ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SAGARA NEWS | 29 ಡಿಸೆಂಬರ್ 2021
ಲಾರಿ ಮತ್ತು ಅಶೋಕ ಲೇಲ್ಯಾಂಡ್ ಮಿನಿ ವಾಹನದ ಮದ್ಯೆ ಭೀಕರ ಅಪಘಾತ ಸಂಭವಿಸಿದೆ. ಮಿನಿ ವಾಹನದಲ್ಲಿ ಚಾಲಕನ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ.
ಸಾಗರ ತಾಲೂಕು ಆನಂದಪುರದ ಕಣ್ಣೂರು ಗ್ರಾಮದ ಬಳಿ ಘಟನೆ ಸಂಭವಿಸಿದೆ. ಲಾರಿ, ಮಿನಿ ವಾಹನದ ಮಧ್ಯೆ ರಾತ್ರಿ ಡಿಕ್ಕಿಯಾಗಿದೆ. ಓರ್ವ ಸಾವನ್ನಪ್ಪಿದ್ದು, ಚಾಲಕನಿಗೆ ಗಂಭೀರ ಗಾಯವಾಗಿದೆ.
ಮೃತನು ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದವನು ಎಂದು ತಿಳಿದು ಬಂದಿದೆ. ಲಾರಿ ಹೊಸನಗರದಿಂದ ಶಿಕಾರಿಪುರಕ್ಕೆ ತೆರಳುತ್ತಿತ್ತು. ಅಶೋಕ ಲೇಲ್ಯಾಂಡ್ ಮಿನಿ ವಾಹನವು ಶುಂಠಿ ತುಂಬಿಕೊಂಡು ಕುಂದಾಪುರದ ಕಡೆಗೆ ತೆರಳುತ್ತಿತ್ತು.
ಸ್ಥಳೀಯರ ನೆರವಿನಲ್ಲಿ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






