SHIVAMOGGA LIVE NEWS | 20 APRIL 2024
ELECTION NEWS : ಲೋಕಸಭೆ ಚುನಾವಣೆ ಬಳಿಕ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿದೆ. ಈ ಮಧ್ಯೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಹೇಳಿಕೆ ಇದಕ್ಕೆ ಪುಷ್ಠಿ ನೀಡಿದೆ.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಗ್ಯಾರಂಟಿ ಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದ ರಣದೀಪ್ ಸಿಂಗ್ ಸುರ್ಜೆವಾಲ, ಲೋಕಸಭೆ ಚುನಾವಣೆ ಪ್ರಚಾರದ ಸಂಬಂಧ ಎಲ್ಲರನ್ನು ಗಮನಿಸುತ್ತಿದ್ದೇನೆ. ಸಚಿವರು, ನಿಗಮ ಮಂಡಳಿ ಅಧ್ಯಕ್ಷರು ಎಲ್ಲರ ಕೆಲಸಗಳ ಮೇಲೆ ಕಣ್ಣಿಟ್ಟಿದ್ದೇನೆ. ಎಲ್ಲರು ಕ್ಷೇತ್ರದಲ್ಲಿಯೇ ಇದ್ದು ಕೆಲಸ ಮಾಡಬೇಕು. ಇಲ್ಲವಾದರೆ ಸಚಿವರು, ನಿಗಮ ಮಂಡಳಿ ಅಧ್ಯಕ್ಷರು ಬದಲಿಸುತ್ತೇವೆ ಎಂದು ಎಚ್ಚರಿಸಿದರು.
ಪ್ರತಿ ಬೂತ್ನಲ್ಲಿ ಪಕ್ಷಕ್ಕೆ ಹೆಚ್ಚು ಮತ ಲಭಿಸಬೇಕು. ಶಿವಮೊಗ್ಗದಲ್ಲಿ ಕಾಂಗ್ರೆಸ್ ಗೆಲ್ಲಬೇಕು ಎಂಬುದು ಎಲ್ಲರ ಪ್ರಥಮ ಆದ್ಯತೆಯಾಗಬೇಕು ಎಂದು ತಿಳಿಸಿದರು.
ಇದನ್ನೂ ಓದಿ – ಪಿಯುಸಿ ನಂತರ ಮುಂದೇನು? ಕಾಮರ್ಸ್ ವಿದ್ಯಾರ್ಥಿಗಳಿಗೆ ಶಿವಮೊಗ್ಗದಲ್ಲಿ ಉಚಿತ ಕಾರ್ಯಾಗಾರ, ಎಲ್ಲಿ? ಯಾವಾಗ?