ಶಿವಮೊಗ್ಗ ಲೈವ್.ಕಾಂ | 02 ಏಪ್ರಿಲ್ 2019
ಸಚಿವ ಡಿ.ಕೆ.ಶಿವಕುಮಾರ್ ಅವರ ಭದ್ರಾವತಿಯ ಕಾರ್ಯಕ್ರಮದಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು, ಚುನಾವಣಾ ಆಯೋಗ ದೂರು ದಾಖಲಿಸಿದೆ.
ಭದ್ರಾವತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಆಯೋಜಿಸಲಾಗಿತ್ತು. ಸಭೆಗೆ ಬಂದಿದ್ದ ಕಾರ್ಯಕರ್ತರಿಗೆ ಉಪ್ಪಿಟ್ಟು, ಕೇಸರಿ ಬಾತ್ ಹಂಚಲಾಯಿತು. ಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದ್ದು, ARO ದೂರು ದಾಖಲಿಸಿದ್ದಾರೆ. ಈ ಸಂಬಂಧ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಚುನಾವಣಾ ಪ್ರಚಾರ ಸಭೆಗೆ ಆಗಮಿಸುವ ಕಾರ್ಯಕರ್ತರಿಗೆ ನೀರು, ಮಜ್ಜಿಗೆ ಹಂಚಬಹುದು. ಒಂದು ವೇಳೆ ಉಪಹಾರ ನೀಡುವುದಿದ್ದರೆ, ಆಯೋಗದಿಂದ ಅನುಮತಿ ಕಡ್ಡಾಯ. ಆದರೆ ಕಾಂಗ್ರೆಸ್ ಸಭೆಯಲ್ಲಿ ಅನುಮತಿ ಇಲ್ಲದೆ ಉಪಹಾರ ನೀಡಿದ್ದರಿಂದ, ದೂರು ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]