ಶಿವಮೊಗ್ಗ ಲೈವ್.ಕಾಂ | SHIMOGA NEWS | 17 APRIL 2021
ಕ್ರೈಸ್ತ ಧರ್ಮದ ಪರವಾಗಿ ಪ್ರಚಾರ ನಡೆಸಿದ ಸಿಆರ್ಪಿಎಫ್ ಮಹಿಳಾ ಸಿಬ್ಬಂದಿ ವಿರುದ್ಧ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಕಾರ್ಯದರ್ಶಿ ಸುರೇಶ್ ಬಾಬು ಶಿವಮೊಗ್ಗದ ಕೋಟೆ ಠಾಣೆಗೆ ದೂರು ನೀಡಿದ್ದಾರೆ.
ಮಸ್ಕಿ ವಿಧಾನಸಭೆ ಚುನಾವಣೆಯ ಬಂದೋಬಸ್ತ್ಗೆ ಸಿಆರ್ಪಿಎಫ್ನ ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕಾರು ತಪಾಸಣೆ ನೆಪದಲ್ಲಿ ಸಿಆರ್ಪಿಎಫ್ ಮಹಿಳಾ ಸಿಬ್ಬಂದಿಯೊಬ್ಬರು ಕ್ರೈಸ್ತ ಧರ್ಮದ ಪರವಾಗಿ ಪ್ರಚಾರ ಮಾಡಿದ್ದಾರೆ ಎಂದು ಮಾಜಿ ಶಾಸಕ ನಂದೀಶ್ ರೆಡ್ಡಿ ಆರೋಪಿಸಿ, ತಪಾಸಣಾ ಕೇಂದ್ರದ ಮುಂದೆ ಪ್ರತಿಭಟನೆ ನಡೆಸಿದ್ದರು.
ಸಿಆರ್ಪಿಎಫ್ ಮಹಿಳಾ ಸಿಬ್ಬಂದಿಯ ವಿರುದ್ಧ ಸಮರ್ಪಕವಾಗಿ ತನಿಖೆ ನಡೆಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ. ಈ ಸಂಬಂಧ ಸುರೇಶ್ ಬಾಬು ಅವರು ದೂರು ನೀಡಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]