ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜುಲೈ 2020
ಕರೋನಾ ನಿಯಂತ್ರಣಕ್ಕಾಗಿ ಶ್ರಮಿಸುತ್ತಿರುವ ಪೊಲೀಸರಿಗೆ ರಕ್ಷಣೆ ಇಲ್ಲವಾ? ಹೀಗೊಂದು ಪ್ರಶ್ನೆ ಶಿವಮೊಗ್ಗದಲ್ಲಿ ಎದುರಾಗಿದೆ.
ಇವತ್ತು ಶಿವಮೊಗ್ಗ ಡಿಎಆರ್ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಲಾಕ್ ಡೌನ್ ಜಾರಿಗೊಳಿಸುವ ಸಂಬಂಧ ಪೊಲೀಸರ ಸಭೆಯಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಒಬ್ಬರು ಈ ರೀತಿಯ ಪ್ರಶ್ನೆ ಎತ್ತಿ ಆಶ್ಚರ್ಯ ಮೂಡಿಸಿದರು.
ಕರೋನಾ ವಾರಿಯರ್ಸ್ ಪೊಲೀಸರಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡಲು ಮುಂದೆ ಬರುತ್ತಿಲ್ಲ. ಶಿವಮೊಗ್ಗದ ಎಎಸ್ಐ ಒಬ್ಬರು ಜ್ವರ ಹಾಗೂ ಹೊಟ್ಟೆ ನೋವಿನಿಂದ ಬಳಲುತ್ತಿದ್ದಾಗ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದರೆ ಯಾವ ಆಸ್ಪತ್ರೆಯಲ್ಲೂ ಅವರಿಗೆ ಚಿಕಿತ್ಸೆ ನೀಡಲಿಲ್ಲ. ಕರೋನಾ ತಪಾಸಣೆ ಮಾಡಿಸಿಕೊಂಡು ಹೋಗಿ ಎನ್ನುತ್ತಿದ್ದಾರೆ.
ಕೊನೆಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಎಎಸ್ಐಗೆ ಚಿಕಿತ್ಸೆ ಕೊಡಿಸಬೇಕಾಯಿತು ಎಂದು ದೊಡ್ಡಪೇಟೆ ಸರ್ಕಲ್ ಇನ್ಸ್ಪೆಕ್ಟರ್ ವಸಂತ್ ಕುಮಾರ್ ಅವರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಬಳಿ ಅಳಲು ತೋಡಿಕೊಂಡರು. ಜೊತೆಗೆ ಕರೋನಾ ವಾರಿಯರ್ಸ್ಗೆ ಚಿಕಿತ್ಸೆಗಾಗಿ ಪ್ರತ್ಯೇಕ ವ್ಯವಸ್ಥೆ ಮಾಡಿಕೊಡಬೇಕು ಎಂದು ಮನವಿ ಮಾಡಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]