ಶಿವಮೊಗ್ಗ ಲೈವ್.ಕಾಂ |HOSANAGARA NEWS | 21 NOVEMBER 2020
ಹೊಸನಗರ – ಬಟ್ಟೆಮಲ್ಲಪ್ಪ ಮಾರ್ಗದ ಮುಡುಬ ಸೇತುವೆ ಬಳಿ ಅಪಘಾತ ಸಂಭವಿಸಿದ್ದು, ಓರ್ವ ಸವಾರ ಮೃತಪಟ್ಟಿದ್ದು, ಮತ್ತೊಬ್ಬರಿಗೆ ಗಾಯವಾಗಿದೆ. ಘಟನೆ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಹೇಗಾಯ್ತು ಘಟನೆ?
ಬೈಕ್ ಸವಾರರು ಹಾವೇರಿಯಿಂದ ಹೆಬ್ರಿಗೆ ತೆರಳುತ್ತಿದ್ದ ವೇಳೆ ಅಪಘಾತವಾಗಿದೆ. ಮುಡುಬ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗುಂಡಿಗೆ ಬಿದ್ದಿದೆ. ಘಟನೆಯಲ್ಲಿ ಹಾವೇರಿಯ ರೆಹಮಾನ್ ಸಾಬ್ (22) ಮೃತಪಟ್ಟಿದ್ದಾರೆ. ಅನ್ವರ್ ಬಾಷಾ ಎಂಬುವವರಿಗೆ ಗಾಯವಾಗಿದೆ.
ಸಾರ್ವಜನಿಕರ ಆಕ್ರೋಶ
ಮುಡುಬ ಸೇತುವೆ ಪಕ್ಕದಲ್ಲಿ ಗುಂಡಿ ಇದೆ. ಆದರೆ ರೆಸ್ತೆಯ ಎರಡು ಬದಿಯಲ್ಲಿ ತಡೆಗೋಡೆ, ಎಚ್ಚರಿಕೆ ಫಲಕವಿಲ್ಲ. ಹಾಗಾಗಿ ಈ ಭಾಗದಲ್ಲಿ ಅಪಘಾತಗಳು ಹೆಚ್ಚುತ್ತಿವೆ. ಕೂಡಲೆ ತಡೆಗೋಡೆಗಳನ್ನು ನಿರ್ಮಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]