SHIVAMOGGA LIVE NEWS | 1 MARCH 2023
SHIMOGA : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿವಮೊಗ್ಗದಲ್ಲಿ ಸ್ಪರ್ಧಿಸಲಿ ಎಂದು ಸವಾಲು (Challenge) ಹಾಕಿದ್ದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಪ್ರತಿಸವಾಲು ಹಾಕಿದ್ದಾರೆ. ಸಿದ್ದರಾಮಯ್ಯ ಅವರು ಸ್ಪರ್ಧಿಸುವ ಕ್ಷೇತ್ರದಲ್ಲಿಯೇ ಅವರ ವಿರುದ್ಧ ಬಿಜೆಪಿಯಿಂದ ಈಶ್ವರಪ್ಪ ಸ್ಪರ್ಧೆ ಮಾಡಲು ಸಾಧ್ಯವಿದೆಯೇ ಎಂದು ಸವಾಲು (Challenge) ಹಾಕಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಅವರು, ಈಶ್ವರಪ್ಪ ಅವರ ವಿರುದ್ಧ ಸ್ಪರ್ಧೆಗೆ ಸಿದ್ದರಾಮಯ್ಯ ಅವರು ಬರಬೇಕಿಲ್ಲ. ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತ ನಿಂತು ಗೆಲುವು ಸಾಧಿಸುತ್ತಾರೆ. ಈ ಹಿಂದೆ ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತರ ಎದುರಲ್ಲೇ ಈಶ್ವರಪ್ಪ ಸೋತಿದ್ದಾರೆ ಎಂದರು.
ಮಹಾನಗರ ಪಾಲಿಕೆ ಸದಸ್ಯ ಹೆಚ್.ಸಿ.ಯೋಗೇಶ್ ಮಾತನಾಡಿ, ಈಶ್ವರಪ್ಪ ಅವರಿಗೆ ಮನೆಯೊಂದು ಮೂರು ಬಾಗಿಲು ಎಂಬಂತಾಗಿದೆ. ಮಗನಿಗೆ ಟಿಕೆಟ್ ಸಿಗಲಿದೆ ಎಂಬ ಕಾರಣಕ್ಕೆ ಈಶ್ವರಪ್ಪ ಅವರೆ ಟಿಕೆಟ್ ಗಾಗಿ ಸ್ಪರ್ಧೆಗೆ ಬಿದ್ದಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ 11 ಆಕಾಂಕ್ಷಿಗಳು ಒಟ್ಟಾಗಿದ್ದೇವೆ. ಯಾರಿಗೇ ಟಿಕೆಟ್ ಸಿಕ್ಕರೂ ಒಗ್ಗಟ್ಟಿನಿಂದಲೇ ಚುನಾವಣೆ ಎದುರಿಸುತ್ತೇವೆ ಎಂದರು.
ಇದನ್ನೂ ಓದಿ – ಮುಷ್ಕರದ ಎಫೆಕ್ಟ್, ಶಿವಮೊಗ್ಗದ ಸರ್ಕಾರಿ ಕಚೇರಿಗಳಲ್ಲಿ ನೀರವ ಮೌನ, ಎಲ್ಲೆಲ್ಲಿ ಹೇಗಿತ್ತು ಪರಿಸ್ಥಿತಿ?
ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಎನ್.ರಮೇಶ್, ಪ್ರಮುಖರಾದ ಎಸ್.ಕೆ.ಮರಿಯಪ್ಪ, ದೀಪಕ್ ಸಿಂಗ್, ವಿಜಯ ಕುಮಾರ್, ಸಿ.ಜಿ.ಮಧುಸೂದನ್ ಸುದ್ದಿಗೋಷ್ಠಿಯಲ್ಲಿದ್ದರು.