ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 20 ಸೆಪ್ಟೆಂಬರ್ 2019
ಸಬ್ಸಿಡಿ ಬ್ಯಾಂಕ್ ಸಾಲಕ್ಕೆ ಶಿಫಾರಸ್ಸು ಮಾಡಲು ಲಂಚ ಪಡೆಯುತ್ತಿದ್ದ ಜಿಲ್ಲಾ ಕೈಗಾರಿಕಾ ಸಹಾಯಕ ನಿರ್ದೇಶಕ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದಾರೆ. ಮುಖ್ಯಮಂತ್ರಿ ಉದ್ಯೋಗ ಸೃಜನ ಯೋಜನೆಯಲ್ಲಿ ಶಾಮಿಯಾನ ಅಂಗಡಿ ತೆರೆಯಲು ಸಬ್ಸಿಡಿ ಬ್ಯಾಂಕ್ ಸಾಲಕ್ಕೆ ಶಿಫಾರಸು ಮಾಡಲು ನಾಲ್ಕು ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
![]() |
ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕ ಪ್ರಶಾಂತ್ ಕುಮಾರ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ಹೊಸನಗರ ತಾಲೂಕು ಹುಲಿಗದ್ದೆ ಗ್ರಾಮದ ಅಖಿಲ್ ಅಹಮದ್ ಎಂಬುವವರಿಂದ ಶಿವಮೊಗ್ಗ ಎಪಿಎಂಸಿ ಬಳಿ ರಾತ್ರಿ, ನಾಲ್ಕು ಸಾವಿರ ರೂ. ಲಂಚ ಪಡೆಯುತ್ತಿದ್ದರು. ಈ ವೇಳೆ ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್ಪಿ ಎಲ್.ವೇಣುಗೋಪಾಲ್ ನೇತೃತ್ವದಲ್ಲಿ ದಾಳಿ ನಡೆಸಿ ಅಧಿಕಾರಿಯನ್ನು ಬಂಧಿಸಲಾಗಿದೆ.
ಎಸಿಬಿ ಇನ್ಸ್ಪೆಕ್ಟರ್ ತಿಪ್ಪೇಸ್ವಾಮಿ, ವೀರೇಂದ್ರ, ಸಿಬ್ಬಂದಿಗಳಾದ ನಾಗರಾಜ, ರಘುನಾಯ್ಕ, ಸುರೇಂದ್ರ, ಯೋಗೇಶಪ್ಪ, ಹರೀಶ್, ಶ್ರೀನಿವಾಸ್ ಅವರು ದಾಳಿಯಲ್ಲಿ ಭಾಗವಹಿಸಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200