ಶಿವಮೊಗ್ಗ ಲೈವ್.ಕಾಂ | SHIMOGA NEWS | 1 MARCH 2021
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇವತ್ತು ಶಿವಮೊಗ್ಗದ ಪ್ರಮುಖ ದೇಗುಲಗಳಿಗೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು.
ಕೋಟೆ ಶ್ರೀ ಸೀತಾರಾಮಾಂಜನೇಯ ದೇಗುಲಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ದೇವರ ಆಶೀರ್ವಾದ ಪಡೆದರು.
ಬಳಿಕ ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನಕ್ಕೂ ಯಡಿಯೂರಪ್ಪ ಭೇಟಿ ನೀಡಿದರು. ಮಾರಿ ಗದ್ದುಗೆಗೆ ಮಂಗಳಾರತಿ ಬೆಳಗಿ, ದೇವಿಯ ಆಶೀರ್ವಾದ ಪಡೆದರು.
ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ವೈಶಾಲಿ, ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಪುರುಷೋತ್ತಮ್, ಕುವೆಂಪು ವಿವಿ ಸಿಂಡಿಕೇಟ್ ಸದಸ್ಯ ಬಳ್ಳೆಕೆರೆ ಸಂತೋಷ್ ಸೇರಿದಂತೆ ಹಲವರು ಈ ವೇಳೆ ಸಿಎಂ ಅವರೊಂದಿಗಿದ್ದರು.
ಇಲ್ಲಿದೆ ವಿಡಿಯೋ ರಿಪೋರ್ಟ್
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]