ಶಿವಮೊಗ್ಗ ಲೈವ್.ಕಾಂ | SHIMOGA | 27 ಮಾರ್ಚ್ 2020
14 ದಿನ ಮನೆಯಲ್ಲಿರಬೇಕು ಎಂದು ಸೂಚಿಸಿದ್ದರು ಅದನ್ನು ಉಲ್ಲಂಘಸಿ, ಕೆರೆ ಬೇಟೆಗೆ ಹೋಗಿದ್ದ ವಕೀಲರೊಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ. ಕರೋನ ಬಾದಿತ ಪ್ರದೇಶದಿಂದ ಬಂದಿದ್ದ ವಕೀಲರೊಬ್ಬರಿಗೆ ಮನೆ ಬಿಟ್ಟು ಹೊರಬಾರದಂತೆ ಸೂಚಿಸಲಾಗಿತ್ತು. ಆದರೂ ಇದನ್ನು ವಿರೋಧಿಸಿದ್ದಾರೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಕಾಶ್ ನಾಯ್ಕ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಸೊರಬ ತಾಲೂಕು ದೇವಕಾತಿಕೊಪ್ಪದ ಬಳಿ ಕೆರೆ ಬೇಟೆಯಲ್ಲಿ ಇವರು ಭಾಗವಹಿಸಿದ್ದರು. 14 ದಿನ ಹೋಂ ಕ್ವಾರಂಟೈನ್’ನಲ್ಲಿ ಇರಬೇಕು ಎಂದು ಸೂಚಿಸಲಾಗಿತ್ತು. ಆದರೂ ಇತರೆ 11 ಮಂದಿಯೊಂದಿಗೆ ಇವರು ಕರೆ ಬೇಟೆ ಮಾಡುತ್ತಿದ್ದರು. ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ್ದ ಪೊಲೀಸರ ಕರ್ತವ್ಯಕ್ಕೂ ಇವರು ಅಡ್ಡಿಪಡಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಲಾಕ್’ಡೌನ್ ನಿಯಮ ಮತ್ತು ಜಿಲ್ಲಾಧಿಕಾರಿ ಅವರು ವಿಧಿಸಿರುವ ಸೆಕ್ಷನ್ 144ರ ನಿಷೇಧಾಜ್ಞೆ ನಿಯಮವನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಕಾಶ್ ನಾಯ್ಕ ಮತ್ತು ಇತರರ ವಿರುದ್ಧ ಐಪಿಸಿ ಸೆಕ್ಷನ್ 188, 353, 269, 271, 149ರ ಅನ್ವಯ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]