ಶಿವಮೊಗ್ಗ ಲೈವ್.ಕಾಂ | SHIMOGA NEWS | 23 JANUARY 2021
ಕಲ್ಲಗಂಗೂರಿನ ಕ್ವಾರಿಯಲ್ಲಿ ಸ್ಪೋಟ ಸಂಭವಿಸಿದ ಸ್ಥಳಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇವತ್ತು ಭೇಟಿ ನೀಡಿದ್ದರು. ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸ್ಪೋಟದ ಕುರಿತು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸಿಎಂ ಯಡಿಯೂರಪ್ಪ ಅವರಿಗೆ ಮಾಹಿತಿ ನೀಡಿದರು. ಬಳಿಕ ತನಿಖೆ ಕುರಿತು ಸಿಎಂ ವಿಚಾರಿಸಿದರು.
ಕ್ವಾರಿಗಳಿಗೆ ಅನುಮತಿ ಇಲ್ಲ
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಸ್ಪೋಟ ಸಂಬಂಧ ತನಿಖೆ ನಡೆಯುತ್ತಿದೆ. ಈ ಭಾಗದಲ್ಲಿ ಕ್ರಷರ್ಗಳಿಗೆ ಮಾತ್ರ ಅನುಮತಿ ಇದೆ. ಆದರೆ ಕ್ವಾರಿಗಳಿಗೆ ಅನುಮತಿ ಇಲ್ಲ ಎಂದು ತಿಳಿಸಿದರು.
ಇನ್ನು, ನಿಗೂಢ ಶಬ್ದಕ್ಕೂ, ಕ್ವಾರಿ ಸ್ಪೋಟಕ್ಕೂ ಸಂಬಂಧ ಇದೆಯೋ ಇಲ್ಲವೋ ಅನ್ನುವುದು ತನಿಖೆಯ ಬಳಿಕ ಸ್ಪಷ್ಟವಾಗಲಿದೆ ಎಂದರು.
ಸಿಎಂ ಭೇಟಿ, ಹೇಳಿಕೆ ವಿಡಿಯೋ ರಿಪೋರ್ಟ್ ಇಲ್ಲಿದೆ
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]