ಅಡಿಕೆ ಕೊಯ್ಲು ಮುಗಿಸಿ ಮನೆಗೆ ಮರಳಿದ ರೈತನಿಗೆ ಕಾದಿತ್ತು ಆಘಾತ

SHIVAMOGGA LIVE NEWS, 3 JANUARY 2024➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಸೊರಬ : ಮನೆಯವರು ತೋಟಕ್ಕೆ (Adike) ತೆರಳಿದ್ದ ಸಂದರ್ಭ ಬಾಗಿಲಿನ ಬೀಗ ಮುರಿದು ಚಿನ್ನಾಭರಣ, ನಗದು ಕಳ್ಳತನ ಮಾಡಲಾಗಿದೆ. ಸೊರಬ ತಾಲೂಕು ಅಂಬ್ಲಿಕೊಪ್ಪ ರಸ್ತೆಯ ಬೆನ್ನೂರು ಗ್ರಾಮದ ನಾಗರಾಜ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ.

ನಾಗರಾಜ ಅವರು ತಮ್ಮ ತೋಟದಲ್ಲಿ ಅಡಿಕೆ ಕೊಯ್ಲಿಗೆ ಮುಗಿಸಿ ಮನೆಗೆ ಮರಳಿದ್ದರು. ಆಗ ಮನೆಯ ಬಾಗಿಲು ತೆರದಿತ್ತು. ಒಳಗೆ ಹೋಗಿ ಪರಿಶೀಲಿಸಿದಾಗ ಬೀರು ಬೀಗ ಮುರಿದು ಕಳ್ಳತನ ಮಾಡಲಾಗಿತ್ತು. ಒಟ್ಟು 3.75 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಮತ್ತು ನಗದು ಕಳುವಾಗಿದೆ ಎಂದು ಆರೋಪಿಸಲಾಗಿದೆ. ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Web-Design-by-New-Web-techy

ಇದನ್ನೂ ಓದಿ » ಶಿವಮೊಗ್ಗದಲ್ಲಿ ನೀರಿನ ಸಂಪರ್ಕ ಕಡಿತದ ವಾರ್ನಿಂಗ್‌, ಕಾರಣವೇನು?

Leave a Comment