SHIMOGA, 2 SEPTEMBER 2024 : ಸಾಲಕ್ಕೆ ಮಿತಿ ಮೀರಿದ ಬಡ್ಡಿ (Interest) ವಸೂಲಿ ಮಾಡಿದ್ದಲ್ಲದೆ ಮತ್ತಷ್ಟು ಹಣ ನೀಡುವಂತೆ ಪೀಡಿಸುತ್ತಿದ್ದ ಮಹಿಳೆ ವಿರುದ್ಧ ಪ್ರಕರಣ ದಾಖಲಾಗಿದೆ. ಖಾಲಿ ಚೆಕ್ಗಳಲ್ಲಿ ಇಷ್ಟ ಬಂದಷ್ಟು ಹಣ ನಮೂದು ಮಾಡಿ ಗಂಡ, ಹೆಂಡತಿಯನ್ನು ಜೈಲಿಗೆ ಕಳುಹಿಸುವ ಬೆದರಿಕೆ ಒಡ್ಡಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.
ಬಾಪೂಜಿನಗರದ ಹಸೀನಾ ಬಾನು ಎಂಬುವವರು ಮಹಿಳೆಯೊಬ್ಬರಿಂದ 1.70 ಲಕ್ಷ ರೂ. ಸಾಲ ಪಡೆದಿದ್ದರು. ಇದಕ್ಕೆ ಸಾಕ್ಷಿಯಾಗಿ ಎರಡು ಬಾಂಡ್, ಹಸೀನಾ ಬಾನು ಅವರ ಪತಿಯ ಬ್ಯಾಂಕ್ ಖಾತೆಯ ಎರಡು ಖಾಲಿ ಚೆಕ್ಗಳನ್ನು ಮಹಿಳೆ ಪಡೆದುಕೊಂಡಿದ್ದಳು ಎಂದು ಆರೋಪಿಸಲಾಗಿದೆ. ಸಾಲದ ಮೊತ್ತಕ್ಕೆ ಶೇ.20ರಷ್ಟು ಬಡ್ಡಿ ವಸೂಲಿ ಮಾಡಿದ್ದು, ಈವರೆಗೂ ಸುಮಾರು 5 ಲಕ್ಷ ರೂ. ಬಡ್ಡಿ ಕಟ್ಟಲಾಗಿದೆ. ಹೀಗಿದ್ದೂ ಮತ್ತಷ್ಟು ಮೊತ್ತ ಪಾವತಿಸುವಂತೆ ಮಹಿಳೆ ಒತ್ತಾಯಿಸುತ್ತಿದ್ದಾಳೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಹೆಚ್ಚುವರಿ ಮೊತ್ತ ಕಟ್ಟದೆ ಇದ್ದಲ್ಲಿ ಖಾಲಿ ಚೆಕ್ನಲ್ಲಿ ಇಷ್ಟ ಬಂದಷ್ಟು ಹಣ ನಮೂದು ಮಾಡಿ, ಹಸೀನಾ ಬಾನು ಮತ್ತು ಅವರ ಗಂಡನನ್ನು ಜೈಲಿಗೆ ಕಳುಹಿಸುವುದಾಗಿ ಮಹಿಳೆ ಬೆದರಿಕೆ ಒಡ್ಡಿದ್ದಳು ಎಂದು ಆರೋಪಿಸಲಾಗಿದೆ. ಈ ಸಂಬಂಧ ಕೋಟೆ ಠಾಣೆಗೆ ಹಸೀನಾ ಬಾನು ದೂರು ನೀಡಿದ್ದಾರೆ. ಮಿತಿ ಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ ಅಧಿನಿಯಮದ ಅಡಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಸೆಪ್ಟೆಂಬರ್ ತಿಂಗಳು, ಕರ್ನಾಟಕದಲ್ಲಿ 9 ದಿನ ಬ್ಯಾಂಕುಗಳಿಗೆ ರಜೆ, ಕಾರಣವೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200