| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 3 ಮಾರ್ಚ್ 2022
ಸಿಗಂದೂರು ಚೌಡೇಶ್ವರಿ ದೇವಿ ಸನ್ನಿಧಿಗೆ ತೆರಳುತ್ತಿದ್ದ ಭಕ್ತರಿದ್ದ ಕ್ರೂಸರ್ ಪಲ್ಟಿಯಾಗಿ ಕಂದಕ್ಕೆ ಉರುಳಿದೆ. ಮಹಿಳೆಯೊಬ್ಬರು ಮೃತಪಟ್ಟಿದ್ದು ಐವರು ಗಾಯಗೊಂಡಿದ್ದಾರೆ.
ಬ್ಯಾಕೋಡು ಸಮೀಪ ಒಕ್ಕೋಡಿ ಬಳಿ ರಸ್ತೆ ಪಕ್ಕದ ಗುಂಡಿಗೆ ಕ್ರೂಸರ್ ಪಲ್ಟಿಯಾಗಿದೆ. ರಾತ್ರಿ 9 ಗಂಟೆ ಹೊತ್ತಿಗೆ ಘಟನೆ ಸಂಭವಿಸಿದೆ.
ಸ್ಥಳದಲ್ಲೇ ಮಹಿಳೆ ಸಾವು
ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ 11 ಮಂದಿ ಮುರುಡೇಶ್ವರ ಪ್ರವಾಸ ಮುಗಿಸಿ ಸಿಗಂದೂರು ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದರು. ಒಕ್ಕೋಡಿ ಬಳಿ ರಸ್ತ ಪಕ್ಕದ ಗುಂಡಿಗೆ ಕ್ರೂಸರ್ ಪಲ್ಟಿ ಹೊಡೆದಿದೆ. ಗೌರಮ್ಮ (55) ಎಂಬುವವರು ಮೃತಪಟ್ಟಿದ್ದಾರೆ.
ಗಾಯಾಳುಗಳು ಕುಂದಾಪುರಕ್ಕೆ
ವಿಚಾರ ತಿಳಿಯುತ್ತಿದ್ದ ಹಾಗೆ ಸ್ಥಳೀಯರು ಗಾಯಾಳುಗಳ ನೆರವಿಗೆ ಬಂದರು. ಅಪಘಾತ ಸ್ಥಳದಿಂದ ಎಲ್ಲರನ್ನು ರಕ್ಷಿಸಿ ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆ ತಂದು ಚಿಕಿತ್ಸೆ ಕೊಡಿಸಲಾಯಿತು. ಸಿಗಂದೂರು ದೇವಸ್ಥಾನದ ಆಂಬುಲೆನ್ಸ್ ಮತ್ತು ಖಾಸಗಿ ವಾಹನದ ಮೂಲಕ ಗಾಯಾಳುಗಳನ್ನು ಕುಂದಾಪುರದ ಆಸ್ಪತ್ರೆಗೆ ಕರೆದೊಯ್ದು ದಾಖಲು ಮಾಡಲಾಯಿತು.
ಸ್ಥಳಕ್ಕೆ ಬ್ಯಾಕೋಡು ಉಪ ಠಾಣೆ ಪೊಲೀಸರು, ಶ್ರೀ ಕ್ಷೇತ್ರ ಸಿಗಂದೂರಿನ ಧರ್ಮದರ್ಶಿ ಹೆಚ್.ಆರ್.ರವಿಕುಮಾರ್ ಭೇಟಿ ನೀಡಿ ಗಾಯಾಳುಗಳಿಗೆ ನೆರವಾದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
- ‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
- ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?
- ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
![]()