ಶಿವಮೊಗ್ಗ ಲೈವ್.ಕಾಂ | SHIMOGA NEWS | 31 ಡಿಸೆಂಬರ್ 2020
ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆ ಅಧಿಕಾರಿಯೊಬ್ಬರ ಮನೆ, ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪರಿಶೀಲನೆ ಕಾರ್ಯ ನಡೆಯುತ್ತಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಜಿ.ಜಿ.ಸುರೇಶ್ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ. ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿರುವ ಸುರೇಶ್ ಅವರ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ನಾಲ್ಕು ಕಡೆ ದಾಳಿ
ದಾಳಿ 1 – ಮಲ್ಲೇಶ್ವರ ನಗರದಲ್ಲಿ ಇರುವ ಮನೆ
ದಾಳಿ 2 – ಗೋಪಾಲಗೌಡ ಬಡಾವಣೆಯಲ್ಲಿರುವ ಮನೆ
ದಾಳಿ 3 – ಭದ್ರಾವತಿ ಹುಣಸೇಕಟ್ಟೆಯಲ್ಲಿರುವ ತೋಟ ಮತ್ತು ತೋಟದ ಮನೆ
ದಾಳಿ 4 – ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿ
ದಾಖಲೆ, ಚಿನ್ನಾಭರಣ ಪರಿಶೀಲನೆ
ಜಿ.ಜಿ.ಸುರೇಶ್ ಅವರ ಮನೆಯಲ್ಲಿರುವ ದಾಖಲೆಗಳು, ಚಿನ್ನಾಭರಣದ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.
ಭ್ರಷ್ಟಾಚಾರ ನಿಗ್ರಹದಳದ ಪೂರ್ವ ವಲಯ ಎಸ್.ಪಿ. ಜಯಪ್ರಕಾಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಶಿವಮೊಗ್ಗ ಎಸಿಬಿ ಡಿಎಸ್ಪಿ ಲೋಕೇಶ್, ದಾವಣಗೆರೆ ಡಿಎಸ್ಪಿ ಪರಮೇಶ್ವರ್, ಇನ್ಸ್ಪೆಕ್ಟರ್ ವೀರೇಂದ್ರ ನೇತೃತ್ವದ ತಂಡ ದಾಳಿ ನಡೆಸಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200