ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JANUARY 2021
ಹೂಣಸೋಡು ಕಲ್ಲು ಗಣಿಗಾರಿಕೆಯಲ್ಲಿ ಸಂಭವಿದ ಭಾರಿ ಸ್ಫೋಟದಿಂದ ಹಲವು ಕಾರ್ಮಿಕರು ಮೃತಪಟ್ಟಿರುವ ಶಂಕೆ ಇದೆ. ಇದರಿಂದ ಸುತ್ತಮುತ್ತಲ ಗ್ರಾಮದಲ್ಲಿ ಅಘಾತ ಉಂಟಾಗಿದೆ. ಈ ನಡುವೆ ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ನೀಡುವ ಸಾದ್ಯತೆ ಇದೆ.
ಇದನ್ನೂ ಓದಿ | ಶಿವಮೊಗ್ಗದ ಹುಣಸೋಡು ಸ್ಫೋಟ, ಪ್ರಧಾನಿ ನರೇಂದ್ರ ಮೋದಿ ಟ್ವೀಟ್
ಮಧ್ಯಾಹ್ನದ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸ್ಥಳಕ್ಕೆ ಭೇಟಿ ನೀಡುತ್ತಾರೆ ಎಂದು ಹೇಳಲಾಗುತ್ತಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ರಾತ್ರಿಯಿಂದಲೇ ಜಿಲ್ಲಾಧಿಕಾರಿ ಅವರಿಂದ ಸಿಎಂ ಮಾಹಿತಿ ಪಡೆದಿದ್ದಾರೆ.
ಕಾರ್ಯಾಚರಣೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದ್ದಾರೆ.
ಇದನ್ನೂ ಓದಿ | BREAKING NEWS | ಶಿವಮೊಗ್ಗದ ಕ್ವಾರಿಯಲ್ಲಿ ಭಾರೀ ಸ್ಫೋಟ, ಕಾರ್ಮಿಕರ ದೇಹ ಛಿದ್ರ ಛಿದ್ರ
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]