SHIMOGA : ಫೇಸ್ಬುಕ್ನಲ್ಲಿ (Facebook) ಮಹಿಳೆಗೆ ಅವಹೇಳನ ಮಾಡಿದ ಆರೋಪ ಸಂಬಂಧ ಪ್ರಕರಣ ದಾಖಲಾಗಿರುವ ಹಿನ್ನೆಲೆ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ (Chakravarthi Sulibele) ವಿನೋಬನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದರು. ಈ ವೇಳೆ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಠಾಣೆ ಮುಂದೆ ಜಮಾಯಿಸಿ ಘೋಷಣೆ ಕೂಗಿದರು.
ಬುಧವಾರ ರಾತ್ರಿ ಶಾಸಕ ಎಸ್.ಎನ್.ಚನ್ನಬಸಪ್ಪ ಅವರೊಂದಿಗೆ ಚಕ್ರವರ್ತಿ ಸೂಲಿಬೆಲೆ ವಿನೋಬನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದರು. ಕಾಂಗ್ರೆಸ್ ಕಾರ್ಯಕರ್ತೆ ಸೌಗಂಧಿಕ ದಾಖಲಿಸಿರುವ ದೂರಿನ ಸಂಬಂಧ ಹೇಳಿಕೆ ನೀಡಿದರು.
ಠಾಣೆ ಮುಂದೆ ಕಾರ್ಯಕರ್ತರ ದಂಡು
ಠಾಣೆಗೆ ತೆರಳಿದ ಚಕ್ರವರ್ತಿ ಸೂಲಿಬೆಲೆ ಅವರೊಂದಿಗೆ ವಿವಿಧ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಆಗಮಿಸಿದ್ದರು. ಠಾಣೆ ಹೊರಗೆ ಜಮಾಯಿಸಿದ ಕಾರ್ಯಕರ್ತರು ರಾಜ್ಯ ಸರ್ಕಾರ, ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸುಳ್ಳು ದೂರು ದಾಖಲು ಮಾಡಿರುವುದಾಗಿ ಆರೋಪಿಸಿ ಘೋಷಣೆ ಕೂಗಿದರು.
ಮಾಧ್ಯಮಗಳ ಜೊತೆ ಮಾತಾಡಿದ ಚಕ್ರವರ್ತಿ ಸೂಲಿಬೆಲೆ, ಇಂತಹ ಬೆದರಿಕೆಗಳಿಗೆ ಜಗ್ಗುವುದು ಇಲ್ಲ. ಬಗ್ಗುವುದು ಇಲ್ಲ. ಇದು ದೂರು ದಾಖಲಿಸಿಕೊಳ್ಳುವ ಸಂಗತಿಯೇ ಅಲ್ಲ. ಪ್ರಿಯಾಂಕ್ ಖರ್ಗೆ ಅವರು ಠಾಣೆ ಮೆಟ್ಟಿಲು ಹತ್ತಿಸುತ್ತೇನೆ ಎಂದಿದ್ದರು. ಸುಳ್ಳು ದೂರು ಕೊಡಿಸಿ ಠಾಣೆ ಮೆಟ್ಟಿಲು ಹತ್ತಿಸಿದ್ದಾರೆ. ದೂರಿಗೆ ನನ್ನ ಹೇಳಿಕೆಯನ್ನು ದಾಖಲಿಸಿದ್ದೇನೆ ಎಂದರು.
ಶಾಸಕ ಎಸ್.ಎನ್.ಚನ್ನಬಸಪ್ಪ ಮಾತನಾಡಿ, ಚಕ್ರವರ್ತಿ ಸೂಲಿಬೆಲೆ ಅವರಿಗೆ ನೊಟೀಸ್ ಜಾರಿ ಮಾಡಿದ್ದರು. ಈ ಹಿನ್ನೆಲೆ ಠಾಣೆಗೆ ಭೇಟಿ ನೀಡಿ ಹೇಳಿಕೆ ನೀಡಿದ್ದಾರೆ. ಇದರಿಂದ ರಾಷ್ಟ್ರಭಕ್ತ ಚಕ್ರವರ್ತಿ ಸೂಲಿಬೆಲೆ ಅವರಿಗೆ ಯಾವುದೆ ಅಪಮಾನವಾಗಿಲ್ಲ. ಅದರೆ ರಾಜ್ಯ ಸರ್ಕಾರಕ್ಕೆ ಅಪಮಾನವಾಗಿದೆ. ಉರಿ ಎಂಬ ಪದವನ್ನು ಇಷ್ಟು ದೊಡ್ಡ ವಿಷಯ ಮಾಡಿಕೊಂಡಿದ್ದಾರೆ. ಕಾಂಗ್ರೆಸಿಗರು ಉರ್ಕೊಳ್ಳೋದು ಬೇಡ. ಇದು ಆಡು ಭಾಷೆ ಎಂದರು.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
ರಾತ್ರಿ ವಿನೋಬನಗರ ಪೊಲೀಸ್ ಠಾಣೆಗೆ ಚಕ್ರವರ್ತಿ ಸೂಲಿಬೆಲೆ ಹಾಜರ್, ಕಾಂಗ್ರೆಸ್ ವಿರುದ್ಧ ಕಾರ್ಯಕರ್ತರು ಗರಂ
SHIVAMOGGA LIVE NEWS | 31 AUGUST 2023
SHIMOGA : ಫೇಸ್ಬುಕ್ನಲ್ಲಿ (Facebook) ಮಹಿಳೆಗೆ ಅವಹೇಳನ ಮಾಡಿದ ಆರೋಪ ಸಂಬಂಧ ಪ್ರಕರಣ ದಾಖಲಾಗಿರುವ ಹಿನ್ನೆಲೆ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ (Chakravarthi Sulibele) ವಿನೋಬನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದರು. ಈ ವೇಳೆ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಠಾಣೆ ಮುಂದೆ ಜಮಾಯಿಸಿ ಘೋಷಣೆ ಕೂಗಿದರು.
ಬುಧವಾರ ರಾತ್ರಿ ಶಾಸಕ ಎಸ್.ಎನ್.ಚನ್ನಬಸಪ್ಪ ಅವರೊಂದಿಗೆ ಚಕ್ರವರ್ತಿ ಸೂಲಿಬೆಲೆ ವಿನೋಬನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದರು. ಕಾಂಗ್ರೆಸ್ ಕಾರ್ಯಕರ್ತೆ ಸೌಗಂಧಿಕ ದಾಖಲಿಸಿರುವ ದೂರಿನ ಸಂಬಂಧ ಹೇಳಿಕೆ ನೀಡಿದರು.
ಠಾಣೆ ಮುಂದೆ ಕಾರ್ಯಕರ್ತರ ದಂಡು
ಠಾಣೆಗೆ ತೆರಳಿದ ಚಕ್ರವರ್ತಿ ಸೂಲಿಬೆಲೆ ಅವರೊಂದಿಗೆ ವಿವಿಧ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಆಗಮಿಸಿದ್ದರು. ಠಾಣೆ ಹೊರಗೆ ಜಮಾಯಿಸಿದ ಕಾರ್ಯಕರ್ತರು ರಾಜ್ಯ ಸರ್ಕಾರ, ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸುಳ್ಳು ದೂರು ದಾಖಲು ಮಾಡಿರುವುದಾಗಿ ಆರೋಪಿಸಿ ಘೋಷಣೆ ಕೂಗಿದರು.
ಇದನ್ನೂ ಓದಿ – ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದಲ್ಲಿ ಮಹಿಳೆಯಿಂದ ಠಾಣೆಗೆ ದೂರು | 3 ಫಟಾಫಟ್ ನ್ಯೂಸ್
ಯಾರೆಲ್ಲ ಏನೇನು ಹೇಳಿದರು?
ಮಾಧ್ಯಮಗಳ ಜೊತೆ ಮಾತಾಡಿದ ಚಕ್ರವರ್ತಿ ಸೂಲಿಬೆಲೆ, ಇಂತಹ ಬೆದರಿಕೆಗಳಿಗೆ ಜಗ್ಗುವುದು ಇಲ್ಲ. ಬಗ್ಗುವುದು ಇಲ್ಲ. ಇದು ದೂರು ದಾಖಲಿಸಿಕೊಳ್ಳುವ ಸಂಗತಿಯೇ ಅಲ್ಲ. ಪ್ರಿಯಾಂಕ್ ಖರ್ಗೆ ಅವರು ಠಾಣೆ ಮೆಟ್ಟಿಲು ಹತ್ತಿಸುತ್ತೇನೆ ಎಂದಿದ್ದರು. ಸುಳ್ಳು ದೂರು ಕೊಡಿಸಿ ಠಾಣೆ ಮೆಟ್ಟಿಲು ಹತ್ತಿಸಿದ್ದಾರೆ. ದೂರಿಗೆ ನನ್ನ ಹೇಳಿಕೆಯನ್ನು ದಾಖಲಿಸಿದ್ದೇನೆ ಎಂದರು.
ಶಾಸಕ ಎಸ್.ಎನ್.ಚನ್ನಬಸಪ್ಪ ಮಾತನಾಡಿ, ಚಕ್ರವರ್ತಿ ಸೂಲಿಬೆಲೆ ಅವರಿಗೆ ನೊಟೀಸ್ ಜಾರಿ ಮಾಡಿದ್ದರು. ಈ ಹಿನ್ನೆಲೆ ಠಾಣೆಗೆ ಭೇಟಿ ನೀಡಿ ಹೇಳಿಕೆ ನೀಡಿದ್ದಾರೆ. ಇದರಿಂದ ರಾಷ್ಟ್ರಭಕ್ತ ಚಕ್ರವರ್ತಿ ಸೂಲಿಬೆಲೆ ಅವರಿಗೆ ಯಾವುದೆ ಅಪಮಾನವಾಗಿಲ್ಲ. ಅದರೆ ರಾಜ್ಯ ಸರ್ಕಾರಕ್ಕೆ ಅಪಮಾನವಾಗಿದೆ. ಉರಿ ಎಂಬ ಪದವನ್ನು ಇಷ್ಟು ದೊಡ್ಡ ವಿಷಯ ಮಾಡಿಕೊಂಡಿದ್ದಾರೆ. ಕಾಂಗ್ರೆಸಿಗರು ಉರ್ಕೊಳ್ಳೋದು ಬೇಡ. ಇದು ಆಡು ಭಾಷೆ ಎಂದರು.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಯ್ತು? – TOP 10 NEWS | ಓದಲು ಇಲ್ಲಿ ಕ್ಲಿಕ್ ಮಾಡಿ
ಜಾಹೀರಾತು
ಶಿವಮೊಗ್ಗದಲ್ಲಿ ಮನೆ ಮಾರಾಟಕ್ಕಿದೆ
ಎರಡು ವರ್ಷದ ಮನೆ ಮಾರಾಟಕ್ಕಿದೆ. GROUND FLOOR 2BHK, 1st FLOOR 1 BHK (ಎರಡು ಮನೆಗಳು), 2nd FLOOR BACHELOR ROOM WITH ATTACHED BATHROOM. ವಿಳಾಸ : ತರಳಬಾಳು ಲೇಔಟ್ ಪಕ್ಕ, ತಾವರೆಚಟ್ನಹಳ್ಳಿ, ಪೇಸ್ ಕಾಲೇಜು ಹತ್ತಿರ. ಹೊನ್ನಾಳಿ ರಸ್ತೆ, ಶಿವಮೊಗ್ಗ. ಹೆಚ್ಚಿನ ಮಾಹಿತಿಗೆ : 9972194422