ಶಿವಮೊಗ್ಗ ಲೈವ್.ಕಾಂ | SHIMOGA | 17 ಜನವರಿ 2020

ಶಿವಮೊಗ್ಗದ ಮಹಾವೀರ ಸರ್ಕಲ್’ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿದೆ.
ಬೈಕ್ ಮತ್ತು ಕಾರಿನ ಮಧ್ಯೆ ಡಿಕ್ಕಿಯಾಗಿದೆ. ಬೈಕ್ ಸವಾರ ನಾಗರಾಜ್ (24) ಗಂಭೀರವಾಗಿ ಗಾಯಗೊಂಡಿದ್ದು, ಮೃತರಾಗಿದ್ದಾರೆ. ಹರೀಶ್, ರವಿ ಎಂಬುವವರಿಗೆ ಗಂಭೀರ ಗಾಯವಾಗಿದ್ದು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಾರು ಪಲ್ಟಿ, ಬೈಕು ನುಜ್ಜುಗುಜ್ಜು
ರೈಲ್ವೆ ನಿಲ್ದಾಣದ ಕಡೆಯಿಂದ ಬರುತ್ತಿದ್ದ ಬೈಕ್ ಮತ್ತು ಕಾರಿನ ನಡುವೆ ಡಿಕ್ಕಿಯಾಗಿದೆ. ಕೆ.ಆರ್.ಪುರಂ ನಿವಾಸಿ ನಾಗರಾಜ್, ಬೆಂಗಳೂರಿನಿಂದ ಬಂದಿದ್ದ ತನ್ನ ಸ್ನೇಹಿತರನ್ನು ರೈಲ್ವೆ ನಿಲ್ದಾಣದಿಂದ ಕರೆ ಕರೆತರುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.

ಬೈಕ್’ಗೆ ಗುದ್ದಿದ ಕಾರು ಪಲ್ಟಿಯಾಗಿದ್ದು, ಮುಂಭಾಗ ನುಜ್ಜುಗುಜ್ಜಾಗಿದೆ. ಬೈಕ್ ಕೂಡ ಜಖಂ ಆಗಿದೆ. ಇದು ಅಪಘಾತದ ಭೀಕರತೆಯನ್ನು ಸಾರುತ್ತಿದೆ.
ಪೊಲೀಸ್ ಚೌಕಿಯು ಜಖಂ
ಮಹಾವೀರ ಸರ್ಕಲ್’ನಲ್ಲಿರುವ ಪೊಲೀಸ್ ಚೌಕಿಯು ಅಪಘಾತದಲ್ಲಿ ಜಖಂ ಆಗಿದೆ. ಚೌಕಿಗೆ ಗುದ್ದಿ ಕಾರು ಪಲ್ಟಿಯಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.



ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200