ಶಿವಮೊಗ್ಗ ಲೈವ್.ಕಾಂ | SAGARA NEWS | 16 ನವೆಂಬರ್ 2021
ನಾಡ ಕಚೇರಿ ಮೇಲೆ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಲಂಚ ಪಡೆಯುತ್ತಿದ್ದ ಕಂದಾಯ ನಿರೀಕ್ಷಕನ್ನು ಬಂಧಿಸಿದ್ದಾರೆ.
ಸಾಗರ ತಾಲೂಕು ಭಾರಂಗಿ ಹೋಬಳಿಯ ಉಪ ತಹಶೀಲ್ದಾರ್ ನಾಡ ಕಚೇರಿ ಮೇಲೆ ಇವತ್ತು ಎಸಿಬಿ ದಾಳಿಯಾಗಿದೆ. ಈ ವೇಳೆ ಹಣ ಪಡೆಯುತ್ತಿದ್ದ ಕಂದಾಯ ನಿರೀಕ್ಷಕ ಕೃಷ್ಣಮೂರ್ತಿಯನ್ನು ಎಸಿಬಿ ಬಲೆಗೆ ಬಿದ್ದಿದ್ದಾರೆ.
ಏನಿದು ಪ್ರಕರಣ?
ಆಸ್ತಿ ಹಿಸ್ಸೆ ಸಂಬಂಧ ಖಾತೆ ಮಾಡಿಸಲು ಸ್ಥಳೀಯರೊಬ್ಬರು ಹೋಗಿದ್ದರು. ಈ ವೇಳೆ ಕಂದಾಯ ನಿರೀಕ್ಷಕ ಕೃಷ್ಣಮೂರ್ತಿ, 15 ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. ಇವತ್ತು 8 ಸಾವಿರ ರೂ. ಹಣ ಪಡೆಯುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಎಸಿಬಿ ಡಿವೈಎಸ್’ಪಿ ಲೋಕೇಶ್ ನೇತೃತ್ವದ ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200