SHIVAMOGGA LIVE NEWS | 16 MAY 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIMOGA : ದೆಹಲಿ ಮತ್ತು ಅಹಮದಾಬಾದ್ಗೆ ಲಾರಿಯಲ್ಲಿ ಕಳುಹಿಸಿದ್ದ ಅಡಿಕೆ ಪೈಕಿ 10 ಕ್ವಿಂಟಾಲ್ ಅಡಿಕೆ ಕಳುವಾಗಿದೆ (THEFT). ಈ ಸಂಬಂಧ ಲಾರಿ ಚಾಲಕರ ವಿರುದ್ಧವೆ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಏ.9ರಂದು ಅಹಮದಾಬಾದ್ಗೆ 24,500 ಕೆ.ಜಿ ಅಡಿಕೆ ಕಳುಹಿಸಲಾಗಿತ್ತು. ಏ.18ರಂದು ದೆಹಲಿಗೆ 24,500 ಕೆ.ಜಿ ಅಡಿಕೆ ರವಾನಿಸಲಾಗಿತ್ತು. ಆದರೆ ದೆಹಲಿ ಮತ್ತು ಅಹಮದಾಬಾದ್ನ ಅಡಿಕೆ ವ್ಯಾಪಾರಿಗಳು ತೂಕ ಕಡಿಮೆಯಾಗಿದೆ ಎಂದು ಆರೋಪಿಸಿದ್ದರು. ಈ ಹಿನ್ನೆಲೆ ಟ್ರಾನ್ಸ್ಪೋರ್ಟ್ ಮ್ಯಾನೇಜರ್ ಎರಡು ಲಾರಿಗಳ ಚಾಲಕರ ವಿಚಾರಣೆ ಮಾಡಿದಾಗ ಅಡಿಕೆ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.
ಇದನ್ನೂ ಓದಿ – ಅಡಿಕೆ ಧಾರಣೆ | 16 ಮೇ 2024 | ಇವತ್ತು ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಿಕೆ ರೇಟ್?
ಲಾರಿ ಚಾಲಕರು ಪ್ರತಿ ಚೀಲದಿಂದ ಒಂದೆರಡು ಕೆ.ಜಿಯಷ್ಟು ಅಡಿಕೆ ಕಳ್ಳತನ ಮಾಡಿ, ಮಾರಾಟ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಟ್ರಾನ್ಸ್ಪೋರ್ಟ್ ಮ್ಯಾನೇಜರ್ ಶೇಕ್ ಉಮರ್ ಫಾರೂಕ್ ದೂರಿನಲ್ಲಿ ಆರೋಪಿಸಿದ್ದಾರೆ. ಅಂದಾಜು 2.50 ಲಕ್ಷ ರೂ. ಮೌಲ್ಯದ 10 ಕ್ವಿಂಟಾಲ್ ಅಡಿಕೆ ಕಳ್ಳತನವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಜಯನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






