ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಅಕ್ಟೋಬರ್ 2020
ಸಿಗಂದೂರು ದೇವಸ್ಥಾನಕ್ಕೆ ಭಕ್ತರು ಕೊಡುವ ದೇಣಿಗೆ, ಚಿನ್ನಾಭರಣ ಯಾವುದು ಕೂಡ ದುರಪಯೋಗ ಆಗಬಾರದು ಎಂದು ತಡೆಯಲು ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
VIDEO REPORT
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಜಿಲ್ಲಾಧಿಕಾರಿ ಅವರನ್ನು ದೇವಸ್ಥಾನಕ್ಕೆ ಕಳುಹಿಸಿ ವಾಸ್ತವ ಪರಿಸ್ಥಿತಿ ಅರಿತುಕೊಳ್ಳಲು ತಿಳಿಸಿದ್ದೇನೆ ಎಂದರು.
ಈಗಾಗಲೇ ಸಮಿತಿ ರಚಿಸಲಾಗಿದೆ. ಕಾಣಿಕೆ ಹಣ, ಚಿನ್ನಾಭರಣ, ದೇವಸ್ಥಾನದ ಆದಾಯ ದುರುಪಯೋಗ ಆಗದಂತೆ ನೋಡಿಕೊಂಡು, ಭಕ್ತರ ನಂಬಿಕೆಗೆ ಧಕ್ಕೆ ಆಗದಂತೆ ನೋಡಕೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]