ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 17 ಜನವರಿ 2020

ಶಿವಮೊಗ್ಗದ ಮಹಾವೀರ ಸರ್ಕಲ್’ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿದೆ.
ಬೈಕ್ ಮತ್ತು ಕಾರಿನ ಮಧ್ಯೆ ಡಿಕ್ಕಿಯಾಗಿದೆ. ಬೈಕ್ ಸವಾರ ನಾಗರಾಜ್ (24) ಗಂಭೀರವಾಗಿ ಗಾಯಗೊಂಡಿದ್ದು, ಮೃತರಾಗಿದ್ದಾರೆ. ಹರೀಶ್, ರವಿ ಎಂಬುವವರಿಗೆ ಗಂಭೀರ ಗಾಯವಾಗಿದ್ದು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಾರು ಪಲ್ಟಿ, ಬೈಕು ನುಜ್ಜುಗುಜ್ಜು
ರೈಲ್ವೆ ನಿಲ್ದಾಣದ ಕಡೆಯಿಂದ ಬರುತ್ತಿದ್ದ ಬೈಕ್ ಮತ್ತು ಕಾರಿನ ನಡುವೆ ಡಿಕ್ಕಿಯಾಗಿದೆ. ಕೆ.ಆರ್.ಪುರಂ ನಿವಾಸಿ ನಾಗರಾಜ್, ಬೆಂಗಳೂರಿನಿಂದ ಬಂದಿದ್ದ ತನ್ನ ಸ್ನೇಹಿತರನ್ನು ರೈಲ್ವೆ ನಿಲ್ದಾಣದಿಂದ ಕರೆ ಕರೆತರುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.

ಬೈಕ್’ಗೆ ಗುದ್ದಿದ ಕಾರು ಪಲ್ಟಿಯಾಗಿದ್ದು, ಮುಂಭಾಗ ನುಜ್ಜುಗುಜ್ಜಾಗಿದೆ. ಬೈಕ್ ಕೂಡ ಜಖಂ ಆಗಿದೆ. ಇದು ಅಪಘಾತದ ಭೀಕರತೆಯನ್ನು ಸಾರುತ್ತಿದೆ.
ಪೊಲೀಸ್ ಚೌಕಿಯು ಜಖಂ
ಮಹಾವೀರ ಸರ್ಕಲ್’ನಲ್ಲಿರುವ ಪೊಲೀಸ್ ಚೌಕಿಯು ಅಪಘಾತದಲ್ಲಿ ಜಖಂ ಆಗಿದೆ. ಚೌಕಿಗೆ ಗುದ್ದಿ ಕಾರು ಪಲ್ಟಿಯಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.



ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





