ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 31 ಆಗಸ್ಟ್ 2020
ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರಿಗೆ ಕರೋನ ಪಾಸಿಟಿವ್ ಬಂದಿದೆ. ಈ ಸಂಬಂಧ ಫೇಸ್ಬುಕ್ನಲ್ಲಿ ಪೋಸ್ಟ್ ಪ್ರಕಟಿಸಿದ್ದು, ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.
ಫೇಸ್ಬುಕ್ನಲ್ಲಿ ಏನು ಪ್ರಕಟಿಸಿದ್ದಾರೆ?
ನಾನು ಇಂದು ಕೋವಿಡ್ 19 ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಕೊರೋನಾ ಪಾಸಿಟಿವ್ ಎಂದು ಬಂದಿದೆ. ಯಾವುದೇ ರೋಗ ಲಕ್ಷಣಗಳು ಕಂಡುಬಂದಿಲ್ಲವಾದರೂ, ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆಯನ್ನು ಪಡೆಯುತ್ತಿದ್ದೇನೆ ಎಂದು ಫೇಸ್ಬುಕ್ನಲ್ಲಿ ಆರಗ ಜ್ಞಾನೇಂದ್ರ ಬರೆದುಕೊಂಡಿದ್ದಾರೆ.
ಮೊದಲೇ ಕ್ವಾರಂಟೈನ್ನಲ್ಲಿ ಇದ್ದರು
ಕಾರು ಚಾಲಕನಿಗೆ ಕರೋನ ಪಾಸಿಟಿವ್ ಬಂದ ಹಿನ್ನೆಲೆ, ಶಾಸಕ ಆರಗ ಜ್ಞಾನೇಂದ್ರ ಅವರು ಭಾನುವಾರದಿಂದ ಕ್ವಾರಂಟೈನ್ನಲ್ಲಿದ್ದರು. ರಾಪಿಡ್ ಆಂಟಿನ್ಜೆಂಟ್ ಟೆಸ್ಟ್ ಮಾಡಿಸಿದಾಗ ವರದಿ ನೆಗೆಟಿವ್ ಬಂದಿದೆ. ಸ್ವ್ಯಾಬ್ ಟೆಸ್ಟ್ ಮಾಡಿಸಿದಾಗ ಆರಗ ಜ್ಞಾನೇಂದ್ರ ಅವರಿಗೆ ಪಾಸಿಟಿವ್ ಬಂದಿದೆ.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]