ಶಿವಮೊಗ್ಗದಲ್ಲಿ ಎಸಿಬಿ ದಾಳಿ, ರುದ್ರೇಶಪ್ಪನ ಬ್ಯಾಂಕ್ ಲಾಕರ್ ಶೋಧ, ಆದಾಯಕ್ಕಿಂತಲೂ ಶೇ.400ರಷ್ಟು ಹೆಚ್ಚು ಸಂಪಾದನೆ ಧೃಡ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ನವೆಂಬರ್ 2021ADVT JULY NANJAPPA HOSPITAL HOME LAB TESTING

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ ತನ್ನ ಆದಾಯಕ್ಕಿಂತಲೂ ಶೇ.400ರಷ್ಟು ಹೆಚ್ಚು ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂದು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಅಂದಾಜು ಮಾಡಿದ್ದಾರೆ.

ಇದನ್ನೂ ಓದಿ | ಶಿವಮೊಗ್ಗದಲ್ಲಿ ಎಸಿಬಿ ದಾಳಿ, ಈವರೆಗೂ ಆಗಿರುವ ಐದು ಬೆಳವಣಿಗೆಗಳೇನು? ಇವತ್ತು ಏನೆಲ್ಲ ನಡೆಯುವ ಸಾಧ್ಯತೆ ಇದೆ?

ಶಿವಮೊಗ್ಗದ ಚಾಲುಕ್ಯ ನಗರ ಮತ್ತು ಗೋಪಾಳದ ಮನೆಗಳ ಮೇಲೆ ದಾಳಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಲೆ ಚಿನ್ನಾಭರಣ, ಆಸ್ತಿಪಾಸ್ತಿ ದಾಖಲೆಗಳು, ಗೃಹೋಪಯೋಗಿ ವಸ್ತುಗಳು, ಬ್ಯಾಂಕ್ ಠೇವಣಿಗಳು ಸಿಕ್ಕಿವೆ. ಇವುಗಳ ಮೊತ್ತೆ 6.65 ಕೋಟಿ ರೂ. ಎಂದು ಅಂದಾಜಿಸಲಾಗಿದೆ.

ಶೇ.400ಕ್ಕಿಂತಲೂ ಹೆಚ್ಚು ಆಸ್ತಿ

ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ ಈವರೆಗೂ ತಾನು ಗಳಿಸಿರುವ ಅದಾಯಕ್ಕಿಂತಲೂ ಶೇ.400ಕ್ಕಿಂತಲೂ ಹೆಚ್ಚು ಮೊತ್ತದ ಆಸ್ತಿ ಸಂಪಾದಿಸಿದ್ದಾರೆ ಎಂದು ಎಸಿಬಿ ಪ್ರಕಟಣೆಯಲ್ಲಿ ತಿಳಿಸಿದೆ.

shivamogga live subscribe band

ಬ್ಯಾಂಕ್ ಲಾಕರ್ ಪರಿಶೀಲನೆ

ಇವತ್ತು ರುದ್ರೇಶಪ್ಪನನ್ನು ಶಿವಮೊಗ್ಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (SBI) ಗೋಪಾಲಗೌಡ ಬಡಾವಣೆ ಶಾಖೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ರುದ್ರೇಶಪ್ಪ ಮತ್ತು ಆತನ ಕುಟುಂಬದವರ ಲಾಕರ್’ಗಳನ್ನು ಪರಿಶೀಲನೆ ನಡೆಸಲಾಯಿತು. ಆದರೆ ಲಾಕರ್’ನಲ್ಲಿ ಏನೂ ಇರಲಿಲ್ಲ ಎಂದು ತಿಳಿದು ಬಂದಿದೆ.

ರುದ್ರೇಶಪ್ಪನನ್ನು ಇವತ್ತು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುತ್ತದೆ. ಬಳಿಕ ಮತ್ತಷ್ಟು ವಿಚಾರಣೆ ನಡೆಯಲಿದೆ ಎಂದು ತಿಳಿದು ಬಂದಿದೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment