ಶಿವಮೊಗ್ಗ ಲೈವ್.ಕಾಂ | BHADRAVATHI NEWS | 17 FEBRUARY 2021
ಅಡಕೆ ಬೆಳೆಗಾರರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಯ ನೀಡಿದ್ದಾರೆ. ಬೆಳೆಗಾರರಿಗೆ ಯಾವುದೆ ಸಮಸ್ಯೆ ಆಗದಂತೆ ನೋಡಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ಮಾತನಾಡಿದ ಯಡಿಯೂರಪ್ಪ, ಅಡಕೆ ಬೆಳೆಗಾರರು ಆತಂಕ ಪಡುವ ಅಗತ್ಯವಿಲ್ಲ. ಉತ್ತಮ ಬೆಲೆ ಬರುವಂತೆ ಮಾಡುತ್ತೇವೆ ಎಂದರು.
ಅಡಕೆ ಬೆಳೆಗಾರರ ಹಿತ ಕಾಪಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಬದ್ಧವಾಗಿದೆ. ಅಡಕೆಗೆ ಉತ್ತಮ ಬೆಲೆ ಒದಗಿಸಲಾಗುತ್ತದೆ. ಅಡೆಕೆಯಿಂದ ಖಾಯಿಲೆಗಳು ಬರುತ್ತವೆ, ಅದು ವಿಷಕಾರಕ ಎಂದೆಲ್ಲ ಹೇಳಲಾಗುತ್ತಿದೆ. ಇದಕ್ಕೆಲ್ಲ ನಾವು ಆಸ್ಪದ ಕೊಡುವುದಲ್ಲ ಎಂದರು.
ಮಹಿಳೆಯರು ಸ್ವಾವಲಂಬಿಯಾಗಿ ಬದುಕಬೇಕು. ಇದಕ್ಕಾಗಿ ಈ ಬಾರಿ ಬಜೆಟ್ನಲ್ಲಿ ಒಳ್ಳೆಯ ಯೋಜನೆಗಳನ್ನು ತರುವ ಚಿಂತನೆ ಇದೆ. ಹಿಂದೆ ಇದ್ದ ಯೋಜನೆಗಳು ಮುಂದುವರೆಯಲಿವೆ. ಬಜೆಟ್ನಲ್ಲಿ ಯಾವುದೆ ಕೊರತೆ ಮಾಡುವುದಿಲ್ಲ ಎಂದು ಯಡಿಯೂರಪ್ಪ ತಿಳಿಸಿದರು.
ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ, ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.
ಸಭೆಗೂ ಮೊದಲು ಸನ್ಯಾಸಿ ಕೋಡುಮಗ್ಗೆ ಮತ್ತು ಹೊಳಲೂರು ಬಳಿ ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಉದ್ಘಾಟಿಸಿದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]