SHIVAMOGGA LIVE NEWS, 3 JANUARY 2024
ಸೊರಬ : ಮನೆಯವರು ತೋಟಕ್ಕೆ (Adike) ತೆರಳಿದ್ದ ಸಂದರ್ಭ ಬಾಗಿಲಿನ ಬೀಗ ಮುರಿದು ಚಿನ್ನಾಭರಣ, ನಗದು ಕಳ್ಳತನ ಮಾಡಲಾಗಿದೆ. ಸೊರಬ ತಾಲೂಕು ಅಂಬ್ಲಿಕೊಪ್ಪ ರಸ್ತೆಯ ಬೆನ್ನೂರು ಗ್ರಾಮದ ನಾಗರಾಜ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ.
ನಾಗರಾಜ ಅವರು ತಮ್ಮ ತೋಟದಲ್ಲಿ ಅಡಿಕೆ ಕೊಯ್ಲಿಗೆ ಮುಗಿಸಿ ಮನೆಗೆ ಮರಳಿದ್ದರು. ಆಗ ಮನೆಯ ಬಾಗಿಲು ತೆರದಿತ್ತು. ಒಳಗೆ ಹೋಗಿ ಪರಿಶೀಲಿಸಿದಾಗ ಬೀರು ಬೀಗ ಮುರಿದು ಕಳ್ಳತನ ಮಾಡಲಾಗಿತ್ತು. ಒಟ್ಟು 3.75 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಮತ್ತು ನಗದು ಕಳುವಾಗಿದೆ ಎಂದು ಆರೋಪಿಸಲಾಗಿದೆ. ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ನೀರಿನ ಸಂಪರ್ಕ ಕಡಿತದ ವಾರ್ನಿಂಗ್, ಕಾರಣವೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200