SHIVAMOGGA LIVE | 2 JUNE 2023
SHIMOGA : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಐದು ಗ್ಯಾರಂಟಿಗಳನ್ನು (Guarantee Scheme) ಜಾರಿಗೊಳಿಸಿದ್ದಾರೆ. ಕೊಟ್ಟ ಮಾತಿನಂತೆ ಸರ್ಕಾರ ನಡೆದುಕೊಂಡಿದೆ ಎಂದು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಎನ್ಎಸ್ಯುಐ ಸಂಘಟನೆಗಳ ನೇತೃತ್ವದಲ್ಲಿ ಸಂಭ್ರಮಾಚಾರಣೆ ಮಾಡಲಾಯಿತು.
ಇದನ್ನೂ ಓದಿ – ಇನ್ಮುಂದೆ ಪೊಲೀಸರ ಜೊತೆಗೆ ಯುವಕರಿಂದ ಬೀಟ್, ಶಿವಮೊಗ್ಗ ಪೊಲೀಸರಿಂದ ವಿಭಿನ್ನ ಪ್ರಯೋಗ
ಶಿವಮೊಗ್ಗದ ಬಸ್ ನಿಲ್ದಾಣದ ಮುಂದೆ ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ಹಂಚಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಪ್ರಮುಖರಾದ ರಮೇಶ್ ಹೆಗ್ಡೆ, ಎಸ್.ಪಿ.ದಿನೇಶ್, ಚೇತನ್, ಮಧು ಸೂದನ್ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತಿದ್ದರು.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ