
ಶಿವಮೊಗ್ಗ ಲೈವ್.ಕಾಂ |SHIMOGA NEWS | 1 DECEMBER 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಶಿವಮೊಗ್ಗ ಎಪಿಎಂಸಿಯಲ್ಲಿ ದಾಳಿ ನಡೆಸಿ, ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಯೊಬ್ಬರನ್ನು ಬಂಧಿಸಿದ್ದಾರೆ.
ಎಪಿಎಂಸಿಯ ಸಹಾಯಕ ನಿರ್ದೇಶಕರ ಕಚೇರಿಯ ಸೂಪರಿಂಟೆಂಡೆಂಟ್ ಸಾಮ್ಯಾ ನಾಯ್ಕ ಬಂಧಿತರು. ಐದು ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ.
ಎಪಿಎಂಸಿ ಟ್ರೇಡ್ ಲೈಸೆನ್ಸ್ ರದ್ದುಗೊಳಿಸಲು ಸೂಪರಿಂಟೆಂಡೆಂಟ್ ಸಾಮ್ಯಾ ನಾಯ್ಕ ಅವರು 10 ಸಾವಿರ ರೂ. ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಉಮಾ ಮಹೇಶ್ ಎಂಬುವವರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಇವತ್ತು ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು.
ಸಾಮ್ಯಾ ನಾಯ್ಕ ಅವರನ್ನು ಬಂಧಿಸಲಾಗಿದ್ದು, ಹಣವನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ನಡೆಯುತ್ತಿದೆ.
ಡಿವೈಎಸ್ಪಿ ಜೆ.ಲೋಕೇಶ್ ನೇತೃತ್ವದಲ್ಲಿ, ಇನ್ಸ್ಪೆಕ್ಟರ್ ಎನ್.ವೀರೇಂದ್ರ, ಸಿಬ್ಬಂದಿಗಳಾದ ಕೆ.ವಸಂತ, ನಾಗರಾಜ್, ರಘು ನಾಯ್ಕ, ಸುರೇಂದ್ರ, ಶ್ರೀನಿವಾಸ್, ಹರೀಶ್ ದಾಳಿಯಲ್ಲಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






