SHIVAMOGGA LIVE NEWS | 3 ಮಾರ್ಚ್ 2022
ಸಿಗಂದೂರು ಚೌಡೇಶ್ವರಿ ದೇವಿ ಸನ್ನಿಧಿಗೆ ತೆರಳುತ್ತಿದ್ದ ಭಕ್ತರಿದ್ದ ಕ್ರೂಸರ್ ಪಲ್ಟಿಯಾಗಿ ಕಂದಕ್ಕೆ ಉರುಳಿದೆ. ಮಹಿಳೆಯೊಬ್ಬರು ಮೃತಪಟ್ಟಿದ್ದು ಐವರು ಗಾಯಗೊಂಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಬ್ಯಾಕೋಡು ಸಮೀಪ ಒಕ್ಕೋಡಿ ಬಳಿ ರಸ್ತೆ ಪಕ್ಕದ ಗುಂಡಿಗೆ ಕ್ರೂಸರ್ ಪಲ್ಟಿಯಾಗಿದೆ. ರಾತ್ರಿ 9 ಗಂಟೆ ಹೊತ್ತಿಗೆ ಘಟನೆ ಸಂಭವಿಸಿದೆ.
ಸ್ಥಳದಲ್ಲೇ ಮಹಿಳೆ ಸಾವು
ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ 11 ಮಂದಿ ಮುರುಡೇಶ್ವರ ಪ್ರವಾಸ ಮುಗಿಸಿ ಸಿಗಂದೂರು ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದರು. ಒಕ್ಕೋಡಿ ಬಳಿ ರಸ್ತ ಪಕ್ಕದ ಗುಂಡಿಗೆ ಕ್ರೂಸರ್ ಪಲ್ಟಿ ಹೊಡೆದಿದೆ. ಗೌರಮ್ಮ (55) ಎಂಬುವವರು ಮೃತಪಟ್ಟಿದ್ದಾರೆ.
ಗಾಯಾಳುಗಳು ಕುಂದಾಪುರಕ್ಕೆ
ವಿಚಾರ ತಿಳಿಯುತ್ತಿದ್ದ ಹಾಗೆ ಸ್ಥಳೀಯರು ಗಾಯಾಳುಗಳ ನೆರವಿಗೆ ಬಂದರು. ಅಪಘಾತ ಸ್ಥಳದಿಂದ ಎಲ್ಲರನ್ನು ರಕ್ಷಿಸಿ ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆ ತಂದು ಚಿಕಿತ್ಸೆ ಕೊಡಿಸಲಾಯಿತು. ಸಿಗಂದೂರು ದೇವಸ್ಥಾನದ ಆಂಬುಲೆನ್ಸ್ ಮತ್ತು ಖಾಸಗಿ ವಾಹನದ ಮೂಲಕ ಗಾಯಾಳುಗಳನ್ನು ಕುಂದಾಪುರದ ಆಸ್ಪತ್ರೆಗೆ ಕರೆದೊಯ್ದು ದಾಖಲು ಮಾಡಲಾಯಿತು.
ಸ್ಥಳಕ್ಕೆ ಬ್ಯಾಕೋಡು ಉಪ ಠಾಣೆ ಪೊಲೀಸರು, ಶ್ರೀ ಕ್ಷೇತ್ರ ಸಿಗಂದೂರಿನ ಧರ್ಮದರ್ಶಿ ಹೆಚ್.ಆರ್.ರವಿಕುಮಾರ್ ಭೇಟಿ ನೀಡಿ ಗಾಯಾಳುಗಳಿಗೆ ನೆರವಾದರು.