SHIVAMOGGA LIVE NEWS | 30 NOVEMBER 2023
SHIMOGA : ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಹಿಳೆಯರ ವ್ಯಾನಿಟಿ ಬ್ಯಾಗ್ನಿಂದ ಚಿನ್ನಾಭರಣವಿರುವ ಪರ್ಸ್ ಕಳ್ಳತನ (theft) ಪ್ರಕರಣ ಮುಂದುವರೆದಿದೆ. ಮಹಿಳೆಯೊಬ್ಬರ ಬ್ಯಾಗಿನಿಲ್ಲಿದ್ದ 5.72 ಲಕ್ಷ ರೂ. ಮೌಲ್ಯದ ಚಿನ್ನಾಭರಣ (Jewellery) ಕಳ್ಳತನವಾಗಿದೆ.
ಕಳ್ಳತನ ಆಗಿದ್ದು ಹೇಗೆ?
ಎನ್.ಆರ್.ಪುರದ ಮುಡುಬ ಕೊಣಕೆರೆ ವಾಸಿ ಶಶಿಕಲಾ ಅವರು ಶಿವಮೊಗ್ಗದಿಂದ ಕೆಎಸ್ಆರ್ಟಿಸಿ ಬಸ್ನಲ್ಲಿ ನ.23ರಂದು ಚಿತ್ರದುರ್ಗಕ್ಕೆ ಪ್ರಯಾಣಿಸಿದ್ದರು. ಮಗಳ ಮನೆಯಲ್ಲಿದ್ದರು ನ.26ರಂದು ಮದುವೆ ಸಮಾರಂಭಕ್ಕೆ ತಯಾರಾಗಲು ವ್ಯಾನಿಟಿ ಬ್ಯಾಗ್ ತೆಗೆದಾಗ ಪರ್ಸ್ ನಾಪತ್ತೆಯಾಗಿತ್ತು.
ಇದನ್ನೂ ಓದಿ- ಶಿವಮೊಗ್ಗ, ಭದ್ರಾವತಿ, ಶಿಕಾರಿಪುರದ ವಿವಿಧೆಡೆ ಮಳೆ ಅಬ್ಬರ, ಎಲ್ಲೆಲ್ಲಿ ಮಳೆಯಾಗುತ್ತಿದೆ?
ಲಕ್ಷ ಲಕ್ಷ ಮೌಲ್ಯದ ಚಿನ್ನಾಭರಣ
ಶಶಿಕಲಾ ಕೆಂಪು ಬಣ್ಣದ ಪರ್ಸ್ನಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ (Jewellery) ಇರಿಸಿದ್ದರು. ಬಂಗಾರದ ಎರಡು ಸರಗಳು, ಎರಡು ಬಳೆ ಇದ್ದವು. ಇವುಗಳ ಮೌಲ್ಯ ಅಂದಾಜು 5.72 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ. ಶಿವಮೊಗ್ಗದಲ್ಲಿ ಬಸ್ ಹತ್ತುವ ವೇಳೆ ರಶ್ ಇತ್ತು. ಆಗ ವ್ಯಾನಿಟಿ ಬ್ಯಾಗ್ನ ಜಿಪ್ ತೆಗೆದು ಪರ್ಸ್ ಕಳ್ಳತ ಮಾಡಿರುವ ಶಂಕೆ ಇದೆ ಎಂದು ಆರೋಪಿಸಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200