SHIVAMOGGA LIVE NEWS | 22 ಮಾರ್ಚ್ 2022
ವಕೀಲರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಸಂಬಂಧ ಸರ್ಕಲ್ ಇನ್ಸ್ ಪೆಕ್ಟರ್ ಒಬ್ಬರನ್ನು ಸಸ್ಪೆಂಡ್ ಮಾಡಲಾಗಿದೆ. ಈ ಸಂಬಂಧ ಪೂರ್ವ ವಲಯ ಐಜಿಪಿ ಡಾ. ಕೆ.ತ್ಯಾಗರಾಜನ್ ಅವರು ಆದೇಶ ಹೊರಡಿಸಿದ್ದಾರೆ.
ತೊಗರ್ಸಿ ಜಾತ್ರೆಯಲ್ಲಿ ವಕೀಲ ಜಯದೇವ ಕೆರೂರು ಎಂಬುವವರ ಮೇಲೆ ಶಿಕಾರಿಪುರದ ಇನ್ಸ್ ಪೆಕ್ಟರ್ ಗುರುರಾಜ್ ಮೈಲಾರ್ ಅವರು ಹಲ್ಲೆ ನಡೆಸಿದ್ದರು. ಇದರ ವಿಡಿಯೋ ವೈರಲ್ ಆಗಿತ್ತು.
ಮಾರ್ಚ್ 13ರಂದು ಹಿರೇಕೆರೂರು ತಾಲೂಕು ಹಂಸಭಾವಿ ಗ್ರಾಮದ ವಕೀಲ ಜಯದೇವ ಕೆರೂರು ಅವರ ಮೇಲೆ ಸಿಪಿಐ ಸೇರಿದಂತೆ ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಿದ್ದಾರು. ಈ ಹಿನ್ನೆಲೆಯಲ್ಲಿ ಇನ್ಸ್ ಪೆಕ್ಟರ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200