ಶಿವಮೊಗ್ಗ ಲೈವ್.ಕಾಂ | SHIMOGA | 29 ಜನವರಿ 2020
ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಮೇಯರ್’ಗೆ ಆರಂಭದಲ್ಲೇ ಸಂಕಷ್ಟ ಎದುರಾಗಿದೆ. ಮೇಯರ್ ಆಗಿ ಸುವರ್ಣ ಶಂಕರ್ ಅವರ ಆಯ್ಕೆ ಕಾನೂನು ಬಾಹಿರ ಎಂದು ಆರೋಪಿಸಿ, ಕಾಂಗ್ರೆಸ್ ಪಕ್ಷ ಆರೋಪಿಸಿದೆ. ಅಲ್ಲದೆ, ಹೈಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದೆ.
ಸುವರ್ಣ ಶಂಕರ್ ಅವರು ಆದಾಯ ತೆರಿಗೆ ಪಾವತಿದಾರರಾಗಿದ್ದಾರೆ. ಹಾಗಿದ್ದೂ ಜಾತಿ ಪ್ರಮಾಣ ಪತ್ರ ಪಡೆದುಕೊಂಡು, ಮೇಯರ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಅವರ ಆಯ್ಕೆ ಕಾನೂನು ಬಾಹಿರವಾಗಿದ್ದು, ಇದನ್ನು ಹೈಕೋರ್ಟ್’ನಲ್ಲಿ ಪ್ರಶ್ನಿಸಲಾಗುತ್ತದೆ ಎಂದು ಕಾಂಗ್ರೆಸ್ ಪಕ್ಷದ ಕಾರ್ಪೊರೇಟರ್’ಗಳು ತಿಳಿಸಿದ್ದಾರೆ.
ಮೇಯರ್ ಆಯ್ಕೆ ಚುನಾವಣೆ ಆರಂಭವಾಗುತ್ತಿದ್ದಂತೆ, ಚುನಾವಣಾಧಿಕಾರಿಗೆ ಕಾಂಗ್ರೆಸ್ ಮೇಯರ್ ಅಭ್ಯರ್ಥಿ ಯಮುನಾ ರಂಗೇಗೌಡ ಮನವಿ ಸಲ್ಲಿಸಿದರು. ಬಿಜೆಪಿ ಅಭ್ಯರ್ಥಿ ಸುವರ್ಣ ಶಂಕರ್ ಅವರ ನಾಮಪತ್ರ ತಿರಸ್ಕರಿಸಬೇಕು ಎಂದು ಒತ್ತಾಯಿಸಿದರು.
ಈ ನಡುವೆ ಮೇಯರ್ ಆಯ್ಕೆಯು ನ್ಯಾಯಾಲಯದ ಅಂತಿಮ ಆದೇಶಕ್ಕೆ ಒಳಪಡುತ್ತದೆ ಎಂದು ಪ್ರಾದೇಶಿಕ ಆಯುಕ್ತ ಎನ್.ವಿ.ಪ್ರಸಾದ್ ಘೋಷಿಸಿದರು. ಮೇಯರ್ ಆಯ್ಕೆ ಪ್ರಕ್ರಿಯೆ ಮುಕ್ತಾಯದ ಬಳಿಕವು, ಕಾಂಗ್ರೆಸ್’ನ ಯಮುನಾ ರಂಗೇಗೌಡ, ಚುನಾವಣಾಧಿಕಾರಿಗೆ ತಮ್ಮ ಮನವಿ ಸಲ್ಲಿಸಿದರು.
ಶಿವಮೊಗ್ಗ ಲೈವ್.ಕಾಂ ಜೊತೆ ಮಾತನಾಡಿದ ಕಾಂಗ್ರೆಸ್ ವಿರೋಧ ಪಕ್ಷದ ನಾಯಕ ರಮೇಶ್ ಹೆಗ್ಡೆ, ಕಾನೂನು ಪ್ರಕಾರ ಸುವರ್ಣ ಶಂಕರ್ ಅವರು ಮೇಯರ್ ಆಗಿ ಆಯ್ಕೆಯಾಗಲು ಸಾಧ್ಯವಿಲ್ಲ. ನಮ್ಮ ಬಳಿ ದಾಖಲೆಗಳಿವೆ. ಈ ಕುರಿತು ಹೈಕೋರ್ಟ್’ನಲ್ಲಿ ಪ್ರಶ್ನೆ ಮಾಡುತ್ತೇವೆ. ಪಕ್ಷದಲ್ಲಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದರು.
- ಶಿವಮೊಗ್ಗ ಲೋಕಸಭೆ ಚುನಾವಣೆ, ಅಭ್ಯರ್ಥಿಗಳಿಗೆ ಸ್ವಂತ ವರದಿಗಾರರ ತಂಡ, ಕ್ಯಾಮರಾ ಟೀಮ್, ಏನಿವರ ಕೆಲಸ?
- ಅಡಿಕೆ ಧಾರಣೆ | 26 ಏಪ್ರಿಲ್ 2024 | ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
- ಶಿವಮೊಗ್ಗ ಶೇಷಾದ್ರಿಪುರಂದನಲ್ಲಿ ಮಟಮಟ ಮಧ್ಯಾಹ್ನ ಮನೆಯಿಂದ ಹೊರ ಬಂದ ಚಾಲಕನಿಗೆ ಕಾದಿತ್ತು ಆಘಾತ
- ಗೋಪಿ ಸರ್ಕಲ್ನಲ್ಲಿ ಪಂಜು ಹಿಡಿದು ವಿಜಯೇಂದ್ರ ವಿರುದ್ಧ ಆಕ್ರೋಶ, ಕ್ಷಮೆಗೆ ಒತ್ತಾಯ
- ಎಮ್ಮೆಹಟ್ಟಿ ಬಳಿ ಆಯತಪ್ಪಿ ರಸ್ತೆ ಪಕ್ಕದ ಕಾಲುವೆಗೆ ಬಿದ್ದ ಸವಾರ, ಶಿವಮೊಗ್ಗದಲ್ಲಿ ಸಾವು
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]