ಶಿವಮೊಗ್ಗ ಲೈವ್.ಕಾಂ | SHIMOGA | 28 ಮಾರ್ಚ್ 2020
ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಜಿಲ್ಲಾ ಪಂಚಾಯಿತಿ ಸದಸ್ಯ ಕಾಂತೇಶ್ ಅವರು ತಮ್ಮ ನಾಲ್ಕು ತಿಂಗಳ ವೇತನವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿದ್ದಾರೆ. ಶಿವಮೊಗ್ಗದಲ್ಲಿಇವತ್ತು ಜಿಲ್ಲಾಧಿಕಾರಿ ಅವರಿಗೆ ತಮ್ಮ ವೇತನದ ಚೆಕ್ ಹಸ್ತಾಂತರಿಸಿದರು.
ಕರೋನ ಹಿನ್ನೆಲೆ ಪರಿಹಾರ ಕಾರ್ಯಕ್ಕೆ ಉಪಯೋಗ ಆಗಲಿ ಎಂದು ಸಿಎಂ ಪರಿಹಾರ ನಿಧಿಗೆ ಚೆಕ್ ನೀಡಿದರು. ಸಚಿವ ಕೆ.ಎಸ್.ಈಶ್ವರಪ್ಪ ಅವರು ತಮ್ಮ ನಾಲ್ಕು ತಿಂಗಳ ವೇತನ 5.34 ಲಕ್ಷ ರೂ. ಚೆಕ್ ನೀಡಿದರು.
ಇನ್ನು, ಜಿಲ್ಲಾ ಪಂಚಾಯಿತಿ ಸದಸ್ಯ ಕಾಂತೇಶ್ ಅವರು ತಮ್ಮ ನಾಲ್ಕು ತಿಂಗಳ ವೇತನ 20 ಸಾವಿರ ರೂ. ವೇತನದ ಚೆಕ್ ಅನ್ನು ಜಿಲ್ಲಾಧಿಕಾರಿ ಅವರಿಗೆ ಹಸ್ತಾಂತರಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]