ ಸಮೀಪದ ಕೋಟಿಪುರ ಗ್ರಾಮದಲ್ಲಿರುವ ಘಟನೆ ಸಂಭವಿಸಿದೆ. ಗ್ರಾಮಸ್ಥರೆಲ್ಲ ಸೇರಿ ಬೆಂಕಿ ಆರಿಸಲು ಪ್ರಯತ್ನಿಸಿದರು. ಆದರೆ ಜೋಳ ಸಂಪೂರ್ಣ ಸುಟ್ಟು ಕರಕಲಾಗಿದೆ ಎಂದು ತಿಳಿದು ಬಂದಿದೆ. ಕೋಟಿಪುರ ತಾಂಡಾದ ಕೃಷಿಕ ಪೀರ್ಯಾನಾಯ್ಕ ಎಂಬುವವರಿಗೆ ಸೇರಿದ ನಾಲ್ಕು ಎಕರೆಯಲ್ಲಿ ಬೆಳೆದಿದ್ದ ಜೋಳ ಬೆಂಕಿಗೆ ಅಹುತಿಯಾಗಿದೆ. ಮೆಸ್ಕಾಂ ಅಧಿಕಾರಿಗಳು ಸೂಕ್ತ ಪರಿಹಾರ ನೀಡಬೇಕು … Read more

ಚಂದ್ರಗುತ್ತಿ ದೇಗುಲದಲ್ಲಿ ಒಂದು ತಿಂಗಳು ವಿವಿಧ ಪೂಜೆ

Chandragutti-Temple-Soraba.

ಚಂದ್ರಗುತ್ತಿ: ಶ್ರೀ ರೇಣುಕಾಂಬಾ ದೇವಸ್ಥಾನದಲ್ಲಿ ಧನುರ್ಮಾಸದ (Dhanurmasa) ಪೂಜೆ ಅಂಗವಾಗಿ ಡಿ.16ರಿಂದ ಮಕರ ಸಂಕ್ರಮಣದವರೆಗೆ ಒಂದು ತಿಂಗಳು ವಿವಿಧ ಧಾರ್ಮಿಕ ಪೂಜಾ ಕಾರ್ಯಗಳು ಜರುಗಲಿವೆ. ದೇವಿಗೆ ಪ್ರತಿದಿನ ಬೆಳಿಗ್ಗೆ 6.30ರಿಂದ ವಿಶೇಷ ಪೂಜೆ, ಮಹಾಮಂಗಳಾರತಿ ನಡೆಯಲಿವೆ. ಇದನ್ನು ದೇವಸ್ಥಾನದ ಪ್ರಧಾನ ಅರ್ಚಕರು ನೆರವೇರಿಸುವರು ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಮೀಳಾ ಕುಮಾರಿ ತಿಳಿಸಿದ್ದಾರೆ. ಇದನ್ನೂ ಓದಿ » ಸಾಗರ ಬಂದ್‌, ದಿನಾಂಕ ಪ್ರಕಟಿಸಿದ ಹೋರಾಟ ಸಮಿತಿ, ಬಂದ್‌ಗೆ ಕಾರಣವೇನು?