SHIVAMOGGA LIVE NEWS | 1 DECEMBER 2022
ಭದ್ರಾವತಿ : ಬೀದಿ ನಾಯಿಗಳ ದಾಳಿಗೆ (stray dogs attack) ನಾಲ್ಕು ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ತೀವ್ರ ಗಾಯಗೊಂಡಿದ್ದ ಬಾಲಕನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲು ಕರೆ ತರುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.
ಭದ್ರಾವತಿ ತಾಲೂಕು ದೊಣಬಘಟ್ಟ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಇಲ್ಲಿನ ಸೈಯದ್ ನಸ್ರುಲ್ಲಾ ಮತ್ತು ಶೇರ್ ಬಾನು ದಂಪತಿ ಪುತ್ರ ಸೈಯದ್ ಅರ್ಷದ್ ಮದನಿ (4) ಸಾವನ್ನಪ್ಪಿದ್ದಾನೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
(stray dogs attack)
ಜಮೀನಿಗೆ ಹೋಗುವಾಗ ದಾಳಿ
ಸೈಯದ್ ಅರ್ಷದ್ ಮದನಿ ತನ್ನ ತಂದೆಯೊಂದಿಗೆ ಜಮೀನಿಗೆ ತೆರಳುತ್ತಿದ್ದ. ಈ ವೇಳೆ ನಾಯಿಗಳು ದಾಳಿ ನಡೆಸಿವೆ. ಸುಮಾರು 10 ನಾಯಿಗಳು ಒಟ್ಟಿಗೆ ದಾಳಿ ಮಾಡಿದ್ದು, ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಕೂಡಲೆ ಆತನನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಆಂಬುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.
ALSO READ – ಅಡಕೆ ಸಾಗಣೆಗೆ 6 ಗೈಡ್ ಲೈನ್ ಪ್ರಕಟಿಸಿದ ಶಿವಮೊಗ್ಗ ಪೊಲೀಸ್, ಏನದು? ಕಾರಣವೇನು?
ಘಟನೆ ಸಂಬಂಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.