ಶಿವಮೊಗ್ಗ ಲೈವ್.ಕಾಂ | ACCIDENT | 28 ಏಪ್ರಿಲ್ 2022
ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಬೈಕ್ ಸವಾರನೊಬ್ಬ ಸ್ಥಳದಲ್ಲೆ ಮೃತಪಟ್ಟಿದ್ದಾರೆ.
ಹೊಸ ಸಿದ್ದಾಪುರ ಗ್ರಾಮದ ಅರುಣ್ (30) ಮೃತ ದುರ್ದೈವಿ. ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.
ಹಿಟ್ ಅಂಡ್ ರನ್
ಅರುಣ್ ಬೈಪಾಸ್ ರಸ್ತೆಯಲ್ಲಿ ಸಿದ್ದಾಪುರದ ಕಡೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಎದುರಿನಿಂದ ಬಂದ ವಾಹನ ಅರುಣ್ಗೆ ಡಿಕ್ಕಿ ಹೊಡೆದಿರುವ ಶಂಕೆ ಇದೆ. ಕೆಳಗೆ ಬಿದ್ದ ಅರುಣ್ ಮೇಲೆ ವಾಹನಗಳು ಹತ್ತಿವೆ.
ಕಡು ಕತ್ತಲೆಯಲ್ಲಿ ಅಪಘಾತ
ಇವತ್ತು ಭಾರಿ ಗಾಳಿ, ಮಳೆಗೆ ಭದ್ರಾವತಿ ಬೈಪಾಸ್ ರಸ್ತೆ ಅಕ್ಕಪಕ್ಕದ ಗ್ರಾಮಗಳಲ್ಲಿ ವಿದ್ಯುತ್ ಕಡಿತವಾಗಿದೆ. ಬೈಪಾಸ್ ರಸ್ತೆಯಲ್ಲಿಯು ಬೆಳಕು ಇಲ್ಲ. ಹಾಗಾಗಿ ಅಪಘಾತ ಸಂಭವಿಸಿರುವ ಶಂಕೆ ಇದೆ.
ವಿಚಾರ ತಿಳಿಯುತ್ತಿದ್ದಂತೆ ಅರುಣ್ ಕುಟುಂಬದವರು, ಸ್ನೇಹಿತರು, ಅಕ್ಕಪಕ್ಕದ ಗ್ರಾಮದವರು ಸ್ಥಳಕ್ಕೆ ಜಮಾಯಿಸಿದ್ದರು.
ಭದ್ರಾವತಿ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200